Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶದ್ರೋಹ ಎಂದು ಪರಿಗಣಿಸಿ ʼಸುವರ್ಣ...

ದೇಶದ್ರೋಹ ಎಂದು ಪರಿಗಣಿಸಿ ʼಸುವರ್ಣ ನ್ಯೂಸ್ʼ ವಿರುದ್ಧ ಕಾನೂನು ಕ್ರಮವಾಗಬೇಕು : ಮುನೀರ್ ಕಾಟಿಪಳ್ಳ

ವಾರ್ತಾಭಾರತಿವಾರ್ತಾಭಾರತಿ11 May 2024 2:58 PM IST
share
ದೇಶದ್ರೋಹ ಎಂದು ಪರಿಗಣಿಸಿ ʼಸುವರ್ಣ ನ್ಯೂಸ್ʼ ವಿರುದ್ಧ ಕಾನೂನು ಕ್ರಮವಾಗಬೇಕು : ಮುನೀರ್ ಕಾಟಿಪಳ್ಳ

ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾನ್ಯ ಅಜಿತ್ ಹನುಮಕ್ಕನವರ್, ಇದು ಕಣ್ತಪ್ಪಿನಿಂದ ಆದ ತಪ್ಪೂ ಅಲ್ಲ, ವಿಷಾದದಿಂದ ಮುಗಿಯುವಂತದ್ದಲ್ಲ. ಭಾರತದ ಮುಸಲ್ಮಾನರಿಗೆ "ಪಾಕ್ ಧ್ವಜ" ವೂ ಹಿಂದುಗಳಿಗೆ ಭಾರತದ ರಾಷ್ಟ್ರ ಧ್ವಜವನ್ನೂ ಹಾಕಿರುವುದು ನಿಮ್ಮ (ಸುವರ್ಣ ವಾಹಿನಿ ಹಾಗೂ ಅಜಿತ್) ಮನಸ್ಥಿತಿಯ ಅನಾವರಣ ಅಷ್ಟೆ ಅಲ್ಲ, ಅದೊಂದು ದುರುದ್ದೇಶ ಪೂರ್ವಕ ಕೃತ್ಯ, ಭಾರತೀಯ ಮುಸ್ಲಿಮರ ಮೇಲಿನ ಸಂಘಟಿತ ಪಿತೂರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಸಂಕೇತಗಳು, ಅದರ ಜೊತೆಗಿನ ನಂಜು ಭರಿತ ಸತತ ಸುದ್ದಿಗಳ ಮೂಲಕ ನೀವು ಭಾರತದ ಮುಸಲ್ಮಾನರನ್ನು "ಅನ್ಯ" ರನ್ನಾಗಿಸುವ "ರಾಜಕಾರಣ" ವನ್ನು ಯಶಸ್ವಿಯಾಗಿ ಮಾಡುತ್ತಲೇ ಬಂದಿದ್ದೀರಿ. ಇದೆಲ್ಲದರಿಂದ ಭಾರತದ ತುಂಬೆಲ್ಲಾ ಗುಣಪಡಿಸಲಾಗದಷ್ಟು ಗಾಯಗಳಾಗಿವೆ. ಸಾವಿರಾರು ಮನೆಗಳ ಬೆಳಕೇ ನಂದಿದೆ. ಇದೀಗ ಅಂತಹ ಪಿತೂರಿ ಪ್ರಕರಣದಲ್ಲಿ ಸಾಕ್ಷಿ ಸಮೇತ ಸಿಕ್ಕಿ ಬಿದ್ದಿದ್ದೀರಿ. ನಿಮ್ಮ ಭಕ್ತ ಮಂಡಳಿಯ ಮೂಲಕ "ಎಡಿಟೆಡ್ ಪೋಸ್ಟರ್" ಎಂದು ತಿಪ್ಪೆ ಸಾರಿಸಲು ಹೋಗಿ ವಿಫಲರಾದಿರಿ. ಈಗ "ಕಣ್ತಪ್ಪು, ವಿಷಾದ" ಎಂದು ಪ್ರಕರಣವನ್ನು ಗೌಣಗೊಳಿಸಲು ಹತಾಷ ಯತ್ನ ನಡೆಸುತ್ತಿದ್ದೀರಿ. ನಿಮ್ಮ ಇಂತಹ ಆಟಗಳನ್ನು ನಾಡು ನೋಡುತ್ತಲೇ ಬಂದಿದೆ ಎಮದು ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮವು ಮಾಧ್ಯಮವಾಗಿರಬೇಕೆ ಹೊರತು ಬಡಪಾಯಿಗಳ ರಕ್ತ ಹರಿಸುವ ಸಂಚುಕೋರ ಗುಂಪು ಆಗಬಾರದು. ರಾಜ್ಯ ಸರಕಾರ ಇದನ್ನು "ವಿಷಾದ" ದಲ್ಲಿ ಮುಗಿಸಬಾರದು. "ದೇಶ ದ್ರೋಹ, ಆಂತರಿಕ ದಂಗೆ" ಗೆ ಪ್ರಚೋದನೆ ಎಂದು ಪರಿಗಣಿಸಿ ಬಿಗಿಯಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ .


share
ವಾರ್ತಾಭಾರತಿ
ವಾರ್ತಾಭಾರತಿ
Next Story
X