Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತಿಯೊಂದು ಮಗುವಿಗೂ ಶಿಕ್ಷಣ...

ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಸಮಾಜದ ಎಲ್ಲರ ಕರ್ತವ್ಯ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ವಾರ್ತಾಭಾರತಿವಾರ್ತಾಭಾರತಿ10 Aug 2025 7:27 PM IST
share
ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಸಮಾಜದ ಎಲ್ಲರ ಕರ್ತವ್ಯ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ದುಬೈ ಬಿಸಿಎಫ್‌ನಿಂದ ವಿದ್ಯಾರ್ಥಿ ವೇತನ, ಹೊಲಿಗೆ ಯಂತ್ರ ವಿತರಣೆ

ಮಂಗಳೂರು, ಆ.10: ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಸಮಾಜದ ಎಲ್ಲರ ಕರ್ತವ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಹೇಳಿದ್ದಾರೆ.

ನಗರದ ಜೆಪ್ಪಿನಮೊಗರ್‌ನಲ್ಲಿರುವ ಪ್ರೆಸ್ಟೀಜ್ ಇಂಟನ್ಯಾಶನಲ್ ಸ್ಕೂಲ್‌ನಲ್ಲಿ ರವಿವಾರ ನಡೆದ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯ ಮಾನವನಿಗೆ ದೊರೆಯಬೇಕಾದ ಬಹುಮುಖ್ಯದ ಸೌಲಭ್ಯ. ಸುಶಿಕ್ಷಿತ ಜಿಲ್ಲೆಯಾಗಿರುವ ದ.ಕ. ಜಿಲ್ಲೆಯಲ್ಲಿ ಯಾವುದೇ ಒಂದು ಮಗು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣ ಕೊಡಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್ ಅಧ್ಯಕ್ಷತೆ ವಹಿಸಿದ್ದರು.

ಕಳೆದ 24 ವರ್ಷಗಳಿಂದ ಬಿಸಿಎಫ್ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶೈಕ್ಷಣಿಕ, ಸಾಮಾಜಿಕ, ನೈತಿಕ, ಧಾರ್ಮಿಕ ಹೀಗೆ ವಿವಿಧ ಸೇವಾ ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸಿದೆ. ವಿದ್ಯೆ ಸಮಾಜದ ಜೀವಾಳವಾಗಿದೆ. ಈ ನಿಟ್ಟಿನಲ್ಲಿ ಬಿಸಿಎಫ್ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಬಿಸಿಎಫ್ ಈ ತನಕ 13,000 ಮಂದಿಗೆ ವಿದ್ಯಾರ್ಥಿ ವೇತನ ನೀಡಿದೆ ಎಂದು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ ‘ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟರೆ ಅವರು ಕಾಲ ಮೇಲೆ ನಿಲ್ಲತ್ತಾರೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದರೆ ಅವರಿಗೆ ಸ್ವಾವಲಂಭಿಯಾಗಲು ಸಾಧ್ಯವಾಗುತ್ತದೆ. ಅವರ ಮೂಲಕ ಇಡೀ ಕುಟುಂಬ ಬೆಳಗುತ್ತದೆ. ಹೀಗಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ.ಫಾರೂಕ್, ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಮಾತನಾಡಿದರು.

ಶೈಕ್ಷಣಿಕ ಕಾರ್ಯಾಗಾರ : ಇದೇ ಸಂದರ್ಭದಲ್ಲಿ ಯುಎಇ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ಉಪಕುಲಪತಿ ಮತ್ತು ಬಿಸಿಎಫ್‌ನ ಪ್ರಧಾನ ಕಾರ್ಯದರ್ಶಿ ಡಾ.ಕಾಪು ಮುಹಮ್ಮದ್, ಮನಾಲ್ ಕಾಪು ಮತ್ತು ರಫೀಕ್ ಮಾಸ್ಟರ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ನಡೆಸಿಕೊಟ್ಟರು.

ಅಲೈಡ್ ಹೆಲ್ತ್ ಕೇರ್ ಆಯೋಗದ ರಾಜ್ಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್, ಯುಎಇ ಗಡಿಯಾರ್ ಗ್ರೂಪ್‌ನ ಚೇರ್‌ಮೇನ್ ಇಬ್ರಾಹೀಂ ಗಡಿಯಾರ್, ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ನ ಮಾಜಿ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್, ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಆಡಳಿತ ನಿರ್ದೇಶಕ ಅಬ್ದುಲ್ ರವೂಫ್, ಸಿ.ಆರ್. ಫ್ರುಟ್ಸ್‌ನ ಅಧ್ಯಕ್ಷ ಸಿ.ಆರ್.ಅಬೂಬಕರ್, ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಲತೀಫ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಶಾಖೆಯ ಮ್ಯಾನೇಜರ್ ರಹ್ಮತ್ ಎಸ್.ಎ, ಮಾಜಿ ಉಪ ಮೇಯರ್ ಬಶೀರ್ ಬೈಕಂಪಾಡಿ, ಸಾಹಿತಿಗಳಾದ ಮುಹಮ್ಮದ್ ಕುಳಾಯಿ, ಮುಹಮ್ಮದ್ ಅಲಿ ಕಮ್ಮರಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮೀಫ್ ಪ್ರಧಾನ ಕಾರ್ಯದರ್ಶಿ ರಿಯಾದ್ ಅಹ್ಮದ್ ಕೆ.ಬಿ, ಬಿಸಿಎಫ್ ಮುಖ್ಯ ಸಲಹೆಗಾರ ಇಬ್ರಾಹೀಂ ಗಡಿಯಾರ್, ಉಪಾಧ್ಯಕ್ಷರಾದ ಹಫೀಕ್ ಹುಸೈನ್, ಅಮೀರುದ್ದೀನ್ ಎಸ್.ಐ, ಕೋಶಾಧಿಕಾರಿ ಅಸ್ಲಂ ಕಾರಾಜೆ , ಯಾಕೂಬ್ ದೇವ ಉಪಸ್ಥಿತರಿದ್ದರು.

ಬಿಸಿಎಫ್ ಸ್ಕಾಲರ್‌ಶಿಪ್ ಕಮಿಟಿಯ ಅಧ್ಯಕ್ಷ ಎಂ.ಇ.ಮೂಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ.ಕಾಪು ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಅಬ್ದುಲ್ ಲತೀಫ್ ಮುಲ್ಕಿ ವಂದಿಸಿದರು.

ರಫಾ ರಫೀಕ್‌ಗೆ ವೈದ್ಯಕೀಯ ಶಿಕ್ಷಣಕ್ಕೆ 1.50 ಕೋಟಿ ರೂ. ಮೊತ್ತದ ತುಂಬೆ ಮೊಯ್ದಿನ್ ವಿದ್ಯಾರ್ಥಿ ವೇತನ

ಮೂಡುಬಿದ್ರೆಯ ವಿದ್ಯಾರ್ಥಿನಿ ರಫಾ ರಫೀಕ್ ವಿದೇಶದಲ್ಲಿ ಉಚಿತ ವೈದ್ಯಕೀಯ ಶಿಕ್ಷಣ (ಡಾಕ್ಟರ್ ಆಫ್ ಮೆಡಿಸನ್) ಪಡೆಯಲು ಬಿಸಿಎಫ್ ಸಹಯೋಗದಲ್ಲಿ ನೀಡಲಾಗುವ 1.50 ಕೋಟಿ. ರೂ. ಮೊತ್ತದ ತುಂಬೆ ಮೊಯ್ದಿನ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿ ವೇತನದಲ್ಲಿ ಯುಎಇ ಮತ್ತು ಉಜ್ಬೇಕಿಸ್ತಾನದ ವೈದ್ಯಕೀಯ ಕಾಲೇಜುಗಳಲ್ಲಿ 6 ವರ್ಷಗಳ ಪದವಿ ಶಿಕ್ಷಣ ಪಡೆಯಲು, ವಸತಿ, ವೀಸಾ ಎಲ್ಲವೂ ಉಚಿತವಾಗಿ ದೊರೆಯಲಿದೆ.

ಪ್ರತಿ ವರ್ಷ ಆರ್ಥಿಕವಾಗಿ ಹಿಂದುಳಿದ ಹಾಗೂ ಆಯ್ಕೆ ಪರೀಕ್ಷೆಯಲ್ಲಿ ಟಿಒಇಎಫ್‌ಎಲ್ (Test of English as a Foreign language) ಉತ್ತೀರ್ಣಗೊಂಡ ಇಬ್ಬರು ಆಕಾಂಕ್ಷಿಗಳಿಗೆ ತುಂಬೆ ಮೊಯ್ದಿನ್ ವಿದ್ಯಾರ್ಥಿ ವೇತನ ದೊರೆಯಲಿದೆ. 2025ರಲ್ಲಿ ಒಬ್ಬರಿಗೆ ಮಾತ್ರ ನೀಡಲಾಗುತ್ತಿದ್ದು, ರಫಾ ರಫೀಕ್ ಈ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಬಿಸಿಎಫ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಪ್ರಮಾಣ ಪತ್ರ ನೀಡಲಾಯಿತು.

15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ

*ಪಿಯುಸಿಯಿಂದ ಸ್ನಾತಕೋತ್ತರ ಪದವಿ ತನಕದ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ.

*ದ.ಕ. ಮತ್ತು ಉಡುಪಿ ಜಿಲ್ಲೆಯ ಸುಮಾರು 100 ಮಹಿಳೆಯರಿಗೆ ಹೊಲಿಗೆ ಯಂತ್ರ.

*ಮರ್ಹೂಂ ಬಿ.ಎಂ.ಮುಮ್ತಾಝ್ ಅಲಿ ನೆನಪಿನಲ್ಲಿ ಐವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ.

*ಬಿ.ಎಂ ಮುಮ್ತಾಝ್ ಅಲಿ ಕುಟುಂಬಕ್ಕೆ ಲೈಫ್‌ಟೈಮ್ ಅಚೀವ್‌ಮೆಂಟ್ ಪ್ರಶಸ್ತಿ.

* ಪ್ರೆಸಿಡೆನ್ಸಿ ಗ್ರೂಪ್ ನಿರ್ದೇಶಕಿ ಕೌಸರ್ ನಿಸಾರ್‌ಗೆ ತುಂಬೆ ಮೊಯ್ದಿನ್ ಪ್ರಶಸ್ತಿ.

* ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್‌ನ ಚೇರ್‌ಮೇನ್ ಹೈದರ್ ಅಲಿ ಕೆ , ಯುಎಇ ಗ್ರೂಪ್‌ನ ಆಯಿಶಾ ಇಬ್ರಾಹೀಂ ಗಡಿಯಾರ್ ಅವರನ್ನು ಗೌರವಿಸಲಾಯಿತು.


































































share
ವಾರ್ತಾಭಾರತಿ
ವಾರ್ತಾಭಾರತಿ
Next Story
X