Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಶಿಕ್ಷಣದ ಜೊತೆ ಮಾನವೀಯ...

ಕೊಣಾಜೆ | ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳೂ ಅಗತ್ಯ : ಡಾ.ಪ್ರಸಾದ್ ಎಸ್.ಎನ್.

ವಾರ್ತಾಭಾರತಿವಾರ್ತಾಭಾರತಿ25 Nov 2025 4:15 PM IST
share
ಕೊಣಾಜೆ | ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳೂ ಅಗತ್ಯ : ಡಾ.ಪ್ರಸಾದ್ ಎಸ್.ಎನ್.
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್, ಮ್ಯಾನೇಜ್ ಮೆಂಟ್ ನ ಪದವಿ ದಿನಾಚರಣೆ

ಕೊಣಾಜೆ : ಜಗತ್ತು ಇಂದು ವಿಜ್ಞಾನ ತಂತ್ರಜ್ಞಾನದ ಪ್ರಭಾವದಿಂದ ವಿಸ್ತೃತವಾಗಿ ಬೆಳೆದು ನಿಂತಿದ್ದು, ಶಿಕ್ಷ‌ಣ, ಪರಿಶ್ರಮ, ಕೌಶಲ್ಯಗಳ ಮೂಲಕ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬೇಕು ಜೊತೆಗೆ ಪ್ರಾಮಾಣಿಕತೆ,‌ ಮಾನವೀಯ ಮೌಲ್ಯಗಳ ಮೂಲಕ ಸಮಾಜಕ್ಕೆ ನಮ್ಮದೇ ಕೊಡುಗೆ ನೀಡಬೇಕು ಎಂದು ಮೈಸೂರಿನ ಎಸ್ ಡಿಎಂ ಇನಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿರ್ದೇಶಕ ಡಾ.ಪ್ರಸಾದ್ ಎಸ್.ಎನ್. ಅವರು ಹೇಳಿದರು.

ಅವರು ದೇರಳಕಟ್ಟೆಯ ಯೆನೆಪೋಯ ವಿವಿಯ ಯೆಂಡೋರೆನ್ಸ್ ಸಭಾಂಗಣದಲ್ಲಿ ಮಂಗಳವಾರ ನಡೆದ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್ ಹಾಗೂ ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್ ಬಲ್ಮಠ, ಕೂಳೂರು ಮಂಗಳೂರು ಇದರ 6ನೇ ಪದವಿ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಗತ್ತು ಯಾರಿಗೂ ತಲೆಬಾಗುವುದಿಲ್ಲ. ಅದಕ್ಕೆ ಬದಲಾಗಿ ನಾವು ಜಗತ್ತಿಗೆ ತಮ್ಮ ಬದ್ಧತೆಯನ್ನು ತೋರಿಸಬೇಕು. ಮಾನಸಿಕ ಶಕ್ತಿ ದೈಹಿಕ ಶಕ್ತಿಯನ್ನು ರೂಪಿಸುತ್ತದೆ. ಉತ್ತಮ ನಡವಳಿಕೆ ಮತ್ತು ಕೊಡುಗೆಯ ಮೂಲಕ ಸಮಾಜದಲ್ಲಿ ಗೌರವವನ್ನು ಸಂಪಾದಿಸುವ ಮನೋಭಾವ ನಮ್ಮದಾಗಬೇಕು ಎಂದರು.

ಕೆಎಸ್ ಎ ಯೆನೆಪೋಯ ಇಂಟರ್ ನ್ಯಾಷನಲ್ ಸ್ಕೂಲ್ ಇದರ ಸಿಇಒ ಅರುಣ್ ಎ.ಭಾಗವತ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇತ್ತೀಚೆಗೆ ಜಗತ್ತು ವಿಜ್ಞಾನ ತಂತ್ರಜ್ಞಾನದ ಮೂಲಕ ಬದಲಾವಣೆ ಕಾಣುತ್ತಿದ್ದು, ಇದಕ್ಕೆ ಪೂರಕವಾಗಿ ನಾವು ಬೆಳೆಯಬೇಕಾದ ಅನಿವಾರ್ಯತೆ ಇದೆ. ತಂತ್ರಜ್ಞಾನ ಮತ್ತು ಮಾನವಶ್ರಮ ಜೊತೆಯಾಗಿ ಸಾಗಿದರೆ ನೈಜ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಯೆನೆಪೋಯ ವಿವಿಯ ಸಹಕುಲಪತಿ ಪ್ರೊ.ಶ್ರೀಪತಿ ರಾವ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಯೋಜಿತ ಕಾರ್ಯಯೋಜನೆಗಳೊಂದಿಗೆ ಮುನ್ನಡೆಯಬೇಕು. ಉತ್ತಮ ಸಂವಹನ, ಕೌಶಲ್ಯಗಳು, ಮೌಲ್ಯಗಳು ಭವಿಷ್ಯಕ್ಕೆ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್ ಹಾಗೂ ಕಾಮರ್ಸ್ ಮತ್ತು ಮ್ಯಾನೇಜ್ ಮೆಂಟ್ ನ ಪ್ರಾಂಶುಪಾಲರಾದ ಡಾ.ಜೀವನ್ ರಾಜ್ ಉಪಸ್ಥಿತರಿದ್ದರು.

ಕಾಮರ್ಸ್ ಮ್ಯಾನೇಜ್ಮೆಂಟ್ ನ ಡೀನ್ ಡಾ.ಶರೀನಾ ಪಿ ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ನಾರಾಯಣ ಸುಕುಮಾರ ವಂದಿಸಿದರು.

ಉಪನ್ಯಾಸಕರಾದ ಡಾ.ಶರೀನ ಶೇಖ್, ಚರಿತ್ರಾ ರೈ, ಪಿನಾಕಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X