Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಎನ್ಐಟಿಕೆಯ ಡಾ.ಸೌರವ್ ಕಾಂತಿ...

ಮಂಗಳೂರು | ಎನ್ಐಟಿಕೆಯ ಡಾ.ಸೌರವ್ ಕಾಂತಿ ಅವರ ಸ್ಮಾರ್ಟ್ ಎಕ್ಸ್ ಪ್ರಾಜೆಕ್ಟ್ ಗೆ 1.19 ಕೋಟಿ ರೂ. ಅನುದಾನ

ವಾರ್ತಾಭಾರತಿವಾರ್ತಾಭಾರತಿ15 Dec 2025 9:47 PM IST
share
ಮಂಗಳೂರು | ಎನ್ಐಟಿಕೆಯ ಡಾ.ಸೌರವ್ ಕಾಂತಿ ಅವರ ಸ್ಮಾರ್ಟ್ ಎಕ್ಸ್ ಪ್ರಾಜೆಕ್ಟ್ ಗೆ 1.19 ಕೋಟಿ ರೂ. ಅನುದಾನ
ಆಸ್ಟ್ರೇಲಿಯಾ-ಭಾರತ ಶಿಕ್ಷಣ, ಕೌಶಲ್ಯ ಮಂಡಳಿಯ 3ನೇ ಸಭೆ

ಮಂಗಳೂರು, ಡಿ. 15: . ಆಸ್ಟ್ರೇಲಿಯಾ-ಭಾರತ ಶಿಕ್ಷಣ ಮತ್ತು ಕೌಶಲ್ಯ ಮಂಡಳಿಯು ಸುರತ್ಕಲ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (ಎನ್ಐಟಿಕೆ ) ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಸೌರವ್ ಕಾಂತಿ ಆದ್ಯಾ ಅವರಿಗೆ ನಗರಗಳಲ್ಲಿ ಸಂಚಾರ ನಿರ್ವಹಣೆಯ ಮೇಲೆ ಕೇಂದ್ರೀಕೃತಾ ಸ್ಮಾರ್ಟ್ ಎಕ್ಸ್ ಪ್ರಾಜೆಕ್ಟ್ ತಯಾರಿಸಲು 1,19,25,000 ರೂ. ಅನುದಾನ ಮಂಜೂರು ಮಾಡಿದೆ.

ಹೊಸದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ-ಭಾರತ ಶಿಕ್ಷಣ ಮತ್ತು ಕೌಶಲ್ಯ ಮಂಡಳಿಯ (ಎಐಇಎಸ್ಸಿ) 3ನೇ ಸಭೆಯಲ್ಲಿ ಸ್ಮಾರ್ಟ್ಎಕ್ಸ್ ಪ್ರಾಜೆಕ್ಟ್ ಸೇರಿದಂತೆ 10 ಎಸ್ಪಿಎಆರ್ಸಿ ಯೋಜನೆಗಳಿಗೆ 9.84 ಕೋಟಿ ರೂ. ಗಳು ಮಂಜೂರಾಗಿದೆ. ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನಗಳು, ಜೀವವೈವಿಧ್ಯ, ಮೆಡ್ಟೆಕ್, ಸುಸ್ಥಿರತೆ, ಸ್ಮಾರ್ಟ್ ಚಲನಶೀಲತೆ ಮತ್ತು ಬಾಹ್ಯಾಕಾಶದಂತಹ ಯೋಜಗಳಿಗೆ ಅನುದಾನ ಮಂಜೂರಾಗಿದೆ.

ಭಾರತದ ನಗರ ರಸ್ತೆಗಳು ವಾಹನಗಳ ತೀವ್ರ ಹೆಚ್ಚಳದಿಂದ ಒತ್ತಡದಲ್ಲಿದೆ. ವಾಹನಗಳ ದಟ್ಟಣೆಯಿಂದಾಗಿ ದಿನನಿತ್ಯ ಆನೇಕ ಅಪಘಾತಗಳು ಸಂಭವಿಸುತ್ತಿವೆ. ಅಸುರಕ್ಷಿತ ಚಾಲನೆಯು ಇನ್ನಷ್ಟು ಸಮಸ್ಯೆಗೆ ಕಾರಣವಾಗುತ್ತದೆ. ಟ್ರಾಫಿಕ್ನ ಸವಾಲನ್ನು ಎದುರಿಸಲು ಸ್ಮಾರ್ಟ್ಎಕ್ಸ್ ಯೋಜನೆಯು ಸಿಗ್ನಲ್ ಮಾಡಲಾದ ಛೇದಕಗಳಲ್ಲಿ ಸಂಚಾರ ನಿರ್ವಹಣೆಯನ್ನು ಮರುಕಲ್ಪಿಸುವ ಪರಿವರ್ತಕ ವಾಹನ ಪಥ ಮುನ್ಸೂಚನಾ ಚೌಕಟ್ಟನ್ನು ನಿರ್ಮಿಸಲಿರುವುದನ್ನು ನಿರೀಕ್ಷಿಸಲಾಗಿದೆ.

ಈ ಪ್ರಾಜೆಕ್ಟ್ ಆಸ್ಟ್ರೇಲಿಯದ ಸಿಡ್ನಿಯ ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯದ ಪ್ರೊ. ಸಲೀಲ್ ಕನ್ಹೆರೆ ಮತ್ತು ಸಹ-ಪ್ರಧಾನ ಪರೀಕ್ಷಕ ಐಐಟಿ ಖರಗ್ಪುರದ ಅಸೋಸಿಯೇಟ್ ಪ್ರೊ. ಡಾ. ಸಂದೀಪ್ ಚಕ್ರವರ್ತಿ ಮತ್ತು ಸಿಡ್ನಿ ವಿಶ್ವವಿದ್ಯಾಲಯದ ಡಾ.ಕಾಂಚನಾ ತಿಲಕರತ್ನ ನೆರವಿನಲ್ಲಿ ನಿರ್ಮಾಣವಾಗಲಿದೆ.

ಮಂಜೂರಾತಿ ಪತ್ರ ವಿತರಣೆ :

ಸಮಾರಂಭದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಡಾ.ಆದ್ಯಾ ಅವರಿಗೆ ಮಂಜೂರಾತಿ ಪತ್ರ ಮತ್ತು ಫಲಕವನ್ನು ನೀಡಿದರು.

ಭಾರತದ ಉದ್ಯಮಶೀಲತೆ ಖಾತೆ ರಾಜ್ಯ ಸಚಿವ (ಸ್ವತಂತ್ರ) ಜಯಂತ್ ಚೌಧರಿ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಡಾ.ಸುಕಾಂತ ಮಜುಂದಾರ್ , ಆಸ್ಟ್ರೇಲಿಯಾ ಅಂತರ್ರಾಷ್ಟ್ರೀಯ ಶಿಕ್ಷಣ ಸಹಾಯಕ ಸಚಿವ ಜೂಲಿಯನ್ ಹಿಲ್, ಶಿಕ್ಷಣ ಸಚಿವ ಜೇಸನ್ ಕ್ಲೇರ್ , ಆಸ್ಟ್ರೇಲಿಯಾ ಸರಕಾರದ ಕೌಶಲ್ಯ ಮತ್ತು ತರಬೇತಿ ಸಚಿವ ಆಂಡ್ರ್ಯೂ ಗೈಲ್ಸ್ ಭಾಗವಹಿಸಿದ್ದರು.

ಸಾಂಸ್ಥಿಕ ಸಂಪರ್ಕಗಳನ್ನು ಬಲಪಡಿಸುವುದು, ಚಲನಶೀಲತೆಯ ಮಾರ್ಗಗಳನ್ನು ವಿಸ್ತರಿಸುವುದು ಮತ್ತು ನಿಯಂತ್ರಕ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸಿದ ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ಸಂಶೋಧನೆ, ಹಾಗೆಯೇ ಕೌಶಲ್ಯ, ತರಬೇತಿ ಮತ್ತು ಕಾರ್ಯಪಡೆಯ ಅಭಿವೃದ್ಧಿಯ ಪ್ರಗತಿಯನ್ನು ಇದೇ ಸಂದರ್ಭದಲ್ಲಿ ಪರಿಶೀಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X