Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಂದಿನ ಪರಿಶಿಷ್ಟ ಜಾತಿ ಪಟ್ಟಿ ಪ್ರಕಾರ...

ಹಿಂದಿನ ಪರಿಶಿಷ್ಟ ಜಾತಿ ಪಟ್ಟಿ ಪ್ರಕಾರ ಒಳಮೀಸಲಾತಿಗೆ ಆಗ್ರಹ

ಜಾತಿನಿಂದಕ ಶಬ್ಧಕ್ಕೆ ಮನ್ನಣೆ ನೀಡದಿರಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 May 2025 2:20 PM IST
share
ಹಿಂದಿನ ಪರಿಶಿಷ್ಟ ಜಾತಿ ಪಟ್ಟಿ ಪ್ರಕಾರ ಒಳಮೀಸಲಾತಿಗೆ ಆಗ್ರಹ

ಮಂಗಳೂರು, ಮೇ 20: ರಾಜ್ಯದ ಪರಿಶಿಷ್ಟ ಜಾತಿಗಳವರಿಗೆ ಒಳ ಮೀಸಲಾತಿಗಾಗಿ ನಿವೃತ್ತ ನ್ಯಾಯಾಧೀಶ ಎಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗ ನಡೆಸುತ್ತಿರುವ ಸಮೀಕ್ಷೆಯ ಸಂದರ್ಭ ಈ ಹಿಂದಿನ ಸಂವಿಧಾನ ಬದ್ಧವಾಗಿ ನಿಗದಿಪಡಿಸಲಾದ 101 ಉಪಜಾತಿಗಳ ಪಟ್ಟಿಯ ಪ್ರಕಾರವೇ ಒಳ ಮೀಸಲಾತಿ ಒದಗಿಸಬೇಕು. ಜಾತಿ ನಿಂದಕ ಶಬ್ಧಗಳಾದ ‘ಮನ್ಸ’ ಅಥವಾ ‘ದಿಕ್ಕ’ಎಂಬ ಪದಗಳು ಉಪ ಜಾತಿಗಳಲ್ಲ. ಈ ಪದಗಳನ್ನು ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮನ್ನಣೆ ನೀಡಬಾರದು ಎಂದು ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಆಗ್ರಹಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಎಂ. ಸೀನ ಮಾಸ್ತಿಕಟ್ಟೆ, ಈ ಮೇಲಿನ ಪದಗಳು ತುಳುನಾಡಿಲ್ಲಿ ಜಾತಿ ನಿಂದನಾ ಶಬ್ದಗಳಾಗಿವೆ. ಯಾವುದೇ ಸರಕಾರ ಕಡತಗಳಲ್ಲಿ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಜಾತಿಗಳ ಉಲ್ಲೇಖವಿಲ್ಲ ಎಂದು ಹೇಳಿದರು.

ಜಾತಿ ಪಟ್ಟಿಗೆ ಸೇರ್ಪಡೆ ಮಾಡುವ ಅಥವಾ ತೆರವುಗೊಳಿಸುವ ಅಧಿಕಾರ ಲೋಕಸಭೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧಿಕಾರ ವ್ಯಾಪ್ತಿಗೊಳಪಟ್ಟಿದೆ. ಮನ್ಸ ಸಂಘದ ಸಮಿತಿಯ ಅಧ್ಯಕ್ಷರು ಮನ್ಸ ಸಮಾಜವು ಕರಾವಳಿ ಭಾಗದಲ್ಲಿ ಸುಮಾರು 5 ಲಕ್ಷ ಜನ ಇರುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ತಮ್ಮ ಗುಂಪಿನಲ್ಲಿ ಐದು ಲಕ್ಷ ಜನ ಸದಸ್ಯರನ್ನು ಸಾಬೀತು ಪಡಿಸಲು ನಾವು ಬಹಿರಂಗ ಸವಾಲು ಹಾಕುತ್ತಿದ್ದೇವೆ. ಈ ರೀತಿ ಗೊಂದಲ ಸೃಷ್ಟಿಸುವ ಪ್ರಕ್ರಿಯೆ ಮುಂದುವರಿದಲ್ಲಿ ಕಾನೂನು ಕ್ರಮ ವಹಿಸಲಾಗುವುದು. ಈ ಬೇಡಿಕೆಗೆ ಮನ್ನಣೆ ನೀಡಿದರೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಅವರು ಹೇಳಿದರು.

ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮೇ 28ರಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಕರಾವಳಿ ಭಾಗದಲ್ಲಿ ಆದಿ ದ್ರಾವಿಡ ಸಮಾಜದವರು ಈ ಜಾತಿ ನಿಂದಕ ಶಬ್ಧ ಸೇರ್ಪಡೆಯ ಬೇಡಿಕೆಯ ಬಗ್ಗೆ ಆಕ್ರೋಶಿತರಾಗಿದ್ದಾರೆ. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸರಕಾರಿ ಉದ್ಯೋಗಿಗಳು, ರಾಜಕಾರಣಿಗಳಿಗೆ ಪರಿಶಿಷ್ಟ ಜಾತಿಯ ಆದಿ ದ್ರಾವಿಡ ಜಾತಿಗೆ ಸೇರಿದವರಿಗೆ ಸರಕಾರಿ ಸವಲತ್ತು ಪಡೆಯಲು ತೊಂದರೆಯಾಗಲಿದೆ. ಇದು ಆದಿ ದ್ರಾವಿಡ ಸಮುದಾಯಕ್ಕೆ ಮಾಡುವ ಅನ್ಯಾಯವಾಗಿರುತ್ತದೆ. ಇದೇ ವೇಳೆ ಅನುಬಂಧ 2 ಬಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಆದಿ ದ್ರಾವಿಡ ಪರಿಶಿಷ್ಟ ಜಾತಿಯ ಉಪ ಜಾತಿಗಳನ್ನು ಕೈಬಿಡಲಾಗಿದ್ದು, ಇದು ಈ ಜಾತಿಗಳವರಿಗೆ ಮಾಡಿದ ಅನ್ಯಾಯ ಹಾಗೂ ಕಾನೂನು ಬಾಹಿರ ಕೃತ್ಯವಾಗಿರುತ್ತದೆ. ಆದ್ದರಿಂದ ಹಿಂದಿನ 101 ಪರಿಶಿಷ್ಟ ಜಾತಿ ಪಟ್ಟಿ ಪ್ರಕಾರವೇ ಒಳ ಮೀಸಲಾತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಉಪ ಸಂಚಾಲಕ ಎಸ್.ಪಿ. ಆನಂದ, ಜಿಲ್ಲಾ ಕಾರ್ಯದರ್ಶಿ ಜಿನ್ನಪ್ಪ ಬಂಗೇರ, ಜತೆ ಕಾರ್ಯದರ್ಶಿ ಸುರೇಶ್ ಬಳ್ಳಾಲ್‌ಬಾಗ್, ಜಿಲ್ಲಾ ಸಂಘಟನಾ ಸಂಚಾಲಕ ಜಗದೀಶ್ ಪಾಂಡೇಶ್ವರ,ಕಾರ್ಯಕಾರಿ ಸಮಿತಿ ಸದ್ಯರಾದ ಲಕ್ಷ್ಮಣ, ನವೀನ್ ಬಳ್ಳಾಲ್‌ಬಾಗ್ ಮೊದಲಾದವರು ಉಪಸ್ಥ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X