Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ʼಹಿಂದೂಗಳನ್ನು ಸೈನಿಕೀಕರಣಗೊಳಿಸುವʼ ಸಭೆ...

ʼಹಿಂದೂಗಳನ್ನು ಸೈನಿಕೀಕರಣಗೊಳಿಸುವʼ ಸಭೆ ಆಯೋಜಿಸಿದ ಅಖಿಲ ಭಾರತ ಹಿಂದೂ ಮಹಾಸಭಾ

►ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆ ವೈರಲ್ ►ಸಂವಿಧಾನ ವಿರೋಧಿ ಸಭೆಗೆ ಅವಕಾಶ ನೀಡಿರುವ ಸರಕಾರದ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ10 May 2024 1:01 PM IST
share
ʼಹಿಂದೂಗಳನ್ನು ಸೈನಿಕೀಕರಣಗೊಳಿಸುವʼ ಸಭೆ ಆಯೋಜಿಸಿದ ಅಖಿಲ ಭಾರತ ಹಿಂದೂ ಮಹಾಸಭಾ

ಬೆಂಗಳೂರು: "ಹಿಂದೂ ರಾಷ್ಟ್ರ ನಿರ್ಮಿಸುವ ಹಾಗೂ ಹಿಂದೂಗಳನ್ನು ಸೈನಿಕೀಕರಣಗೊಳಿಸುವ" ಪ್ರತಿಜ್ಞೆ ಕೈಗೊಳ್ಳಲೆಂದು ಅಖಿಲ ಭಾರತ ಹಿಂದೂ ಮಹಾಸಭಾವು ಜೂನ್ 16ರಂದು ಮಂಗಳೂರಿನ ಕದ್ರಿ ಯೋಗೇಶ್ವರ ಮಠದಲ್ಲಿ ಸಭೆಯೊಂದನ್ನು ಆಯೋಜಿಸಿದೆ ಎನ್ನಲಾಗಿದ್ದು, ಇದರ ಆಹ್ವಾನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಖಂಡ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮತ್ತು ಕರ್ನಾಟಕ ರಾಜ್ಯದ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದ ರಾಜ್ಯಮಟ್ಟದ ಬೃಹತ್ ಸಭೆ ಇದಾಗಿದ್ದು, ಮುಖ್ಯ ಅತಿಥಿಯಾಗಿ ಶ್ರೀ ರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಆಹ್ವಾನಿಸಿದೆ. ಸಮಸ್ತ ಹಿಂದೂಗಳನ್ನು ಒಗ್ಗೂಡಿಸಲು ಈ ಸಭೆಯಲ್ಲಿ ಮುತಾಲಿಕ್ ಉಪಸ್ಥಿತಿ ಅಮೂಲ್ಯವಾದುದು ಎಂದು ವೈರಲ್ ಆಗಿರುವ ಆಹ್ವಾನ ಪತ್ರಿಕೆಯಲ್ಲಿ ಅಖಿಲ ಭಾರತ ಮಹಾಸಭಾ ಮನವಿ ಮಾಡಿದೆ.

ಅಖಂಡ ಹಿಂದೂ ರಾಷ್ಟ್ರ ನಿರ್ಮಾಣದ ಪ್ರತಿಜ್ಞೆಗಾಗಿ ನಡೆಯುವ ಈ ಸಭೆಯು ಸಂವಿಧಾನ ವಿರೋಧಿ ಧೋರಣೆಯನ್ನು ಹೊಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಜನರು, ಈ ಸಭೆಯ ಕುರಿತು ಸರಕಾರ, ಪೊಲೀಸ್ ಇಲಾಖೆ ಹಾಗೂ ಗುಪ್ತಚರ ಇಲಾಖೆಗಳು ತಳೆದಿರುವ ನಿಷ್ಕ್ರಿಯ ಧೋರಣೆಯನ್ನು ಖಂಡಿಸಿದ್ದಾರೆ.

“ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ಮಾಡುತ್ತಾರಂತೆ, ಜೊತೆಗೆ ಹಿಂದೂಗಳನ್ನು ಸೈನಿಕೀಕರಣ ಮಾಡುತ್ತಾರಂತೆ. ಈ ರಾಜ್ಯದಲ್ಲಿ ಪೊಲೀಸ್, ಗುಪ್ತಚರ ಇಲಾಖೆ ಎಲ್ಲ ಇವೆಯೇ? ಇಂತಹ ದೇಶದ್ರೋಹಿ ಸಭೆ ನಡೆಸುತ್ತಿರುವ ಎಲ್ಲರನ್ನೂ ಬಂಧಿಸಿ, ಅವರ ವಿರುದ್ಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕಿದೆ. ನೋಡೋಣ, ಕಾಂಗ್ರೆಸ್ ಸರ್ಕಾರಕ್ಕೆ ಅಷ್ಟೊಂದು ಬೆನ್ನು ಮೂಳೆ ಇದೆಯಾ ಅಂತ?” ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ಹೊರ ಹಾಕಿದ್ದಾರೆ.

ಈ ಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹಲವರು, ಈ ಸಭೆ ಸಂವಿಧಾನ ವಿರೋಧಿಯಾಗಿದ್ದು, ಈ ಸಭೆಗೆ ನೀಡಲಾಗಿರುವ ಅನುಮತಿಯನ್ನು ಪೊಲೀಸರು ಹಿಂಪಡೆಯಬೇಕು. ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ಸಭೆಯ ಸಂಘಟಕರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X