Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ್ವೇಷ ರಾಜಕಾರಣದ ಭಾಷಣಗಳು ಸೋಲಲಿದೆ:...

ದ್ವೇಷ ರಾಜಕಾರಣದ ಭಾಷಣಗಳು ಸೋಲಲಿದೆ: ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ

ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Jan 2025 10:18 PM IST
share
ದ್ವೇಷ ರಾಜಕಾರಣದ ಭಾಷಣಗಳು ಸೋಲಲಿದೆ: ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ

ಮಂಗಳೂರು, ಜ.10: ಯಾರು, ಎಷ್ಟೇ ದ್ವೇಷ ರಾಜಕಾರಣದ ಭಾಷಣಗಳನ್ನು ಮಾಡಿದರೂ ಕೂಡ ಅದಕ್ಕೆ ಒಂದಲ್ಲೊಂದು ದಿನ ಅಂತ್ಯ ಸಿಗಲಿದೆ. ಹಾಗೇ ಈ ದ್ವೇಷ ರಾಜಕಾರಣದ ಭಾಷಣಗಳು ಸೋಲಲಿದೆ, ಪ್ರಜಾಪ್ರಭುತ್ವ ಗೆಲ್ಲಲಿದೆ ಮತ್ತು ಭಾರತೀಯತೆ ಉಳಿಯಲಿದೆ ಎಂದು ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ ಆಶಾಭಾವನೆ ವ್ಯಕ್ತಪಡಿಸಿದರು.

ಮುಸ್ಲಿಮ್ ಲೇಖಕರ ಸಂಘವು ಮರ್ಹೂಂ ಯು.ಟಿ. ಫರೀದ್ ಸ್ಮರಣಾರ್ಥ ಹಿರಿಯ ಸಾಹಿತಿ ಡಾ. ಮಿರ್ಜಾ ಬಶೀರ್‌ಗೆ ನಗರದ ಸಂತ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಸಹೋದಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ 2023ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ʼದ್ವೇಷ ರಾಜಕಾರಣ ಮತ್ತು ಪ್ರಜಾತಂತ್ರದ ಭವಿಷ್ಯʼ ಎಂಬ ವಿಷಯದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.


ಜಗತ್ತಿನಲ್ಲಿ ಕ್ರಾಂತಿಯಾಗಲು, ಹೋರಾಟ ನಡೆಯಲು, ದೇಶಗಳು ಸ್ವತಂತ್ರಗೊಳ್ಳಲು ಭಾಷಣಗಳು ಪ್ರಮುಖ ಪಾತ್ರ ವಹಿಸಿವೆ. ಆದರೆ ದ್ವೇಷದ ಭಾಷಣಗಳಿಂದ ಕೋಮುಗಲಭೆ, ನರಮೇಧ ಮತ್ರ ನಡೆದಿದೆ. ಅಂದರೆ ಹಿಟ್ಲರ್‌ನಿಂದ ನರಮೇಧ ನಡೆದಿದ್ದರೆ, ಗಾಂಧೀಜಿ, ನೆಹರೂ, ಪಟೇಲರ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸಿರುವುದು ಎಲ್ಲರಿಗೂ ತಿಳಿದ ವಿಚಾರವಾಗಿದೆ. ನೈತಿಕತೆ, ಭಾವನೆಗಳು, ಸತ್ಯಾಂಶಗಳಿಂದ ಕೂಡಿದ ಭಾಷಣಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ ವಾಗಿದೆ ಎಂದು ಭವ್ಯಾ ನರಸಿಂಹ ಮೂರ್ತಿ ಅಭಿಪ್ರಾಯಪಟ್ಟರು.


ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ದ್ವೇಷದ ಭಾಷಣಗಳು ಹೆಚ್ಚಾಗುತ್ತಿವೆ. ಮುಸ್ಲಿಮರು, ದಲಿತರು, ಮಹಿಳೆಯರ ವಿರುದ್ಧ ಪ್ರಧಾನಿಯ ದ್ವೇಷದ ಭಾಷಣಗಳು ಮೇಲೈಸುತ್ತಿವೆ. ಇಂತಹ ಅನ್ಯಾಯ, ಅಕ್ರಮದ ವಿರುದ್ಧ ಹೋರಾಟ ಮಾಡಿದ ಅದೆಷ್ಟೋ ಮಂದಿ ಯುಎಪಿಎ ಕಾಯ್ದೆಯಡಿ ಬಂಧಿಸಲ್ಪಟ್ಟು ಇಂದಿಗೂ ಜೈಲಿನಲ್ಲಿದ್ದಾರೆ. ದ್ವೇಷದ ಭಾಷಣಗಳನ್ನು ಮಾಡಿ ಸಮಾಜವನ್ನು ವಿಭಜಿಸಿದ ರಾಜಕಾರಣಿಗಳು ಸಂಸತ್ತಿನೊಳಗಿದ್ದಾರೆ. ಈ ವಿಪರ್ಯಾಸಕ್ಕೆ ಅಂತ್ಯ ಹಾಕಬೇಕಿದೆ ಎಂದು ಭವ್ಯಾ ನರಸಿಂಹ ಮೂರ್ತಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ದ್ವೇಷದಿಂದ ಕೂಡಿತ್ತು ಎಂದು ಅಮೇರಿಕಾದ ಖಾಸಗಿ ಸಂಸ್ಥೆಯೊಂದರ ವರದಿ ತಿಳಿಸಿದೆ. ಆದರೆ ದೇಶದ ಚುನಾವಣಾ ಆಯೋಗವು ಇದರ ವಿರುದ್ಧ ಕ್ರಮಕೈಗೊಳ್ಳಲೇ ಇಲ್ಲ. ಐಟಿ, ಈಡಿ ಮೂಲಕ ಬಿಜೆಪಿಯೇತರ ರಾಜ್ಯ ಸರಕಾರ ಗಳನ್ನು ಅಸ್ಥಿರಗೊಳಿಸಿದಾಗಲೂ ಚುನಾವಣಾ ಆಯೋಗವು ಮೌನಕ್ಕೆ ಶರಣಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂವಿಧಾನವನ್ನು ಬುಡಮೇಲು ಮಾಡುವ ಈ ದ್ವೇಷ ರಾಜಕಾರಣದ ವಿರುದ್ಧ ಸಾಹಿತಿಗಳು, ಪತ್ರಕರ್ತರು, ಬುದ್ಧಿಜೀವಿಗಳು ಧ್ವನಿ ಎತ್ತಬೇಕು. ಜನರೂ ಕೂಡ ಸುಶಿಕ್ಷಿತರಾಗಬೇಕು, ಎಚ್ಚೆತ್ತುಕೊಳ್ಳಬೇಕು. ಸಮಾನ ಮನಸ್ಕರು ಸೇರಿ ಪ್ರಜಾಪ್ರಭುತ್ವ ವನ್ನು ಗಟ್ಟಿಗೊಳಿಸುವ ಮೂಲಕ ದ್ವೇಷದ ರಾಜಕಾರಣಕ್ಕೆ ಸೋಲುಣಿಸಬೇಕು ಎಂದು ಭವ್ಯಾ ನರಸಿಂಹ ಮೂರ್ತಿ ಕರೆ ನೀಡಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X