ಡಾ. ಕೋಟ ಶಿವರಾಮ ಕಾರಂತರ ಬಗ್ಗೆ ಪ್ರಬಂಧ, ಅಂಚೆ ಕಾರ್ಡ್ನಲ್ಲಿ ಚಿತ್ರ ರಚನಾ ಸ್ಪರ್ಧೆ

ಮಂಗಳೂರು, ಸೆ.21: ಕಲ್ಕೂರ ಪ್ರತಿಷ್ಠಾನ, ಮಂಗಳೂರು ಇದರ ಆಶ್ರಯದಲ್ಲಿ 2023, ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಸಮಾರಂಭವು ಜರಗಲಿದ್ದು, ಇದರ ಅಂಗವಾಗಿ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಪ್ರೌಢಶಾಲೆ, ಕಾಲೇಜು ಹಾಗೂ ಮುಕ್ತ ಎಂಬ 3 ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಅಕ್ಟೋಬರ್ 6, 2023ರೊಳಗಾಗಿ ಸ್ವ ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆ ಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಬಹುದಾಗಿದೆ.
ಪ್ರೌಢಶಾಲೆ ವಿಭಾಗ ಪ್ರಬಂಧದ ವಿಷಯ -ಕಾರಂತರ ವಿಜ್ಞಾನ ಸಾಹಿತ್ಯ, ಕಾಲೇಜು ವಿಭಾಗ- ಕಾರಂತರು ಮತ್ತು ಯಕ್ಷಗಾನ, ಮುಕ್ತ ವಿಭಾಗ - ‘ಮೂಕಜ್ಜಿಯ ಕಸುಗಳು’ ವೈಚಾರಿಕತೆ, ವಿಶ್ಲೇಷಣೆ ಅಂಚೆ ಕಾರ್ಡಿನಲ್ಲಿ ಕಾರಂತರ ಚಿತ್ರ ರಚನಾ ಸ್ಪರ್ಧೆ ಶಿವರಾಮ ಕಾರಂತರ ಜನ್ಮದಿನೋತ್ಸವ ಅಂಗವಾಗಿ ಅಂಚೆ ಕಾರ್ಡಿನಲ್ಲಿ ಕಾರಂತರ ಚಿತ್ರ ರಚನಾ ಸರ್ಧೆ ಯನ್ನು ಏರ್ಪಡಿಸಲಾಗಿದೆ.
ಎಸ್ಎಸ್ಎಲ್ಸಿ ವರೆಗಿನ ವಿಭಾಗ ಮತ್ತು ಮುಕ್ತ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗು ವುದು. ಪೆನ್ಸಿಲ್ನಿಂದ ರಚಿಸಿದ ‘‘ಕಪ್ಪು-ಬಿಳುಪು’’ ಚಿತ್ರಗಳನ್ನು ಮಾತ್ರ ರಚಿಸಬೇಕು. ಅಕ್ಟೋಬರ್ 6 ರೊಳಗಾಗಿ ಅಂಚೆಕಾರ್ಡ್ಗಳನ್ನು ಸ್ವ ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ, ಜಾನ್ಚಂದ್ರನ್ (ಸಂಚಾಲಕರು) ಅಂಚೆ ಕಾರ್ಡಿನಲ್ಲಿ ಚಿತ್ರ ರಚನಾ ಸ್ಪರ್ಧಾ ವಿಭಾಗ, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







