ಮಾ.2 ರಂದು ಎಂಸಿಸಿ ಬ್ಯಾಂಕಿನ 19ನೇ ಶಾಖೆ ಬೆಳ್ಮಣ್ನಲ್ಲಿ ಉದ್ಘಾಟನೆ

ಮಂಗಳೂರು: 113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್ ನ 19ನೇ ಶಾಖೆಯು ಬೆಳ್ಮಣ್ನಲ್ಲಿ ಮಾ.3ರಂದು ಉದ್ಘಾಟನೆಗೊಳ್ಳಲಿದೆ.
ಶಾಖೆಯ ಉದ್ಘಾಟನೆಯ ಕಾರ್ಯಕ್ರಮವು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಶಾಖೆಯ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ನೆರವೇರಿಸಲಿದ್ದಾರೆ.
ಸಂತ ಜೋಸೆಪ್ಸ್ ಚರ್ಚ್ ಬೆಳ್ಮಣ್ ಇದರ ಧರ್ಮಗುರುಗಳಾದ ವಂ. ಫಾ.ಫ್ರೆಡ್ರಿಕ್ ಮಸ್ಕರೇನ್ಹಸ್ ಆಶಿರ್ವಚನ ಕೈಗೊಳ್ಳುವರು. ದಾಯ್ಜಿವಲ್ಡ್ ಮೀಡಿಯಾದ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಯಾಗಿದ್ದು, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಮೇಶ್ವರಿ ಎಮ್. ಶೆಟ್ಟಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್ 2023-24ನೇ ವಿತ್ತೀಯ ವರ್ಷದಲ್ಲಿ ಶೇ.10ರಷ್ಟು ಲಾಭಾಂಶ ಘೋಷಿಸಿಸಿದೆ. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಎಂಸಿಸಿ ಬ್ಯಾಂಕ್ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು 10.45 ಕೋಟಿ ರೂ. ಆಗಿದೆ. ಕಳೆದ 6 ವರ್ಷಗಳಿಂದ ಪ್ರಸ್ತುತ ಆಡಳಿತ ಮಂಡಳಿಯು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಮುಂದಾಳತ್ವದಲ್ಲಿ ಬ್ಯಾಂಕ್ ಪ್ರಗತ್ತಿಯತ್ತ ದಾಪುಗಾಲು ಇಡುತ್ತಿದೆ.
ಬ್ಯಾಂಕಿನ ಕಾರ್ಯವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿಂಗ್ ಮುಖಾಂತರ ಕಾರ್ಯ ನಡೆಸುತ್ತಿದ್ದು, ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಬ್ಯಾಂಕಿನಲ್ಲಿ ದೊರೆಯುತ್ತವೆ. ಡಿಜಿಟಲ್ ಸೇವೆಯಂತಹ ಗೂಗಲ್ ಪೇ, ಫೊನ್ ಪೇ, ಯುಪಿಎ, ಇತರ ಸೌಲಭ್ಯಗಳನ್ನು ಸದ್ಯದಲ್ಲಿಯೇ ಗ್ರಾಹಕರಿಗೆ ಒದಗಿಸುವ ಯೋಜನೆಯನ್ನು ಕೈಗೊಂಡಿದ್ದು, ಬ್ಯಾಂಕಿನ ಶಾಖೆಗಳನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಕಾರ್ಯಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶ ವಿದ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗೃಹ ಉಪಯೋಗಿ ವಸ್ತು ಖರೀದಿ ಸಾಲ, ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲ ಹಾಗೂ ಏಟಿಎಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ.
ಕರ್ನಾಟಕದಲ್ಲಿ ಎನ್ಆರ್ಐ ಸೌಲಭ್ಯವಿರುವ ಎಕೈಕ ಪಟ್ಟಣ ಸಹಕಾರ ಬ್ಯಾಂಕ್ ಇದಾಗಿದ್ದು, ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡೆಪಾಝಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ನಿಂದ ವಿಮಾ ಸೌಲಭ್ಯವಿದೆ.
ಎಂಸಿಸಿ ಬ್ಯಾಂಕ್ ಒಟ್ಟು ಠೇವಣಿಯು 676 ಕೋಟಿ ರೂ., ಒಟ್ಟು ಸಾಲ ಮತ್ತು ಮುಂಗಡ 532 ಕೋಟಿ ರೂ. ತಲುಪಿದ್ದು, ಒಟ್ಟು ವ್ಯವಹಾರವು 1,208 ಕೋಟಿ ರೂ. ಆಗಿರುತ್ತದೆ. ಮಾರ್ಚ್ ಅಂತ್ಯಕ್ಕೆ ದುಡಿಯುವ ಬಂಡವಾಳ 752.95 ಕೋಟಿ ರೂ. ಮತ್ತು ಶೇರು ಬಂಡವಾಳ 31.21 ಕೋಟಿ ರೂ. ಇರುತ್ತದೆ.
ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು ಶೇ.1.12ಕ್ಕೆ ತಲುಪಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನೇಮಿಸಿದ ಲೆಕ್ಕಪರಿಶೋಧಕರು ನಡೆಸಿದ ಲೆಕ್ಕ ಪರಿಶೋಧನೆಯಲ್ಲಿ ಸತತವಾಗಿ ‘ಎ’ ಶ್ರೇಣಿಯ ಬ್ಯಾಂಕಾಗಿ ಗುರುತಿಸಲ್ಪಟ್ಟಿದ್ದು ಬ್ಯಾಂಕ್ ಆರ್ಥಿಕವಾಗಿ ಸಧೃಡವಾಗಿದೆ ಎಂಬುದನ್ನು ತೋರಿಸುತ್ತದೆ.
ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿ 22 ವರ್ಷಗಳ ನಂತರ ಪ್ರಸ್ತುತ ಆಡಳಿತ ಮಂಡಳಿಯ ಮುಂದಾಳತ್ವದಲ್ಲಿ ಬ್ರಹ್ಮಾವರದಲ್ಲಿ 2024ನೇ ಮಾರ್ಚ್ ತಿಂಗಳಲ್ಲಿ 17ನೇ ಶಾಖೆಯನ್ನು ಮತ್ತು ನವೆಂಬರ್ ತಿಂಗಳಲ್ಲಿ 18ನೇ ಶಾಖೆಯನ್ನು ಬೆಳ್ತಂಗಡಿಯಲ್ಲಿ ಪ್ರಾರಂಭಿಸಲಾಗಿದೆ.
ಪ್ರಸ್ತುತ ಎಂಸಿಸಿ ಬ್ಯಾಂಕ್ ಸುಸಜ್ಜಿತ ಆಡಳಿತ ಕಚೇರಿ ಮತ್ತು ಸಂಸ್ಥಾಪಕರ ಶಾಖೆ ಹಂಪನಕಟ್ಟೆ, ಅಶೋಕನಗರ, ಕಂಕನಾಡಿ, ಕುಲಶೇಕರ, ಮೋರ್ಗನ್ಸ್ ಗೇಟ್, ಮೂಡಬಿದ್ರಿ, ಶಿರ್ವ, ಬಜಪೆ, ಕಿನ್ನಿಗೋಳಿ, ಸುರತ್ಕಲ್, ಉಳ್ಳಾಲ, ಉಡುಪಿ, ಕುಂದಾಪುರ, ಪುತ್ತೂರು, ಬಿ.ಸಿ.ರೋಡ್, ಕಾರ್ಕಳ, ಬ್ರಹ್ಮಾವರ ಮತ್ತು ಬೆಳ್ತಂಗಡಿ ಹೀಗೆ 18 ಶಾಖೆಗಳನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 19ನೇ ಶಾಖೆಯನ್ನು ಮಾ.3ರಂದು ಬೆಳ್ಮಣ್ನಲ್ಲಿ ಉದ್ಘಾಟಿಸಲಿದೆ.
ಬ್ರಹ್ಮಾವರ ಶಾಖೆಯ ಎಟಿಎಮ್ ಉದ್ಘಾಟನೆ :
ನೆಲಮಹಡಿ, ಶೇಷಗೋಪಿ ಪ್ಯಾರಡೈಸ್, ರಾ.ಹೆ.66, ಆಕಾಶವಾಣಿ ವೃತ್ತದ ಬಳಿ, ವಾರಂಬಳ್ಳಿ, ಬ್ರಹ್ಮಾವರದಲ್ಲಿರುವ ಎಮ್ಸಿಸಿ ಬ್ಯಾಂಕ್ ನ ಶಾಖೆಯ ಎಟಿಎಮ್ ಉದ್ಘಾಟನೆ ಮಾ.3 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ರತ್ನ ಅನಿಲ್ ಲೋಬೊ ಅಧ್ಯಕ್ಷರಾಗಿದ್ದು, ಜೆರಾಲ್ಡ್ ಡಿಸಿಲ್ವಾ ಉಪಾಧಕ್ಷ, ಅಂಡ್ರೂಯ ಡಿಸೋಜ, ಅನಿಲ್ ಪತ್ರಾವೊ, ಡಾ.ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ಎಲ್ರೊಯ್ ಕ್ರಾಸ್ಟೊ, ರೋಶನ್ ಡಿಸೋಜ, ಹೆರಾಲ್ಡ್ ಮೊಂತೇರೊ, ಜೆ.ಪಿ.ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ನಿರ್ದೇಶಕರಾಗಿದ್ದು, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ ವೃತ್ತಿಪರ ನಿರ್ದೇಶಕರಾಗಿದ್ದಾರೆ. ಪೆಲಿಕ್ಸ್ ಡಿಕ್ರುಜ್, ಆಲ್ವಿನ್ ಮೊಂತೇರೊ ಹಾಗೂ ಶರ್ಮಿಳಾ ಮಿನೇಜಸ್ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿದ್ದಾರೆ. ಸುನಿಲ್ ಮಿನೇಜಸ್ ಮಹಾಪ್ರಬಂಧಕರಾಗಿ, ಒಟ್ಟು, 185 ಸಿಬ್ಬಂದಿಗಳು ಆಡಳಿತ ಕಚೇರಿ ಮತ್ತು ಶಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







