ಧರ್ಮಸ್ಥಳ ಪ್ರಕರಣ: ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರ
ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ಆರಂಭ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ವರೆಯಿಂದ 12:45 ಯವರೆಗೆ ನಡೆದ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.
ಎರಡನೆಯ ಸ್ಥಳದ ಕಾರ್ಯಾಚರಣೆ ಇನ್ನೂ ಪೂರ್ಣಗೊಂಡಿದೆಯೇ ಎಂದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿದು ಬಂದಿದೆ
Next Story





