Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿ ಸುಂದರ ರಾಮ್ ಶೆಟ್ಟಿ ಸ್ಮಾರಕ...

ಮುಲ್ಕಿ ಸುಂದರ ರಾಮ್ ಶೆಟ್ಟಿ ಸ್ಮಾರಕ ಮರುಸ್ಥಾಪನೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Jun 2026 2:30 PM IST
share
ಮುಲ್ಕಿ ಸುಂದರ ರಾಮ್ ಶೆಟ್ಟಿ ಸ್ಮಾರಕ ಮರುಸ್ಥಾಪನೆಗೆ ಒತ್ತಾಯ

ಮಂಗಳೂರು, ಜೂ.13: ಮುಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಪಕ್ಕದಲ್ಲಿದ್ದ ಸುಂದರರಾಮ್ ಶೆಟ್ಟಿಯವರ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅಗಲೀಕರಣದ ಹೆಸರಿನಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಅಥವಾ ಸ್ಥಳಾಂತರ ಮಾಡದೆ ಕೆಡವಿ ಹಾಕಿರುವುದು ಖಂಡನೀಯ. ಅವರ ನೆನಪನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು ಎಂದು ಮುಲ್ಕಿ ಸುಂದರರಾಮ್ ಶೆಟ್ಟಿ ಅವರ ಅಭಿಮಾನಿ ಬಳಗ ಆಗ್ರಹಿಸಿದೆ.

ಶನಿವಾರ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಸಮಾಧಿ ಕೆಡವುವ ವೇಳೆ ಸುಂದರರಾಮ್ ಶೆಟ್ಟಿ ಅವರ ಕುಟುಂಬ ಸದಸ್ಯರು, ಅಭಿಮಾನಿಗಳು, ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ. ಇದು ಮತ್ತಷ್ಟು ನೋವುಂಟು ಮಾಡುವ ಸಂಗತಿಯಾಗಿದೆ. ಸುಂದರ್ ರಾಮ್ ಶೆಟ್ಟಿಯವರು ಒಬ್ಬ ಬ್ಯಾಂಕರ್ ಮಾತ್ರವಲ್ಲದೆ, ಕರಾವಳಿ ಕರ್ನಾಟಕದ ಸಾವಿರಾರು ಕುಟುಂಬಗಳ ಬದುಕನ್ನು ರೂಪಿಸಿದ ಸಮಾಜ ನಿರ್ಮಾತೃ, ಶಿಕ್ಷಣ ಪ್ರೇಮಿ ಹಾಗೂ ಉದ್ಯೋಗದಾತರಾಗಿದ್ದರು. ಆದ್ದರಿಂದ ಅವರ ಸ್ಮಾರಕ ಸಂರಕ್ಷಿಸುವುದು ಸರಕಾರದ ನೈತಿಕ ಜವಾಬ್ದಾರಿಯಾಗಿದೆ ಎಂದರು.

ಸರಕಾರ ಮುಲ್ಕಿ ಅಥವಾ ಬಪ್ಪನಾಡು ವ್ಯಾಪ್ತಿಯ ಸೂಕ್ತ ಸ್ಥಳದಲ್ಲಿ ಕನಿಷ್ಠ ಒಂದು ಎಕರೆ ಜಾಗವನ್ನು ಸ್ವಾಧೀನಪಡಿಸಿಕೊಂಡು ಒಂದು ಭಾಗದಲ್ಲಿ ಅವರ ಸಮಾಧಿಯನ್ನು ಮರುಸ್ಥಾಪಿಸಬೇಕು. ಇನ್ನೊಂದು ಕಡೆಯಲ್ಲಿ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆ ಮತ್ತು ಸರಕಾರದ ಉನ್ನತ ಹುದ್ದೆಗಳಾದ ಐಎಎಸ್, ಕೆಎಎಸ್, ಐಪಿಎಸ್ ಹಾಗೂ ನ್ಯಾಯಾಂಗ ಸೇವೆಗಳ ಪರೀಕ್ಷೆಗಳಿಗೆ ತಯಾರಾಗುವ ಯುವಕರಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುಂದರರಾಮ್ ಶೆಟ್ಟಿ ಅಭಿಮಾನಿ ಬಳಗದ ನವೀನ್ ರೈ, ಬಾಲಕೃಷ್ಣ ರೈ ಹಾಗೂ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.

Tags

Mulki Sundar Ram Shetty
share
ವಾರ್ತಾಭಾರತಿ
ವಾರ್ತಾಭಾರತಿ
Next Story
X