Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್...

ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಮಸ್ಜಿದ್ ಉದ್ಘಾಟನೆ

ಮುಡಿಪುವಿನ ಮಜ್ಲಿಸ್ ಎಜುಪಾರ್ಕ್‌ನಲ್ಲಿ ನಿರ್ಮಾಣಗೊಂಡ ಭವ್ಯ ಮಸೀದಿ

ವಾರ್ತಾಭಾರತಿವಾರ್ತಾಭಾರತಿ21 Sept 2024 8:33 PM IST
share
ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಮಸ್ಜಿದ್ ಉದ್ಘಾಟನೆ

ಮಂಗಳೂರು: ತುಂಬೆ ಗ್ರೂಪ್‌ನ ಸ್ಥಾಪಕ ಡಾ. ತುಂಬೆ ಮೊಯ್ದಿನ್ ಅವರು ತನ್ನ ತಂದೆ ಮರ್ಹೂಂ ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಅವರ ಹೆಸರಿನಲ್ಲಿ ಕೊಣಾಜೆ ಸಮೀಪದ ಮುಡಿಪುವಿನ ಮಜ್ಲಿಸ್ ಎಜುಪಾರ್ಕ್‌ನಲ್ಲಿ ನಿರ್ಮಿಸಿದ ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಮಸ್ಜಿದ್‌ನ ಉದ್ಘಾಟನೆಯು ಶನಿವಾರ ನೆರವೇರಿತು.


ಉಡುಪಿ ಸಂಯುಕ್ತ ಖಾಝಿ ಅಲ್ಹಾಜ್ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಮಸೀದಿಯನ್ನು ಉದ್ಘಾಟಿಸಿ ದುಆಗೈದರು.

ಮುಸ್ಲಿಂ ಸಮುದಾಯಕ್ಕೆ ಸಮನ್ವಯ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸ್ಥಾಪಿಸಲಾದ ಎಜುಪಾರ್ಕ್‌ಗೆ ಸರ್ವರ ಸಹಕಾರ ಲಭಿಸಿದೆ. ಇದೀಗ ಕೊಡುಗೈ ದಾನಿ, ತುಂಬೆ ಗ್ರೂಪ್‌ನ ಸ್ಥಾಪಕ ಡಾ. ತುಂಬೆ ಮೊಯ್ದಿನ್ ಅವರು ತನ್ನ ತಂದೆ ಮರ್ಹೂಂ ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಅವರ ಹೆಸರಿನಲ್ಲಿ ಮಸೀದಿಯನ್ನು ನಿರ್ಮಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಒಳ್ಳೆಯ ಮನಸ್ಸಿನ ಸಾಕಷ್ಟು ಮಂದಿ ಇದ್ದಾರೆ ಎಂಬುದಕ್ಕೆ ಡಾ. ತುಂಬೆ ಮೊಯ್ದಿನ್‌ರಂತಹವರು ಸಾಕ್ಷಿ ಎಂದು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಜ್ಲಿಸ್ ಎಜುಪಾರ್ಕ್‌ನ ಸಂಸ್ಥಾಪಕ ಶರಫ್ಫುಸ್ಸಾದಾತ್ ಸಯ್ಯಿದ್ ಅಶ್ರಫ್ ಅಸ್ಸಖಾಫ್ ಅಲ್ ಮದನಿ ತಂಙಳ್ ಆದೂರು ಹೇಳಿದರು.


ತುಂಬೆ ಗ್ರೂಪ್‌ನ ಸ್ಥಾಪಕ ಡಾ. ತುಂಬೆ ಮೊಯ್ದಿನ್ ಅವರು ತನ್ನ ತಂದೆ ಮರ್ಹೂಂ ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಅವರ ಹೆಸರಿನಲ್ಲಿ ಉಳ್ಳಾಲ ತಾಲೂಕಿನ ಮುಡಿಪು ಹೋಬಳಿ ಕೇಂದ್ರದಲ್ಲಿ ಸುಮಾರು 1.35 ಕೋ.ರೂ. ವೆಚ್ಚದಲ್ಲಿ ಭವ್ಯ ಮಸೀದಿಯನ್ನು ನಿರ್ಮಿಸಿಕೊಟ್ಟಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಈ ಮಸೀದಿಯು ಉನ್ನತ ಕೇಂದ್ರವಾಗಿ ರೂಪುಗೊಳ್ಳಲಿ ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಆಶಿಸಿದರು.


ಯೆನೆಪೊಯ ಕುಟುಂಬದ ಪ್ರಥಮ ಮೊಮ್ಮಗ ತುಂಬೆ ಗ್ರೂಪ್‌ನ ಸ್ಥಾಪಕ ಡಾ. ತುಂಬೆ ಮೊಯ್ದಿನ್ ತನ್ನ ತಂದೆ ಮರ್ಹೂಂ ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್‌ರ ಹೆಸರಿನಲ್ಲಿ ಈ ಪರಿಸರದಲ್ಲಿ ಮಸೀದಿ ನಿರ್ಮಿಸಿರುವುದು ಅರ್ಥಪೂರ್ಣವಾಗಿದೆ. ತುಂಬೆ ಕುಟುಂಬವು ನಾಡಿನ ಅನೇಕ ಮಸೀದಿ, ಮದ್ರಸಗಳ ನಿರ್ಮಾಣಕ್ಕೆ ಸಾಕಷ್ಟು ನೆರವು ನೀಡಿದೆ. ತುಂಬೆ ಹಾಜಿಯ ಪರಿಶ್ರಮ, ದೂರದೃಷ್ಟಿ, ಸಮಯ ಪ್ರಜ್ಞೆಯು ನಮಗೆ ಆದರ್ಶಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ಇದು ಧಾರ್ಮಿಕ ಶಕ್ತಿ ಕೇಂದ್ರವಾಗಲಿ ಎಂದು ಯೆನೆಪೊಯ ವಿವಿ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕುಂಞಿ ಹೇಳಿದರು.


ಸುಮಾರು 27 ವರ್ಷದಿಂದ ಯುಎಇಯಲ್ಲಿರುವ ನಾನು ವರ್ಷಕ್ಕೆ ಮೂರ್ನಾಲ್ಕು ಬಾರಿ ಊರಿಗೆ ಬರುತ್ತಿರುವೆ. ಹೀಗೆ ಬಂದಾಗಲೆಲ್ಲಾ ಸ್ಪೀಕರ್ ಯು.ಟಿ.ಖಾದರ್ ಮತ್ತವರ ಸಹೋದರ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಭೇಟಿಯಾಗುವು ದುಂಟು. ಹಿಂದೊಮ್ಮೆ ಊರಿಗೆ ಬಂದಾಗ ಖಾದರ್‌ರ ಮನೆಗೆ ಹೋಗಿದ್ದೆ. ಅಲ್ಲಿ ಆದೂರು ತಂಙಳ್ ಕೂಡಾ ಇದ್ದರು. ಮೂವರು ಮುಡಿಪುವಿನಲ್ಲಿ ಮಸೀದಿ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದರು. ಅದರಂತೆ ನಾನು ನನ್ನ ತಂದೆಯ ಹೆಸರಿನಲ್ಲಿ ಮಸೀದಿಯ ನಿರ್ಮಿಸಿಕೊಡುವ ಬಗ್ಗೆ ಭರವಸೆ ನೀಡಿದೆ. ಇಂದು ಈ ಮಸೀದಿಯು ಉದ್ಘಾಟನೆಗೊಂಡಿವೆ. ಹಾಗಾಗಿ ನನ್ನ ಪಾಲಿಗೆ ಇಂದು ತುಂಬಾ ಸಂತೋಷದ ದಿನವಾಗಿದೆ. ನನ್ನ ತಂದೆ ಬಿ. ಅಹ್ಮದ್ ಹಾಜಿ ಮೊಹಿಯ್ಯುದ್ದೀನ್ ಮತ್ತು ಈ ಎಜುಪಾರ್ಕ್‌ನ ಸಂಸ್ಥಾಪಕ ಆದೂರು ತಂಙಳ್ ಇಬ್ಬರೂ ಶಿಕ್ಷಣ ಪ್ರೇಮಿಗಳು ಎಂದು ಹೇಳಲು ನನಗೆ ತುಂಬಾ ಖುಷಿಯಾಗುತ್ತಿವೆ ಎಂದು ತುಂಬೆ ಗ್ರೂಪ್‌ನ ಸ್ಥಾಪಕ ಡಾ. ತುಂಬೆ ಮೊಯ್ದಿನ್ ಹೇಳಿದರು.


ಕಾರ್ಯಕ್ರಮದಲ್ಲಿ ತುಂಬೆ ಗ್ರೂಪ್‌ನ ಸ್ಥಾಪಕ ಡಾ. ತುಂಬೆ ಮೊಯ್ದಿನ್ ಹಾಗೂ ಯೆನೆಪೊಯ ವಿವಿ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕುಂಞಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ತುಂಬೆ ಕುಟುಂಬದ ಬಿ.ಎ. ಅಶ್ರಫ್, ಸಯ್ಯಿದ್ ಶಹೀರ್ ಅಲ್ ಬುಖಾರಿ ಮಳ್‌ಹರ್ ತಂಳ್, ಡಾ. ಎಂಎಸ್‌ಎಂ ಅಬ್ದುರ‌್ರಶೀದ್ ಝೈನಿ ಕಾಮಿಲ್, ಬಾದುಷ ಸಖಾಫಿ ಆಲಪುಝ, ಮುಹಮ್ಮದಲಿ ಸಖಾಫಿ ಅಶ್‌ಹರಿಯ್ಯ, ಕೊಲಂಬಾಡಿ ಸಅದಿ, ಉಳ್ಳಾಲ ದಗಾದ ಅಧ್ಯಕ್ಷ ಹನೀಫ್ ಹಾಜಿ, ಅಶ್ರಫ್ ಸಅದಿ ಅಲ್ ಮಳ್‌ಹರಿ, ಮಹ್ಮೂದ ಹಾಜಿ, ಎಸ್.ಎಂ. ರಶೀದ್ ಹಾಜಿ, ಸಂತೋಷ್ ಕುಮಾರ್ ರೈ ಬೋಳಿಯಾರ್, ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಎಸ್.ಕೆ. ಅಬ್ದುಲ್ ಖಾದರ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.


ಹಾಫಿಝ್ ಇರ್ಫಾನ್ ಕಿರಾಅತ್ ಪಠಿಸಿದರು. ಆಸ್ಟ್ರೇಲಿಯಾದ ಅಮೀರ್ ಹಸ್ಸನ್ ಕಾರ್ಯಕ್ರಮ ನಿರೂಪಿಸಿದರು. ಸಯ್ಯಿದ್ ಮಿರಾಜ್ ಅಲ್ ಹಾದಿ ತಂಳ್ ವಂದಿಸಿದರು.





































share
ವಾರ್ತಾಭಾರತಿ
ವಾರ್ತಾಭಾರತಿ
Next Story
X