ಮಂಗಳೂರು ಮಹಾನಗರಪಾಲಿಕೆ ನೋಂದಾಯಿತ ಗುತ್ತಿಗೆದಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೋಂದಾಯಿತ ಗುತ್ತಿಗೆದಾರರ ಸಂಘ (ರಿ.) ಇದರ ವಾರ್ಷಿಕ ಮಹಾಸಭೆಯು ಜುಲೈ 8ರಂದು ಪತ್ತುಮುಡಿ ಸೌಧದ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹುಸೈನ್ ಶೋಹಿಬ್, ಉಪಾಧ್ಯಕ್ಷರಾಗಿ ಸುರೇಶ್ ರಾವ್, ಪ್ರಧಾನ ಕಾರ್ಯದರ್ಶಿಯಾಗಿ ರವಿರಾಜ್ ಶೆಟ್ಟಿ, ಉಪ ಕಾರ್ಯದರ್ಶಿಯಾಗಿ ಖಾಲಿದ್, ಕೋಶಾಧಿಕಾರಿಯಾಗಿ ಪ್ರತೀಕ್ ಪೂಜಾರಿ, ಉಪ ಕೋಶಾಧಿಕಾರಿಯಾಗಿ ಮಹೇಶ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಸುಲೈಮಾನ್ ಆಸೀಫ್ ಆಯ್ಕೆಯಾದರು.
Next Story




