Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ|ಎಸೆಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ...

ದ.ಕ|ಎಸೆಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ: ಜಿಲ್ಲಾಧಿಕಾರಿ, ಸಿಇಒ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ15 May 2024 2:25 PM IST
share

ಮಂಗಳೂರು, ಮೇ 15: ದ.ಕ. ಜಿಲ್ಲೆಯು ಪ್ರಸಕ್ತ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವೀಡಿಯೋ ಮೂಲಕ ಅಭಿನಂದನೆ ಸಲ್ಲಿಸಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಜಿಲ್ಲೆಯು 2024ನೆ ಸಾಲಿನ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಹಾಗೂ ಎಸೆಸೆಲ್ಸಿಯಲ್ಲಿ ದ್ವಿತೀಯ ಸ್ಥಾನ ಪಡೆದಿರುವುದು ಖುಷಿಯ ವಿಚಾರ. ಇದಕ್ಕಾಗಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಇಲಾಖಾ ಸಿಬ್ಬಂದಿಗೆ ಅಧಿಕಾರಿ, ಸಿಬ್ಬಂದಿ ಹೆಚ್ಚಿನ ಶ್ರಮ ವಹಿಸಿದ್ದು, ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದಾದರೆ.

ಎಸೆಸೆಲ್ಸಿಯಲ್ಲಿ ಕಳೆದ ವರ್ಷ ಶೇ. 100 ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 125ರಿಂದ ಈ ಬಾರಿ 270ಕ್ಕೆ ಏರಿಕೆ ಆಗಿರುವುದು ಗಮನಾರ್ಹ ಬೆಳವಣಿಗೆ. ಅದರಲ್ಲೂ ಶೇ. 100 ಫಲಿತಾಂಶ ಪಡೆದ ಸರಕಾರಿ ಶಾಲೆಗಳ ಸಂಖ್ಯೆ 35ರಿಂದ 84ಕ್ಕೆ ಏರಿಕೆಯಾಗಿದೆ. ಪಿಯುಸಿಯಲ್ಲಿ ಕಳೆದ ವರ್ಷ 37 ಕಾಲೇಜುಗಳು ಶೇ. 100 ಫಲಿತಾಂಶ ಪಡೆದಿದ್ದರೆ ಈ ಬಾರಿ ಅದು 59ಕ್ಕೆ ಏರಿಕೆಯಾಗಿರುವುದು ಉತ್ತಮ ವಿಚಾರ ಎಂದು ಅವರು ಹೇಳಿದ್ದಾರೆ.

ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಪ್ರತಿಕ್ರಿಯಿಸಿ, ಪಿಯುಸಿಯಲ್ಲಿ ಪ್ರಥಮ ಹಾಗೂ ಎಸೆಸೆಲ್ಸಿಯಲ್ಲಿ ದ್ವಿತೀಯ ಸ್ಥಾನ ಪಡೆಯುವಲ್ಲಿ ಈ ಬಾರಿ ಸಾಕಷ್ಟು ಪೂರ್ವ ಸಿದ್ಧತೆಗಳನ್ನು ಇಲಾಖೆಯ ಮೂಲಕ ಮಾಡಲಾಗಿತ್ತು. ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಹಿಂದಿನ ವರ್ಷದಲ್ಲಿ ಶಾಲೆಗಳಲ್ಲಿ ದೊರಕಿದ ಫಲಿತಾಂಶವನ್ನು ಪರಾಮರ್ಶಿಸಿ ಎ, ಬಿ ಮತ್ತು ಸಿ ವಿಭಾಗವಾಗಿ ವರ್ಗೀಕರಿಸಲಾಗಿತ್ತು. ಸಿ ವಿಭಾಗದ ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಅಲ್ಲಿನ ಶಿಕ್ಷಕರು, ವಿಷಯದ ಕುರಿತಾದ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಯಾವ ವಿಷಯದಲ್ಲಿ ಯಾವ ಶಾಲೆ ಕಡಿಮೆ ಫಲಿತಾಂಶವನ್ನು ಪಡೆದಿದೆ ಎಂದು ಗುರುತಿಸಿ, ಆ ಶಾಲೆಗಳಲ್ಲಿ ವಿಶೇಷ ಕಾಳಜಿ ವಹಿಸಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಒಂದು ಗಂಟೆ ವಿಶೇಷ ತರಬೇತಿ ನೀಡುವ ಕಾರ್ಯ ನಡೆಸಲಾಗಿತ್ತು. ಈ ಮೂಲಕ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಈ ಮೂಲಕ ಕಳೆದ ಬಾರಿಯ 17ನೆ ಸ್ಥಾನದಿಂದ ಈ ಬಾರಿ 2ನೆ ಸ್ಥಾನಕ್ಕೇರಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು, ಇಲಾಖೆ, ಶಿಕ್ಷಕರ ಜತೆ ಪೋಷಕರಪಾತ್ರವೂ ಪ್ರಮುಖವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X