Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಇಂಡಿಯಾನಾ ಆಸ್ಪತ್ರೆಯ...

ಮಂಗಳೂರು | ಇಂಡಿಯಾನಾ ಆಸ್ಪತ್ರೆಯ ಅತ್ಯಾಧುನಿಕ ನಿಖರತೆಯ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Nov 2025 11:53 PM IST
share
ಮಂಗಳೂರು | ಇಂಡಿಯಾನಾ ಆಸ್ಪತ್ರೆಯ ಅತ್ಯಾಧುನಿಕ ನಿಖರತೆಯ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಚಾಲನೆ

ಮಂಗಳೂರು, ನ.28: ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗದ ಚಿಕಿತ್ಸಾ ಸೌಲಭ್ಯ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಉಪಕುಲಪತಿ ಡಾ.ಭಗವಾನ್ ಬಿ.ಸಿ. ಶ್ಲಾಘಿಸಿದ್ದಾರೆ.

ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಆಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ಆರಂಭಿಸಿರುವ ಹೈ ಪ್ರಿಸಿಶನ್ ಲೇಸರ್ ಆಂಜಿಯೋಪ್ಲಾಸ್ಟಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ನಗರದ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಯುವ ಜನರಲ್ಲಿ ಹೆಚ್ಚುತ್ತಿದೆ.ನಮ್ಮ ಆಹಾರ ಪದ್ಧತಿ, ಜೀವನ ಪದ್ಧತಿ ವಂಶ ಪಾರಂಪ ರ್ಯವಾಗಿ ಬಂದಿರುವ ಕೆಲವು ಕಾರಣಗಳಿವೆ. ಆ್ಯಂಜಿಯೋಪ್ಲಾಸ್ಟಿ ಪ್ರಕರಣಗಳ ಪ್ರಮಾಣವೂ ಹೆಚ್ಚುತ್ತಿದೆ. ಪ್ರಸಕ್ತ ಕಾಲಘಟ್ಟದಲ್ಲಿ ಉತ್ತಮ ಆರೋಗ್ಯ ಮತ್ತು ದೀರ್ಘ ಆಯುಷ್ಯದ ಬಗ್ಗೆ ಚಿಂತನೆ ನಡೆಯುತ್ತಿದೆ. ಇಂಡಿಯಾನಾ ಆಸ್ಪತ್ರೆಯಲ್ಲಿ ಲೇಸರ್ ಮೂಲಕ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಸಾಕಷ್ಟು ಹೃದ್ರೋಗಿಗಳಿಗೆ ಸಹಕಾರಿಯಾಗಲಿದೆ ಎಂದು ಡಾ.ಭಗವಾನ್ ಹೇಳಿದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಇಂಡಿಯಾನಾ ಹಾಸ್ಪಿಟಲ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಇಂಟರ್‌ವೆನ್ಯನಲ್ ಕಾರ್ಡಿಯಾಲಜಿಸ್ಟ್ ಡಾ.ಯೂಸುಫ್ ಎ. ಕುಂಬಳೆ, ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೊದಲ ಬಾರಿಗೆ ಇಂಡಿಯಾನಾ ಆಸ್ಪತ್ರೆ ಆರಂಭಿಸಿದೆ. ಇದು ಹೃದ್ರೋಗ ಚಿಕಿತ್ಸೆಯಲ್ಲಿ ಮತ್ತೊಂದು ಮಹತ್ವದ ಮುನ್ನಡೆ ಎಂದರು.

ಸಾಮಾನ್ಯವಾಗಿ, ಹೆಚ್ಚಿನ ಹೃದಯ ಬ್ಲಾಕ್‌ಗಳಿಗೆ ಬೈಪಾಸ್ ಶಸ್ತ್ರಚಿಕಿತ್ಸೆಯೇ ಅಂತಿಮ ಆಯ್ಕೆಯಾಗಿತ್ತು. ಆದರೆ ಸೈಂಟಿಂಗ್ ಹಾಗೂ ಇತರ ಇಂಟರ್‌ವೆನ್ಶನಲ್ ಕಾರ್ಡಿಯಾಲಜಿ ತಂತ್ರಜ್ಞಾನಗಳ ಅಭಿವೃದ್ಧಿಯಿಂದ ಇಂದು ಕೇವಲ ಶೇ.10 ರೋಗಿಗಳಿಗೆ ಮಾತ್ರ ಬೈಪಾಸ್ ಅಗತ್ಯವಿದೆ. ದೇಶದಲ್ಲಿ ವೇಗವಾದ ಗುಣಮುಖ ಮತ್ತು ಸುರಕ್ಷಿತ ಚಿಕಿತ್ಸೆ ಬಯಸುವ ರೋಗಿಗಳಿಗೆ ಲೇಸರ್ ಆ್ಯಂಜಿಯೋಪ್ಲಾಸ್ಟಿ ಮುಂದಿನ ದಿನಗಳಲ್ಲಿ ಪ್ರಮುಖ ಚಿಕಿತ್ಸಾ ಆಯ್ಕೆಯಾಗುವ ಸಾಧ್ಯತೆ ಇದೆ. ಪ್ರಸಕ್ತ ಲಭ್ಯವಾಗಿರುವ ಲೇಸರ್‌ಆ್ಯಂಜಿಯೋಪ್ಲಾಸ್ಟಿ ಮುಂದಿನ ದಿನಗಳಲ್ಲಿ ಹೃದ್ರೋಗ ಚಿಕಿತ್ಸೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ ಎಂದು ಡಾ.ಯೂಸುಫ್ ಕುಂಬಳೆ ತಿಳಿಸಿದ್ದಾರೆ.

ಇದು ಕನಿಷ್ಠ ಆಕ್ರಮಣಕಾರಿ, ಕುಗ್ಗಿದ ಜಟಿಲತೆ, ವೇಗವಾದ ಚೇತರಿಕೆ ಮತ್ತು ಕಠಿಣ ಬ್ಲಾಕೇಜ್ ಗಳಲ್ಲಿಯೂ ಪರಿಣಾಮಕಾರಿಯಾಗಿ ರೋಗಿಯ ಚೇತರಿಕೆಗೆ ಸಹಕಾರ ನೀಡುವ ಮೂಲಕ ಆಧುನಿಕ ಹೃದ್ರೋಗ ಚಿಕಿತ್ಸೆಯಲ್ಲಿ ಮಹತ್ವದ ಪ್ರಗತಿಯನ್ನು ಸೂಚಿಸುತ್ತದೆ. ಈ ತಂತ್ರಜ್ಞಾನವು ಬ್ಲಾಕೇಜ್ ಸುತ್ತಲಿನ ಆರೋಗ್ಯಕರ ಕಣಗಳಿಗೆ ಅತ್ಯಲ್ಪ ಪ್ರಮಾಣದ ಪ್ರತಿಕೂಲ ಪರಿಣಾಮ ಉಂಟಾಗುವಂತೆ ಮಾಡಿದರೂ, ಅತಿ ನಿಖರವಾದ ಚಿಕಿತ್ಸೆ ನೀಡುತ್ತದೆ. ಇದು ವಿಶೇಷವಾಗಿ ಸಂಕೀರ್ಣ ಅಥವಾ ಕ್ಯಾಲ್ಸಿಫೈಡ್ ಲೀಷನ್‌ಗಳನ್ನು ನಿರ್ವಹಿಸುವಲ್ಲಿ ಪರಿಣಾಮಕಾರಿ. ಸಾಮಾನ್ಯ ಬಲೂನ್ ಆ್ಯಂಜಿಯೋಪ್ಲಾಸ್ಟಿಗಿಂತ ಹೆಚ್ಚಿನ ಲಾಭ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಲೇಸರ್ ಆ್ಯಂಜಿಯೋಪ್ಲಾಸ್ಟಿ ಕಠಿಣ ಹೃದಯ ಸಮಸ್ಯೆಗಳಲ್ಲಿ ಹೆಚ್ಚಿನ ಯಶಸ್ಸು ಹಾಗೂ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಇನ್-ಸೈಂಟ್ ರೀಸ್ಟೆನೋಸಿಸ್ ಪ್ರಕರಣಗಳಲ್ಲಿ ಇದು ಗಮನಾರ್ಹ ಸುಧಾರಣೆಯನ್ನು ತೋರಿಸಿದ್ದು, ಅನೇಕ ಬಾರಿ ಹೆಚ್ಚುವರಿ ಸ್ಟೆಂಟ್ ಅಳವಡಿಕೆಯ ಅಗತ್ಯವನ್ನೇ ಕಡಿಮೆ ಮಾಡುತ್ತದೆ. ಜೊತೆಗೆ ತೀವ್ರ ಹೃದಯಾಘಾತ ಅಥವಾ ಆಕ್ಯೂಟ್ ಕೊರೋನರಿ ಸಿಂಡ್ರೋ ಮ್ ಸಂದರ್ಭದಲ್ಲಿ ನಡೆಯುವ ಪರ್ಕ್ಯುಟೇನಿಯಸ್ ಕೊರೋನರಿ ಇಂಟರ್‌ವೆನ್ಯನ್ ವೇಳೆ ಟ್ರೋಂಬೋಟಿಕ್ ಲೀಷನ್‌ಗಳಿಗೆ ಇದು ಬಹಳ ಪರಿಣಾಮಕಾರಿಯಾಗಿದೆ ಎಂದರು.

ಇಂಡಿಯಾನಾ ಆಸ್ಪತ್ರೆಯು ವೈದ್ಯಕೀಯ ಮೈಲಿಗಲ್ಲುಗಳ ವಿಶಿಷ್ಟ ದಾಖಲೆಯನ್ನು ಹೊಂದಿದೆ ಎಂಬುದನ್ನು ನೆನಪಿಸಿಕೊಳ್ಳಬಹುದು. ಅದು ಮೊದಲ ಒಸಿಟಿ ಇಂಪ್ಲಾಂಟೇಶನ್ ಅನ್ನು ನಡೆಸಿತು. ಅದು ಒಂದು ವರ್ಷದ ಮಗುವಿನ ಮೇಲೆ ಮಹಾಪಧಮನಿಯ ಸ್ಟೆನೋಸಿಸ್‌ಗೆ ಮೊದಲ ಮಕ್ಕಳ ಶಸ್ತ್ರ ಚಿಕಿತ್ಸೆಯಾಗಿದೆ. ಈ ಪ್ರದೇಶದಲ್ಲಿ ಮೊದಲ ವಾಲ್ವ್-ಇನ್-ವಾಲ್ವ್ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಅದರ ಅತ್ಯಂತ ಗಮನಾರ್ಹ ಸಾಧನೆಗಳಲ್ಲಿ ಒಂದಾದ ತಂಡವು 12 ಗಂಟೆಗಳ ನವಜಾತ ಶಿಶುವಿನ ಮೇಲೆ ಮಹಾಪಧಮನಿಯ ವಾಲ್ವೋಟಮಿಯನ್ನು ನಡೆಸುವ ಮೂಲಕ ಶಿಶುವಿನ ಜೀವ ಉಳಿಸಿತು. ಸುಧಾರಿತ ಹೃದಯರಕ್ತನಾಳದ ಆರೈಕೆಯಲ್ಲಿ ಇಂಡಿಯಾನಾ ಆಸ್ಪತ್ರೆ 2019 ರಲ್ಲಿ ಕರಾವಳಿ ಕರ್ನಾಟಕದ ಮೊದಲ ಟ್ರಾನ್ಸ್-ಕ್ಯಾತಿಟರ್ ಮಹಾಪಧಮನಿಯ ಕವಾಟ ಬದಲಿ (ಖಿಂಗಿI/ಖಿಂಗಿಖ) ಅನ್ನು ನಡೆಸಿತು ಎಂದರು.

ಇದೇವೇಳೆ ಫಾತಿಮಾ ಫೌಂಡೇಶನ್ ವತಿಯಿಂದ ಇಂಡಿಯಾನಾ ಹಾಸ್ಪಿಟಲ್ ಎಂ.ಡಿ. ಡಾ.ಯೂಸುಫ್ ಕುಂಬ್ಳೆಯವರನ್ನು ಸನ್ಮಾನಿಸಲಾಯಿತು. ಎಂ.ಬಿ.ಸದಾಶಿವ ಸನ್ಮಾನಿತರನ್ನು ಪರಿಚಯಿಸಿದರು.

ಇಂಡಿಯಾನಾ ಹಾಸ್ಪಿಟಲ್ ಆಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನ ಚೇರ್‌ಮ್ಯಾನ್ ಪ್ರೊ.ಡಾ.ಅಲಿ ಕುಂಬ್ಳೆ, ನಿರ್ದೇಶಕ ಡಾ.ನಿಹಾಲ್ ಅಲಿ ಕುಂಬ್ಳೆ, ವೈದ್ಯಕೀಯ ನಿರ್ದೇಶಕ ಡಾ.ಅಪೂರ್ವಾ ಶ್ರೀಜಯದೇವ್, ವೈದ್ಯಕೀಯ ಮೆಡಿಕಲ್ ಅಡ್ಮಿನಿಸ್ಟ್ರೇಶನ್ ನಿರ್ದೇಶಕ ಡಾ.ಆದಿತ್ಯ ಭಾರಧ್ವಾಜ್, ಹೃದ್ರೋಗ ತಜ್ಞ ಆರ್.ಎಲ್. ಕಾಮತ್ ಹಾಗೂ ಹಿರಿಯ ವೈದ್ಯ ಡಾ.ಮುಹಮ್ಮದ್ ಇಸ್ಮಾಯೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X