Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೀವ ರಕ್ಷಕ ಚಾರ್ಮಾಡಿ ಹಸನಬ್ಬ ಕನ್ನಡ...

ಜೀವ ರಕ್ಷಕ ಚಾರ್ಮಾಡಿ ಹಸನಬ್ಬ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ31 Oct 2023 3:44 PM IST
share
ಜೀವ ರಕ್ಷಕ ಚಾರ್ಮಾಡಿ ಹಸನಬ್ಬ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸಮಾಜ ಸೇವೆಯನ್ನು ಅದರಲ್ಲೂ ಇತರರ ಪ್ರಾಣ ರಕ್ಷಣೆಯನ್ನೇ ತನ್ನ ಉಸಿರನ್ನಾಗಿಸಿಕೊಂಡಿರುವ ಚಾರ್ಮಾಡಿ ಹಸನಬ್ಬ ಅವರು ಕಳೆದ 38 ವರ್ಷಗಳಿಂದ ಸಾವಿರಾರು ಮಂದಿಯ ಪ್ರಾಣವನ್ನು ಜಾತಿ, ಮತ ಭೇದವಿಲ್ಲದೆ ರಕ್ಷಿಸುವ ಮೂಲಕ ಸಾರ್ವಜನಿಕ ವಲಯದಲ್ಲಿ ಚಿರಪರಿಚಿತರಾಗಿದ್ದಾರೆ. ಅವರ ಈ ಅನನ್ಯ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರವು ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಲಾಲ ಎಂಬಲ್ಲಿನ ಇಜ್ಜಬ್ಬ-ಬೀಫಾತಿಮಾ ದಂಪತಿಯ ಪುತ್ರನಾಗಿ 1951ರಲ್ಲಿ ಜನಿಸಿದ ಹಸನಬ್ಬ ತುತ್ತು ಅನ್ನಕ್ಕೆ ಕಷ್ಟವಿದ್ದ ಆ ಕಾಲದಲ್ಲಿ ಕೇವಲ ಒಂದನೇ ತರಗತಿಯಷ್ಟೇ ಕಲಿತರು. ತನ್ನ 8ನೆ ವಯಸ್ಸಿನಲ್ಲಿ ಬಾಳೆಹೊನ್ನೂರಿಗೆ ತೆರಳಿ ಚಿಕ್ಕ ಹೊಟೇಲೊಂದರಲ್ಲಿ ಲೋಟ ತೊಳೆಯುವ ಕೆಲಸ ಮಾಡುತ್ತಲೇ ಹೊಟೇಲ್ ಉದ್ಯಮದ ಕಲೆ ಕರಗತ ಮಾಡಿಕೊಂಡರು. ತನ್ನ 18ನೆ ವಯಸ್ಸಿನಲ್ಲಿ ಹುಟ್ಟೂರಿಗೆ ಮರಳಿ ಸಣ್ಣ ಹೋಟೆಲ್ ತೆರೆದರು. ಪಕ್ಕದಲ್ಲೇ ಮನೆಯನ್ನೂ ಕಟ್ಟಿ ಸಂಸಾರ ಸಾಗಿಸಿದರು.

ಹೊಟೇಲ್‌ಗೆ ಬರುತ್ತಿದ್ದ ಲಾರಿ ಚಾಲಕರು ನೀಡಿದ ಮಾಹಿತಿಯ ಮೇರೆಗೆ ಆ ಮಾರ್ಗದಲ್ಲಿ ದಿನನಿತ್ಯ ನಡೆಯುವ ಅಪಘಾತ ಗಳ ಬಗ್ಗೆ ಅರಿತುಕೊಂಡ ಹಸನಬ್ಬ 1985ರಲ್ಲಿ ಟ್ರಕ್ ಚಾಲಕರ ಪ್ರಾಣ ಉಳಿಸುವ ಮೂಲಕ ಸಮಾಜ ಸೇವೆಗೆ ಮುಂದಾ ದರು. ತನ್ನ ಮಾರುತಿ 800 ಕಾರಿನಲ್ಲಿ ಆಪ್ತ ಗೆಳೆಯರ ಜೊತೆಗೂಡಿ ಅಪಘಾತ ನಡೆದ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆರಂಭಿಸಿದರು.

ಒಮ್ಮೆ ಚಿಕ್ಕಮಗಳೂರಿನಿಂದ ಪ್ರಯಾಣಿಸುತ್ತಿದ್ದ ತಂದೆ-ಮಗ ಚಾರ್ಮಡಿ ಘಾಟ್‌ನಲ್ಲಿ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಮಾಹಿತಿ ತಿಳಿದ ಹಸನಬ್ಬ ತಕ್ಷಣ ಅಲ್ಲಿಗೆ ಧಾವಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು. 11 ದಿನಗಳ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡ ಆ ತಂದೆ-ಮಗ ಗುಣಮುಖರಾದ ಬಳಿಕ ಹಸನಬ್ಬನ ಮನೆಗೆ ತೆರಳಿ ಕೃತಜ್ಞತೆ ಸಲ್ಲಿಸಿದರು. ಆವಾಗ ‘ಸಮಾಜ ಸೇವೆಯನ್ನು ಮುಂದುವರಿಸು’ ಎಂಬ ತನ್ನ ತಾಯಿಯ ಪ್ರೋತ್ಸಾಹದ ಮಾತಿನಿಂದ ಸ್ಫೂರ್ತಿ ಪಡೆದ ಹಸನಬ್ಬ ಬಳಿಕ ಹಿಂದಿರುಗಿ ನೋಡಲಿಲ್ಲ. ಚಾರ್ಮಾಡಿ ಘಾಟಿ ಪ್ರದೇಶದ ಎಂತಹ ದುರ್ಗಮ ಹಾದಿಗೂ ತೆರಳಿ ಗಾಯಾಳುಗಳ ಪ್ರಾಣ ರಕ್ಷಣೆಯನ್ನೇ ತನ್ನ ಉಸಿರನ್ನಾಗಿಸಿಕೊಂಡಿದ್ದಾರೆ.

ಅಪಘಾತದ ಪ್ರಾಣ ರಕ್ಷಣೆ ಮಾತ್ರವಲ್ಲ ಘಾಟಿಯಲ್ಲಿ ಭೂ ಕುಸಿತದ ಬಗ್ಗೆಯೂ ಮಾಹಿತಿ ಪಡೆದು ಮರಗಳನ್ನು ಕಡಿಯಲು, ರಸ್ತೆಯನ್ನೂ ತೆರವುಗೊಳಿಸಲು ಮುಂದಾಗುತ್ತಿದ್ದರು. ಒಮ್ಮೆ ಕಡಿದ ಮರವು ಸ್ವತಃ ಚಾರ್ಮಾಡಿ ಹಸನಬ್ಬರ ಕಾರಿನ ಮೇಲೆ ಬಿದ್ದು ಹಾನಿಯಾಗಿತ್ತು. ಆದರೂ ಧೃತಿಗೆಡದ ಹಸನಬ್ಬ ಮರಗಳನ್ನು ಕಡಿಯುವ ಕೆಲಸ ಪೂರ್ತಿಗೊಳಿಸಿದ ಬಳಿಕವೇ ಅಲ್ಲಿಂದ ವಿರಮಿಸುತ್ತಿದ್ದರು.

ಕೊಲೆ, ದರೋಡೆ ಸಹಿತ ಅನೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿದಾರರಾಗಿಯೂ ಚಾರ್ಮಾಡಿ ಹಸನಬ್ಬ ಪೊಲೀಸರಿಗೆ ಸಹಕರಿಸಿದ್ದಾರೆ.

ಚಾರ್ಮಾಡಿ ಜುಮಾ ಮಸೀದಿಯ ಅಧ್ಯಕ್ಷರಾಗಿ 1984ರಿಂದ 2015ರವರೆಗೆ ಕಾರ್ಯನಿರ್ವಹಿಸಿದ್ದರು. ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾಗಿದ್ದರು. ಮುಸ್ಲಿಂ ಐಕ್ಯತಾ ವೇದಿಕೆಯ ಸ್ಥಾಪಕ ಸದಸ್ಯರಾಗಿದ್ದರು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿದ್ದರು.

ಬೆಳ್ತಂಗಡಿ ತಾಲೂಕು ಮತ್ತು ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಬೆಂಗಳೂರಿನ ಅಖಿಲ ಭಾರತ ಚಾಲಕರ ಸಂಘದ ‘ಸಾರಥಿ ನಂಬರ್ 1’, ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ವರ್ಷದ ವ್ಯಕ್ತಿ ಪ್ರಶಸ್ತಿ’ ಎ ಶ್ಯಾಮರಾವ್ ಸ್ಮಾರಕ ಪ್ರಶಸ್ತಿ, ಬ್ಯಾರಿ ಸಾಹಿತ್ಯ ಅಕಾಡಮಿಯ ಸಹಯೋಗದಲ್ಲಿ ಆಳ್ವಾಸ್ ನುಡಿಸಿರಿ ಪ್ರಶಸ್ತಿಗಳಲ್ಲದೆ ಅನೇಕ ಸಂಘ-ಸಂಸ್ಥೆಗಳಿಂದ ಸನ್ಮಾನಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X