Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕ್ರೈಸ್ತ ಸನ್ಯಾಸಿನಿಯರ ಬಂಧನ...

ಮಂಗಳೂರು: ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಛತ್ತೀಸ್‌ಗಢ ಸರಕಾರದ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Aug 2025 10:05 PM IST
share
ಮಂಗಳೂರು: ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಛತ್ತೀಸ್‌ಗಢ ಸರಕಾರದ ವಿರುದ್ಧ ಪ್ರತಿಭಟನೆ

ಮಂಗಳೂರು : ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲಿಗಟ್ಟಿದ ಛತ್ತೀಸ್‌ಗಢ ಸರಕಾರದ ಫ್ಯಾಸಿಸ್ಟ್ ಸರಕಾರದ ರಾಜಕಾರಣವನ್ನು ವಿರೋಧಿಸಿ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ನೇತೃತ್ವದಲ್ಲಿ ಸೋಮವಾರ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಧಾರ್ಮಿಕ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಫಾ. ಡೊಮಿನಿಕ್ ವಾಸ್ ಅವರು ಭಾರತದ ಕ್ರೈಸ್ತರು ಈ ಮಣ್ಣಿನ ಮಕ್ಕಳು, ದೇಶಭಕ್ತರು. ಮತಾಂಧರಲ್ಲ. ಒಂದು ಕೈಯಲ್ಲಿ ಬೈಬಲ್ ಹಿಡಿದುಕೊಂಡು ಮತ್ತು ಇನ್ನೊಂದು ಕೈಯಲ್ಲಿ ಸಂವಿಧಾನವನ್ನು ಹಿಡಿದು ಈ ದೇಶವನ್ನು ಅಪಾರವಾಗಿ ಪ್ರೀತಿಸುವರು ಎಂದು ಹೇಳಿದರು.

ಎಲ್ಲರ ಹಬ್ಬ ಹರಿದಿನಗಳಲ್ಲಿ ಎಲ್ಲರೂ ಒಂದಾಗಿ ಐಕ್ಯತೆಯಿಂದ ಪಾಲ್ಗೊಳ್ಳುವ ಅವಕಾಶ ಹಿಂದೆ ಇತ್ತು. ಆದರೆ ಇವತ್ತು ದೇಶದಲ್ಲಿ ವಿಷದ ಬೀಜವನ್ನು ಬಿತ್ತಲಾಗಿದೆ. ಇದು ನೋವು ತಂದಿದೆ. ನಾವು ಕ್ರೈಸ್ತರು ವಿಷದ ಬೀಜವನ್ನು ಬಿತ್ತಿಲ್ಲ. ಎಲ್ಲರನ್ನು ಗೌರವಿಸುತ್ತೇವೆ . ದೇಶದ ಶಿಕ್ಷಣ ಮತ್ತು ಆರೋಗ್ಯದ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದವರು ಕ್ರೈಸ್ತರು ಎಂದು ಹೇಳಿದರು.

ಕ್ರೈಸ್ತ ಭಗಿನಿಯರ ಮೇಲೆ ಹಾಕಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು. ಕನ್ಯಾಸ್ತ್ರೀಯರನ್ನು ಹಿಂಸಿಸಿದ ಜ್ಯೋತಿ ಶರ್ಮಾಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಮಂಗಳೂರಿನ ಸೈಂಟ್ ಅನ್ನಾ ಪ್ರಾವಿಡೆನ್ಸ್‌ನ ಸಿಸ್ಟರ್ ಸೆವೆರಿನ್ ಮೆನೆಜಸ್ ಮಾತನಾಡಿ ‘ಕ್ರಿಶ್ಚಿಯನ್ ಸಂಸ್ಥೆಗಳು ಜನರ ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಉನ್ನತಿಯೊಂದಿಗೆ ಅತ್ಯಂತ ದುರ್ಬಲರ ಸೇವೆ ಮಾಡುತ್ತದೆ ಎಂದು ಹೇಳಿದರು.

ಕೆಥೊಲಿಕ್‌ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೊ , ಕೆಥೊಲಿಕ್ ಸಭಾ ಮಂಗಳೂರು ಪ್ರಾಂತ್ಯದ ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ, ಆಲ್ವಿನ್ ಡಿ ಸೋಜ ಕಾರ್ಯದರ್ಶಿ ವಿಲ್ಮಾ ಮೊಂತೆೆರೊ ಮಾತನಾಡಿದರು.

ಮಾಜಿ ಶಾಸಕ ಜೆ.ಆರ್. ಲೋಬೊ, ಕ್ರೈಸ್ತ ಧರ್ಮಗುರುಗಳು, ಭಗಿನೀಯರು ಮತ್ತಿತರು ಭಾಗವಹಿಸಿ ದ್ದರು. ಕೆಥೊಲಿಕ್ ಸಭಾ ಮಂಗಳೂರಿನ ಅಧ್ಯಕ್ಷ ಸಂತೋಷ್ ಡಿ ಸೋಜ ಸ್ವಾಗತಿಸಿದರು. ಕೆೆಥೊಲಿಕ್ ಸಭಾದ ಮಾಜಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಧ್ಯಕ್ಷ ರೊಲ್ಪಿ ಡಿ ಕೋಸ್ಟಾ ಅವರು ಪ್ರಾಸ್ತಾವಿಕವಾಗಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X