Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕೆಕೆಎಂಎಯಿಂದ ವಿದ್ಯಾರ್ಥಿ...

ಮಂಗಳೂರು: ಕೆಕೆಎಂಎಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಆರ್ಥಿಕ ನೆರವು

ಮರ್ಹೂಮ್ ಎಸ್.ಎಂ.ಬಶೀರ್ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ30 July 2023 9:58 PM IST
share
ಮಂಗಳೂರು: ಕೆಕೆಎಂಎಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಆರ್ಥಿಕ ನೆರವು

ಮಂಗಳೂರು, ಜು.30: ಕುವೈತ್ ಕೇರಳ ಮುಸ್ಲಿಮ್ ಅಸೋಸಿಯೇಶನ್(ಕೆಕೆಎಂಎ) ಕರ್ನಾಟಕ ಶಾಖೆಯ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಆರ್ಥಿಕ ನೆರವು ಮತ್ತು ಮರ್ಹೂಮ್ ಎಸ್.ಎಂ.ಬಶೀರ್ ಜೀವಮಾನ ಸಾಧನೆ ಪ್ರಶಸ್ತಿ ಸಮಾರಂಭ ರವಿವಾರ ಫಳ್ನೀರ್‌ನ ಯುನಿಟಿ ಆಸ್ಪತ್ರೆಯ ಬಳಿ ಇರುವ ಎಹ್ಸಾನ್ ಮಸೀದಿಯ ಎಚ್‌ಐಎಫ್ ಆಡಿಟೋರಿಯಂನಲ್ಲಿ ನಡೆಯಿತು.

ಸಮಾರಂಭವನ್ನು ಕೆಕೆಎಂಎ ಮಾಜಿ ಅಧ್ಯಕ್ಷ ಮತ್ತು ಟ್ರಸ್ಟಿ ಎನ್.ಎ.ಮುನೀರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 2002ರಲ್ಲಿ ಕೇವಲ 7 ಸದಸ್ಯರೊಂದಿಗೆ ಕುವೈತ್‌ನಲ್ಲಿ ಆರಂಭಗೊಂಡ ʼಕೆಕೆಎಂಎʼ ಸದ್ಯ 16 ಸಾವಿರ ಸದಸ್ಯರನ್ನು ಒಳಗೊಂಡಿದೆ. ಈ ಪೈಕಿ ಸಣ್ಣ, ಪುಟ್ಟ ಕೆಲಸಗಳಿಂದ ಹಿಡಿದು ವಿವಿಧ ವರ್ಗಗಳ ಉದ್ಯೋಗಿಗಳು ಸಂಘಟನೆಯಲ್ಲಿದ್ದಾರೆ. ಸದಸ್ಯರ ದುಡಿಮೆಯ ಅಲ್ಪ ಮೊತ್ತಗಳನ್ನು ಒಟ್ಟು ಸೇರಿಸಿ ಸಂಘಟನೆಯ ಸದಸ್ಯರು ಮೃತಪಟ್ಟಾಗ ಅವರ ಕುಟುಂಬಕ್ಕೆ ಫ್ಯಾಮಿಲಿ ಬೆನಿಫಿಟ್ ಸ್ಕೀಂ ಮೂಲಕ ನೆರವು ನೀಡುವುದು ಕೆಕೆಎಂಎ ಮುಖ್ಯ ಧ್ಯೇಯವಾಗಿದೆ. ಇದುವರೆಗೆ 15 ಕೋಟಿ ರೂ.ವನ್ನು ಕೆಕೆಎಂಎ ಮೂಲಕ ಸಂಗ್ರಹಿಸಲಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಕೆಎಂಎ ಕರ್ನಾಟಕ ಶಾಖೆ ಅಧ್ಯಕ್ಷ ಯೂಸುಫ್ ರಶೀದ್, ಕೆಕೆಎಂಎ ಅನಿವಾಸಿ ಭಾರತೀಯರ ಶ್ರಮದ ಫಲವಾಗಿ ಬೆಳೆದು ಬಂದ ವಿಶೇಷ ಸಂಘಟನೆಯಾಗಿದೆ. ಈ ವರೆಗೆ 250 ಮಂದಿ ಸದಸ್ಯರು ಮೃತಪಟ್ಟಿದ್ದಾರೆ. ಈ ಪೈಕಿ 241 ಸದಸ್ಯರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗಿದೆ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಉದ್ದೇಶವನ್ನು ಸಂಘಟನೆ ಹೊಂದಿದೆ. ಕರ್ನಾಟಕ ಶಾಖೆಯ ಮಹತ್ವದ ಯೋಜನೆಯಾದ ‘ಕನಸಿನ ಮನೆ’ ಮೂಲಕ ಅರ್ಹ 14 ಬಡ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ. ಈ ಬಾರಿಯೂ ಎರಡು ಮನೆಗಳನ್ನು ನಿರ್ಮಿಸಿ ಅರ್ಹರಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಕೆಎಂಎ ಕರ್ನಾಟಕ ರಾಜ್ಯಾಧ್ಯಕ್ಷ ಎಸ್.ಎಂ.ಫಾರೂಕ್ ದಿವಂಗತ ಎಸ್.ಎಂ.ಬಶೀರ್ ಸಂಘಟನೆಯ ಪ್ರೇರಕ ಶಕ್ತಿಯಾಗಿದ್ದರು. ಅವರು ಸಂಘಟನೆಗಾಗಿ ಬಹಳಷ್ಟು ತ್ಯಾಗ ಮಾಡಿದ್ದಾರೆ ಎಂದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಡಿಯನ್ ಡಿಸೈನ್ ಸ್ಕೂಲ್‌ನ ಅಧ್ಯಕ್ಷ ಮತ್ತು ಆರ್ಕಿಟೆಕ್ಟ್ ಎ.ಆರ್.ಮುಹಮ್ಮದ್ ನಿಸಾರ್ ಮಾತನಾಡಿ, ಕೆಕೆಎಂಎನ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಮುಂದಿನ ವರ್ಷ ತಮ್ಮ ಸಂಸ್ಥೆಯ ವತಿಯಿಂದ ಒಂದು ವಿದ್ಯಾರ್ಥಿಗೆ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿ ಹಸನ್ ಯೂಸುಫ್‌ರಿಗೆ ಮರ್ಹೂಮ್ ಎಸ್.ಎಂ.ಬಶೀರ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭ ಸಂಘಟನೆಗಾಗಿ ನೀಡಿದ ಕೊಡುಗೆಗಾಗಿ ಕೆಕೆಎಂಎ ಕರ್ನಾಟಕ ರಾಜ್ಯಾಧ್ಯಕ್ಷರ ಎಸ್.ಎಂ.ಫಾರೂಕ್‌ರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ಸಂಘಟನೆಯ ಸದಸ್ಯರ 9 ಕುಟುಂಬಗಳಿಗೆ ಫ್ಯಾಮಿಲಿ ಬೆನಿಫಿಟ್ ಸ್ಕೀಮ್ ಮೂಲಕ ನೆರವು ನೀಡಲಾಯಿತು. ಕಳೆದ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸದಸ್ಯರ 16 ವಿದ್ಯಾರ್ಥಿಗಳಿಗೆ ಸ್ಟೂಡೆಂಟ್ ಅವಾರ್ಡ್ ವಿತರಿಸಲಾಯಿತು. 10 ಮಂದಿ ಡಯಾಲಿಸಿಸ್‌ಗೆ ರೋಗಿಗಳಿಗೆ ಆರ್ಥಿಕ ನೆರವು ನೀಡಲಾಯಿತು. ಐವರು ವಿದ್ಯಾರ್ಥಿಗಳಿಗೆ ಮರ್ಹೂಮ್ ಎಸ್.ಎಂ.ಬಶೀರ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಎಸ್.ಎಂ. ಗ್ರೂಪ್ ಆಫ್ ಕಂಪೆನೀಸ್‌ನ ಅಧ್ಯಕ್ಷ ಎಸ್.ಎಂ.ಬಾಷಾ, ಎಚ್‌ಐಎಫ್ ಮಂಗಳೂರು ಇದರ ಅಧ್ಯಕ್ಷ ಎ.ಕೆ.ನಾಝಿಮ್, ಕೆಕೆಎಂಎ ಪದಾಧಿಕಾರಿಗಳಾದ ಮುಹಮ್ಮದ್ ಅಮೀನ್, ಮುನೀರ್ ಕೋಡಿ ಉಪಸ್ಥಿತರಿದ್ದರು.

ಹಾಫಿಝ್ ಆದಂ ಹಾಯಿಲ್ ಫಾರೂಕ್ ಕಿರಾಅತ್ ಪಠಿಸಿದರು. ಕೆಕೆಎಂಎ ಸದಸ್ಯರಾದ ಮುಹಮ್ಮದ್ ಅಮೀನ್ ಸುಹೈಲ್ ಸ್ವಾಗತಿಸಿದರು. ಅಬ್ದುಲ್ಲತೀಫ್ ವಂದಿಸಿದರು. ಉಝೈಫ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು.































share
ವಾರ್ತಾಭಾರತಿ
ವಾರ್ತಾಭಾರತಿ
Next Story
X