Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಸಮಸ್ತ ಅಸ್ಮಿ ಆರ್ಟಲಿಯಾ...

ಮಂಗಳೂರು | ಸಮಸ್ತ ಅಸ್ಮಿ ಆರ್ಟಲಿಯಾ ಕಿಡ್ಸ್ ಫೆಸ್ಟ್: ಅಡ್ಯಾರ್ ಅಲಿಫ್ ಸ್ಕೂಲ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ15 Dec 2025 5:47 PM IST
share
ಮಂಗಳೂರು | ಸಮಸ್ತ ಅಸ್ಮಿ ಆರ್ಟಲಿಯಾ ಕಿಡ್ಸ್ ಫೆಸ್ಟ್: ಅಡ್ಯಾರ್ ಅಲಿಫ್ ಸ್ಕೂಲ್ ಚಾಂಪಿಯನ್

ಮಂಗಳೂರು, ಡಿ.15:ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಅಂಗೀಕೃತ ಅಸ್ಮಿ (Association of Samastha Minority Institutions) ಸಮೂಹ ಸಂಸ್ಥೆಗಳ ಮಂಗಳೂರು ವಿಭಾಗದ ಕಿಡ್ಸ್ ಫೆಸ್ಟ್ ನಗರದ ಬೆಂದೂರಿನ ಖಾಸಗಿ ಹಾಲ್ ನಲ್ಲಿ ನಡೆಯಿತು.

ಕರ್ನಾಟಕದಲ್ಲಿ ಮೊದಲ ಬಾರಿಗೆ ಆಯೋಜಿಸಲಾದ ಈ ಕಾರ್ಯಕ್ರಮಕ್ಕೆ ಅಲ್ ಝಯ್ಯಾನ್ ಸ್ಕೂಲ್ ವಿದ್ಯಾರ್ಥಿನಿ ಫಾತಿಮ ನಫೀಸಾ ಸಿಮ್ರಾ ಪವಿತ್ರ ಕುರಾನಿನ ಫಾತಿಹ ಪಠಿಸುವ ಮೂಲಕ ಚಾಲನೆ ನೀಡಿದರು.

ಅಸ್ಮಿ ಜನರಲ್ ಕನ್ವಿನರ್ ಪಿ.ಕೆ ಮುಹಮ್ಮದ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಸ್ಲಿಂ ಎಜುಕೇಶನಲ್ ಇನ್ಸ್ಟಿಟ್ಯೂಟ್ ಆಫ್ ಫೆಡರೇಷನ್ ನ ಅಧ್ಯಕ್ಷ ಪಿ.ಮೂಸಬ್ಬ ಬ್ಯಾರಿ ಜೋಕಟ್ಟೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರೇರಣಾ ತರಬೇತುದಾರರಾಗಿ ಮುಹಮ್ಮದ್ ರಫೀಕ್ ಮಾಸ್ಟರ್ ಪಾಲ್ಗೊಂಡಿದ್ದರು. ಸಮಸ್ತ ಶಿಕ್ಷಣ ಮಂಡಳಿಯ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಅಸ್ಮಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಸ್ಮಿ ಡೈರೆಕ್ಟರ್ ಎಂ.ವಿ. ಅಬ್ದುಲ್ ಮಜೀದ್ ಪ್ರಾಸ್ತವಿಕವಾಗಿ ಮಾತಾಡಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ನ ಹೈದರ್ ಬಿತ್ತ್ಪಾದೆ, ಕಿನ್ಯ ರೇಂಜ್ ಮದ್ರಸ ಮ್ಯಾಮೇಜ್ಮೆಂಟ್ ಅಧ್ಯಕ್ಷ ಇಬ್ರಾಹಿಂ ಕೊಣಾಜೆ ಭಾಗವಹಿಸಿದ್ದರು.

ಅಬ್ದುಲ್ ಜಬ್ಬಾರ್, ಪಿಪಿಸಿ ಮುಹಮ್ಮದ್ ಕಕ್ಕಾವು, ಎಂ.ವಿ. ಅಬ್ದುಲ್ ಮಜೀದ್, ನಾಫಿ ಹುದವಿ, ಶಿಹಾಬುದ್ದೀನ್, ಶಹೀನ್ ಅಹ್ಮದ್, ಉನೈಸ್ ಫೈಝಿ, ಹಬೀಲ್ ಅಹ್ಮದ್ ದಾರಿಮಿ, ಮುಹಮ್ಮದ್ ಸಫ್ವಾನ್, ಅಬ್ದುಲ್ ಹಮೀದ್ (ಅಮ್ಮಿ), ಲೀಡ್ ಸ್ಕೂಲ್ ಮ್ಯಾನೇಜ್ಮೆಂಟ್ ಮುಕ್ತಾರ್ ಮುಸ್ತಫಾ, ಪ್ರಾಂಶುಪಾಲ ಝಬೀನ ಮತ್ತು ಅಲಿಫ್ ಸ್ಕೂಲ್ ಪ್ರಾಂಶುಪಾಲ ಸಬೀನ ವಿವಿಧ ಕಾರ್ಯಗಳನ್ನು ನಿರ್ವಹಿಸಿದರು.

ಅಸ್ಮಿ ಸಮೂಹ ಸಂಸ್ಥೆಗಳ ಕರ್ನಾಟಕ ರಾಜ್ಯ ಸಂಯೋಜಕ ಅಬ್ದುಲ್ ಹಮೀದ್ ಕಣ್ಣೂರು ಸ್ವಾಗತಿಸಿದರು. ಅಲ್ ಝಯ್ಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲ ಅಫ್ರಾ ವಂದಿಸಿದರು. ಝುಹರಾ ಅಂಜುಮ್ ಕಾರ್ಯಕ್ರಮ ನಿರೂಪಿಸಿದರು.

ಅಲಿಫ್ ಸ್ಕೂಲ್ ಬೋರುಗುಡ್ಡೆ ಚಾಂಪಿಯನ್

ಕಿಡ್ಸ್ ಫೆಸ್ಟ್ ನಲ್ಲಿ ಹನ್ನೆರಡು ವಿಷಯಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಅಲಿಫ್ ಇಸ್ಲಾಮಿಕ್ ಪ್ರಿ ಸ್ಕೂಲ್ ಬೋರುಗುಡ್ಡೆ ಕಣ್ಣೂರು ಪ್ರಥಮ, ಲೀಡ್ ಪ್ರಿ ಸ್ಕೂಲ್ ಉಳ್ಳಾಲ ದ್ವಿತೀಯ, ಅಲ್ ಝಯ್ಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ವೆಲೆನ್ಸಿಯ ತೃತೀಯ ಸ್ಥಾನವನ್ನು ಪಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X