ಕಣ್ಣೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ನೌಷಾದ್ ಎಂಬಾತನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರ್ಕೆಟ್ಗೆ ತೆರಳಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್ರ ಬೆನ್ನಿಗೆ ಚೂರಿಯಿಂದ ಇರಿದರು ಎನ್ನಲಾಗಿದೆ. ತಕ್ಷಣ ನೌಷಾದ್ ಓಡಿ ತಪ್ಪಿಸಿಕೊಂಡಿದ್ದು, ಬಳಿಕ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Next Story