Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪದವಿಗಳು ವೃತ್ತಿಯ ಮಾನದಂಡವಲ್ಲ, ಜ್ಞಾನದ...

ಪದವಿಗಳು ವೃತ್ತಿಯ ಮಾನದಂಡವಲ್ಲ, ಜ್ಞಾನದ ಸಂಕೇತ: ಜಿಫ್ರಿ ತಂಙಳ್

►ಕುಂಬ್ರ ಕೆಐಸಿಯ 4ನೇ ಸನದುದಾನ ಸಮ್ಮೇಳನ ►96 ಪಂಡಿತರಿಗೆ ಕೌಸರಿ, ಅಸ್ಲಮಿ, ಹಾಫಿಲ್ ಪದವಿ

ವಾರ್ತಾಭಾರತಿವಾರ್ತಾಭಾರತಿ24 Dec 2023 4:22 PM IST
share
ಪದವಿಗಳು ವೃತ್ತಿಯ ಮಾನದಂಡವಲ್ಲ, ಜ್ಞಾನದ ಸಂಕೇತ: ಜಿಫ್ರಿ ತಂಙಳ್

ಪುತ್ತೂರು: ಸನದು (ಪದವಿ)ಗಳು, ಪಂಡಿತ ಬಿರುದುಗಳು ಯಾವುದೇ ವೃತ್ತಿಯನ್ನು ಪಡೆದುಕೊಳ್ಳುವ ಮಾನದಂಡವಲ್ಲ. ಬದಲಿಗೆ ಇದೊಂದು ಜ್ಞಾನದ ಸಂಕೇತವಾಗಿದೆ. ಸನದು ಪಡೆದ ಪಂಡಿತರು ತಾವು ಕಲಿತ ಸಂಸ್ಥೆ ಮತ್ತು ಇದಕ್ಕಾಗಿ ಶ್ರಮಿಸಿದ ವ್ಯಕ್ತಿತ್ವಗಳನ್ನು ಸದಾ ನೆನಪಿನಲ್ಲಿರಿಸಿಕೊಳ್ಳಬೇಕು ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸೈಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದರು.

ಅವರು ಕುಂಬ್ರದ ಕೆಐಸಿ ಕ್ಯಾಂಪಸ್‍ನಲ್ಲಿ ನಡೆದ ಕರ್ನಾಟಕ ಇಸ್ಲಾಮಿಕ್ ಅಕಾಡಮಿ(ಕೆಐಸಿ) ಕುಂಬ್ರ ಇದರ 4ನೇ ವರ್ಷದ ಸನದುದಾನ ಮಹಾಸಮ್ಮೇಳನದಲ್ಲಿ ಶನಿವಾರ ರಾತ್ರಿ ಸನದುದಾನ ನೆರವೇರಿಸಿ ಮಾತನಾಡಿದರು.

ಕೆಐಸಿ ವತಿಯಿಂದ ಇಷೊಂದು ಪಂಡಿತರು ಸಮಾಜಕ್ಕೆ ಅರ್ಪಣೆಯಾಗಿರುವುದು ಅದ್ವಿತೀಯ ಸಂಗತಿಯಾಗಿದ್ದು, ಇದೊಂದು ಪುಣ್ಯದಾಯಕ ವಿಚಾರವಾಗಿದೆ. ಪ್ರಪಂಚದಲ್ಲಿ ಹಲವಾರು ಪದಿವಿಗಳಿದ್ದು, ಇವೆಲ್ಲಕ್ಕೂ ಮೀರಿದ ಉನ್ನತ ಪದವಿ ನುಬುವ್ವತ್ ಪದವಿಯಾಗಿದೆ. ಅದಕ್ಕೆ ಸರಿಸಾಟಿಯಾದ ಯಾವುದೇ ಪದವಿಗಳಿಲ್ಲ ಎಂದರು.

ಕೇವಲ ವಸ್ತ್ರಧಾರಣೆಯಿಂದ ಯಾರೂ ಪಂಡಿತರು ಎನಿಸಿಕೊಳ್ಳುವುದಿಲ್ಲ. ಸರ್ವ ಸಮಯದಲ್ಲೂ ಸೃಷ್ಠಿಕರ್ತನ ಸ್ಮರಣೆಯೊಂದಿಗೆ ಸಹೃದಯತೆ, ದೋಷರಹಿತ ಬದುಕು, ಉತ್ತಮ ಸ್ವಭಾವದ ಮೂಲಕ ಪಂಡಿತರು ಮಾದರಿ ಜೀವನ ನಡೆಸಬೇಕು ಎಂದರು.

ಉತ್ತಮ ಅಡಿಪಾಯಗಳೊಂದಿಗೆ ಶಿಕ್ಷಣ ಪಡೆದಿರುವ ಇಂತಹ ಪಂಡಿತರು ಇಂದಿನ ಸಮಾಜಕ್ಕೆ ಅನಿವಾರ್ಯವಾಗಿದೆ. ಪದವಿ ಪಡೆದಿರುವ ಎಲ್ಲಾ ಪಂಡಿತರು ಧಾರ್ಮಿಕ ಕಾರ್ಯವನ್ನು ಪೂರ್ಣವಾಗಿ ಅನುಷ್ಠಾನಗೊಳಿಸುವ ಕಾರ್ಯ ಮಾಡಬೇಕು ಎಂದರು.

ಸಮಸ್ತ ಕೇಂದ್ರ ಮುಶಾವರದ ಸದಸ್ಯ ಅಬ್ದುಲ್ಲ ಫೈಝಿ ಕೊಡಗು ಸಮ್ಮೇಳನ ಉದ್ಘಾಟಿಸಿದರು. ಪುತ್ತೂರು ಕೇಂದ್ರ ಜುಮ್ಮಾ ಮಸೀದಿಯ ಮುದರ್ರಿಸ್ ಸೈಯ್ಯದ್ ಅಹ್ಮದ್ ಪೂಕೋಯ ತಂಙಳ್ ದುವಾ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರದ ಸದಸ್ಯ ಶೈಖುನಾ ಅಬ್ದುಲ್ ಸಲಾಂ ಬಾಖವಿ ಮಲಪ್ಪುರಂ ಮುಖ್ಯ ಪ್ರಭಾಷಣ ನಡೆಸಿದರು. ಕೆಐಸಿ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅಧ್ಯಕ್ಷತೆ ವಹಿಸಿದ್ದರು.

ಸಮಸ್ತ ಕೇಂದ್ರ ಮುಶಾವರದ ಸದಸ್ಯ ಉಸ್ಮಾನ್ ಫೈಝಿ ತೋಡಾರ್, ವಾಗ್ಮಿ ಕೆ.ಆರ್. ಹುಸೈನ್ ದಾರಿಮಿ, ಉದ್ಯಮಿ ಇಕ್ಬಾಲ್ ಕೋಲ್ಪೆ, ಕೆಐಸಿ ನಿರ್ದೇಶಕ ಮೊಯ್ದೀನ್ ಕುಟ್ಟಿ ಹಾಜಿ, ಉದ್ಯಮಿ ಇಕ್ಬಾಲ್ ಬಾಳಿಲ ಶುಭ ಹಾರೈಸಿದರು.

ವೇದಿಕೆಯಲ್ಲಿ ಅಬೂಬಕ್ಕರ್ ಮದನಿ ಸಾಲೆತ್ತೂರು, ಉಸ್ಮಾನ್ ಮದನಿ ಕೊಡಿಪ್ಪಾಡಿ, ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಹನೀಫ್ ಹುದವಿ, ಬಾವಾ ಹಾಜಿ ಕೂರ್ನಡ್ಕ, ಎಲ್.ಟಿ. ರಝಾಕ್ ಹಾಜಿ, ಅಬ್ದುಲ್ ರಹಿಮಾನ್ ಅಝಾದ್, ತ್ವಾಹಿರ್ ಸಾಲ್ಮರ, ಫೈರೋಝ್ ಪರ್ಲಡ್ಕ, ಅಮ್ಜದ್ ಖಾನ್ ಪೋಳ್ಯ, ಮಹಮ್ಮದ್ ಹಾಜಿ ಕುಕ್ಕುವಳ್ಳಿ, ಅಬ್ದುಲ್ ರಝಾಕ್ ಹಾಜಿ ಮಣಿಲ, ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಮಹಮ್ಮದ್ ಹಾಜಿ ಮುಂಡೋಳೆ, ಸೌಶದ್ ಪೋಳ್ಯ, ತಲ್ಹತ್ ಪರ್ಲಡ್ಕ, ಆಶಿಫ್ ಮರೀಲ್, ಹಕೀಂ ಪರ್ತಿಪ್ಪಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ನೂತನ ಯೋಜನೆಯನ್ನು ಉದ್ಯಮಿ ಅಬ್ದುಲ್ ಲತೀಫ್ ಗುರುಪುರ ಅನಾವರಣಗೊಳಿಸಿದರು.

ಕೆಐಸಿ ಸಂಘಟನಾ ಕಾರ್ಯದರ್ಶಿ ಅನೀಸ್ ಕೌಸರಿ ಸ್ವಾಗತಿಸಿದರು. ಸ್ವಾಗತ ಸಮಿತಿ ಸಂಚಾಲಕ ಅಶ್ರಫ್ ಶಾ ಮಾಂತೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕೆಐಸಿ ಪ್ರಾಧ್ಯಾಪಕ ಸತ್ತಾರ್ ಕೌಸರಿ ವಂದಿಸಿದರು. ಉಸ್ತಾದ್ ಕೆಎಂಎ ಕೊಡುಂಗಾಯಿ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X