Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.20: ಕಾಸರಗೋಡು-ಪಾಲಡ್ಕ-ಕಡಂದಲೆ...

ಫೆ.20: ಕಾಸರಗೋಡು-ಪಾಲಡ್ಕ-ಕಡಂದಲೆ ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಹಕ್ಕೊತ್ತಾಯ ಜಾಥಾ

ವಾರ್ತಾಭಾರತಿವಾರ್ತಾಭಾರತಿ17 Feb 2025 11:26 PM IST
share
ಫೆ.20: ಕಾಸರಗೋಡು-ಪಾಲಡ್ಕ-ಕಡಂದಲೆ ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಹಕ್ಕೊತ್ತಾಯ ಜಾಥಾ

ಮಂಗಳೂರು: ಕಾಸರಗೋಡು 400 ಕೆವಿ ಮತ್ತು ಪಾಲಡ್ಕ-ಕಡಂದಲೆ 400/220 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಕಾಮಗಾರಿಯನ್ನು ವಿರೋಧಿಸಿ ಫೆ.20ರಂದು ಬೆಳಗ್ಗೆ 9:30ಕ್ಕೆ ನಗರದ ಬಲ್ಮಠದಿಂದ ಮಿನಿ ವಿಧಾನಸೌಧದವರೆಗೆ ಹಕ್ಕೊತ್ತಾಯ ಜಾಥಾ ಮತ್ತು ಪೂ.11ಕ್ಕೆ ನಗರದ ನೆಹರೂ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿಗಳ ಒಕ್ಕೂಟ ತಿಳಿಸಿದೆ.

ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಇದರ ನೇತೃತ್ವದ ಕಥೊಲಿಕ್ ಸಭಾ ಉಡುಪಿ ಪ್ರದೇಶ (ರಿ) ಉಡುಪಿ, ರೈತ ಸಂಘ - ಹಸಿರು ಸೇನೆ, ಭಾರತೀಯ ಕಿಸಾನ್ ಸಂಘ (ರಿ) ಕರ್ನಾಟಕ ಪ್ರದೇಶ, ಪರಿಸರ ಸಂಗಮ-ಜೀವ ಸಂಕುಲ ಪರ ವೇದಿಕೆ, ಉಡುಪಿ ಜಿಲ್ಲಾ ಕೃಷಿಕರ ಸಂಘ ಹಾಗೂ ಸಮಾನ ಮನಸ್ಕ ರೈತ ಪರ ಸಂಘ -ಸಂಸ್ಥೆಗಳು ದ.ಕ., ಉಡುಪಿ, ಐಸಿವೈಎಂ ಮಂಗಳೂರು ಧರ್ಮ ಪ್ರಾಂತ ಮತ್ತು ಕಾಸರಗೋಡು ಜಿಲ್ಲೆ ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಈ ಜಾಥಾ ಮತ್ತು ಪ್ರತಿಭಟನೆಯಲ್ಲಿ ಸುಮಾರು 15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೋರಾಟ ಸಮಿತಿಯ ಮುಖಂಡರಾದ ಪಾವ್ಲ್ ರೋಲ್ಫಿ ಡಿಕೋಸ್ತ, ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ- ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ಯೋಜನೆ ಹೆಸರಿನಲ್ಲಿ 5 ವರ್ಷಗಳಿಂದ ಈ ಯೋಜನೆ ಗುತ್ತಿಗೆದಾರ ಕಂಪನಿ ಎಂದೇಳಿಕೊಳ್ಳುತ್ತಿರುವ ಸ್ಟೆರ್‌ಲೈಟ್ ಪವರ್ ಕಂಪನಿಯವರು ಉಡುಪಿ, ದ.ಕ. ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವಿದ್ಯುತ್ ಮಾರ್ಗ ಕಾಮಗಾರಿ ನೆಪದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಇಂಧನ ಸಚಿವಾಲಯದ ಸ್ಪಷ್ಟ ನೀತಿ-ನಿಯಮ, ಕಾನೂನಾತ್ಮಕ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಕಾನೂನು ಬಾಹಿರವಾಗಿ ಕಾಮಗಾರಿ ನಡೆಸುತ್ತಿದ್ದಾರೆ. ಯೋಜನೆಗಳ ಬಗ್ಗೆ ಪ್ರಾಥಮಿಕ ಮಾಹಿತಿಗಾಗಿ ಯಾವುದೇ ಸಾರ್ವಜನಿಕ ಸಮಾಲೋಚನಾ ಸಭೆಗಳನ್ನು ನಡೆಸದೆ ಉದ್ದೇಶಿತ ಯೋಜನಾ ಮಾರ್ಗದ ಭೂಮಾಲಕರಿಗೆ ಯಾವುದೇ ನೋಟಿಸ್ ನೀಡದೆ, ಭೂಮಾಲಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ ನಡೆಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಫಲವತ್ತಾದ ಕೃಷಿ ಭೂಮಿ, ತೋಟಗಾರಿಕಾ ಬೆಳೆಗಳು, ಅಪರೂಪದ ಜಾತಿಯ ಮರಗಳನ್ನು ಒಳಗೊಂಡ ಸಂರಕ್ಷಿತ ಅರಣ್ಯ ಸಂಪತ್ತನ್ನು ಸರ್ವನಾಶಗೊಳಿಸುವ ಈ ಯೋಜನೆಗೆ ತೀವ್ರ ವಿರೋಧವಿದೆ. ಪರ್ಯಾಯವಾಗಿ ಸಮುದ್ರಮಾರ್ಗ, ಹೆದ್ದಾರಿ, ಸಾರ್ವಜನಿಕ ರಸ್ತೆ, ರೈಲ್ವೆ ಹಳಿ ಪಕ್ಕ, ಭೂಗತ ಮಾರ್ಗದ ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸುತ್ತಾ ಬಂದಿದ್ದರೂ ಕೂಡ ಉಭಯ ಜಿಲ್ಲೆಗಳನ್ನು ಪ್ರತಿನಿಧಿಸುತ್ತಿರುವ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಆಲ್ವಿನ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್ ಮೊಂತೇರೊ, ಹೋರಾಟ ಸಮಿತಿಯ ವಿಕ್ಟರ್ ಕಡಂದಲೆ, ಕೃಷ್ಣ ಪ್ರಸಾದ್ ತಂತ್ರಿ, ಶ್ರೀಧರ ಶೆಟ್ಟಿ, ಆಲ್ಫೋನ್ಸ್ ಉಪಸ್ಥಿತರಿದ್ದರು.

ಈ ಪ್ರಕೃತಿ ವಿರೋಧಿ ಯೋಜನೆಯಿಂದಾಗಲಿರುವ ಸಮಸ್ಯೆಗಳು

►ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರಿನಿಂದ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚದವರೆಗಿನ 27 ಗ್ರಾಮಗಳ ಮತ್ತು ಕಾಸರಗೋಡು ಜಿಲ್ಲೆಯವರೆಗಿನ 115 ಕಿ ಮೀ ಉದ್ದ ಮತ್ತು 46 ಮೀಟರ್ ಅಗಲದ ಪ್ರಸ್ತಾವಿತ ಯೋಜನಾ ಮಾರ್ಗಕ್ಕಾಗಿ ನೇರವಾಗಿ 1150 ಎಕರೆ ಸಮೃದ್ಧ ಕೃಷಿ ಭೂಮಿ ಜೊತೆಗೆ ಈ ಲೈನ್‌ನ ಇಕ್ಕೆಲಗಳಲ್ಲಿ ಯಾವುದೇ ಮನೆ, ಕೊಟ್ಟಿಗೆ, ಗೋಡೌನ್ ಇನ್ನಿತರ ಯಾವುದೇ ಕಟ್ಟಡಗಳನ್ನು ಕಟ್ಟಿಕೊಳ್ಳಲು ಅವಕಾಶವಿಲ್ಲ. ಸುಮಾರು 3450ಕ್ಕೂ ಅಧಿಕ ಜಮೀನು ಈ ಯೋಜನೆಗೆ ಸರ್ವನಾಶವಾಗಲಿದೆ.

►ಯೋಜನಾ ವ್ಯಾಪ್ತಿಯ ಸುಮಾರು 2.65 ಲಕ್ಷದಷ್ಟು ಅಡಿಕೆ ಮರಗಳನ್ನು ಬುಡ ಸಮೇತ ಕಡಿದು ಹಾಕಲಾಗುತ್ತದೆ. ಸುಮಾರು 1 ಲಕ್ಷಕ್ಕಿಂತ ಹೆಚ್ಚಿನ ತೆಂಗಿನ ಮರಗಳ ಮಾರಣ ಹೋಮವಾಗಲಿದೆ. ಸುಮಾರು 4.5 ಲಕ್ಷದಷ್ಟು ಕಾಳು ಮೆಣಸಿನ ಬಳ್ಳಿಗಳು ನಾಶವಾಗಲಿದೆ. ಸುಮಾರು 1.5 ಲಕ್ಷ ರಬ್ಬರ್ ಮರಗಳು ನೆಲಸಮವಾಗಲಿವೆ. ಸುಮಾರು 25 ಸಾವಿರ ಹಲಸಿನ ಮರ, 28 ಸಾವಿರ ಮಾವಿನ ಮರ 2.5 ಲಕ್ಷಕ್ಕಿಂತ ಹೆಚ್ಚು ಬೃಹತ್ ಗಾತ್ರದ ವಿವಿಧ ಜಾತಿಯ ಕಾಡು ಮರಗಳು ಮತ್ತು ಔಷಧೀಯ ಗುಣವುಳ್ಳ ಸಹಸ್ರಾರು ವೈವಿಧ್ಯಮಯ ಅರಣ್ಯ ಸಂಪತ್ತು ನಿರ್ನಾಮವಾಗಲಿದೆ. ಲಕ್ಷಾಂತರ ಸಂಖ್ಯೆಯ ಬಾಳೆ, ಪೇರಳೆ, ಸಪೋಟ ಮುಂತಾದ ತೋಟಗಾರಿಕಾ ಬೆಳೆ ತೋಟಗಳು ಸರ್ವ ನಾಶವಾಗಲಿದೆ.

►ಸುಮಾರು 328 ವಾಸ್ತವ್ಯದ ಮನೆಗಳು, 26 ದೈವಸ್ಥಾನ, 16 ದೇವಸ್ಥಾನ, 8 ಮಸೀದಿ, 14 ಶಾಲೆಗಳು, ಮತ್ತು 13 ಕ್ರೈಸ್ತ ಧರ್ಮದ ಇಗರ್ಜಿ-ಪ್ರಾರ್ಥನಾ ಮಂದಿರಗಳು ಈ ಯೋಜನಾ ಮಾರ್ಗಕ್ಕಾಗಿ ನೆಲಸಮವಾಗಲಿದೆ. ಜೊತೆಗೆ ಈ ಪ್ರಾಕೃತಿಕ ವ್ಯವಸ್ಥೆಯ ಅವಿಭಾಜ್ಯ ಭಾಗವಾಗಿರುವ ಕೋಟ್ಯಂತರ ಪಶು-ಪಕ್ಷಿಗಳು, ಜಲಚರ ಜೀವಿಗಳು, ಜೀವ ವೈವಿಧ್ಯ ಸಂಕುಲಗಳು ಸರ್ವನಾಶವಾಗಲಿದೆ.

►ಇದರಿಂದ ಹರಿದಾಡಲಿರುವ ಬೃಹತ್ ಪ್ರಮಾಣದ ವಿದ್ಯುತ್ಶಕ್ತಿಯಿಂದ ಸೃಷ್ಟಿಯಾಗಲಿರುವ ವಿಕಿರಣ, ವಿದ್ಯುತ್ ಕಾಂತೀಯ ಅಲೆಗಳಿಂದ ಜನ, ಜಾನುವಾರುಗಳ ಆರೋಗ್ಯದ ಮೇಲಾಗಲಿರುವ ಕ್ಯಾನ್ಸರ್, ಬಂಜೆತನ ಮುಂತಾದ ಮಾರಣಾಂತಿಕಾ ಕಾಯಿಲೆ, ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇದೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಮುಂದೆ ಹಕ್ಕೊತ್ತಾಯಗಳು

►ಈಗಾಗಲೆ ಅಭಿವೃದ್ಧಿಗೊಂಡಿರುವ ಕೃಷಿಭೂಮಿ ಮತ್ತು ಸಮೃದ್ಧ ಕೃಷಿ ಸಂಪತ್ತು, ಅರಣ್ಯ ಸಂಪತ್ತು ನಾಶವಾಗುವುದನ್ನು ತಪ್ಪಿಸಬೇಕು. ಯೋಜನೆ ಅನಿವಾರ್ಯವಾಗಿದ್ದಲ್ಲಿ ಪರ್ಯಾಯ ಮಾರ್ಗದ ಮೂಲಕ ಅನುಷ್ಠಾನಗೊಳಿಸಬೇಕು.

►ಬ್ರಿಟಿಷರ ಕಾಲದ ಟೆಲಿಗ್ರಾಫ್ ಕಾಯ್ದೆ-1885ನ್ನು ಸಂಪೂರ್ಣ ರದ್ದುಗೊಳಿಸಿ, 2003ರ ಇಲೆಕ್ಟ್ರಿಸಿಟಿ ಕಾಯ್ದೆಯನ್ನು ವಿದ್ಯುತ್ ಪ್ರಸರಣ ಮಾರ್ಗ ಯೋಜನೆಗಳಿಗೆ ಅನ್ವಯಗೊಳಿಸಬೇಕು.

►ಈ ಯೋಜನೆ ಅನುಷ್ಠಾನಕ್ಕಾಗಿ ಗುತ್ತಿಗೆದಾರ ಕಂಪೆನಿಗೆ ನೀಡಲಾದ ಏಕ ಸ್ವಾಮ್ಯ ಪರಮಾಧಿಕಾರವನ್ನು ರದ್ದುಪಡಿಸಬೇಕು.

Tags

Kasaragodpower transmission line
share
ವಾರ್ತಾಭಾರತಿ
ವಾರ್ತಾಭಾರತಿ
Next Story
X