Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೊಂಟೆಪದವು ಗುಡ್ಡ ಕುಸಿತ ಪ್ರಕರಣ:...

ಮೊಂಟೆಪದವು ಗುಡ್ಡ ಕುಸಿತ ಪ್ರಕರಣ: ಧ್ವಂಸಗೊಂಡ ಮನೆಯಡಿಯಲ್ಲಿ ಸಿಲುಕಿರುವ ತಾಯಿ, ಇಬ್ಬರು ಮಕ್ಕಳು

ಓರ್ವ ಮಹಿಳೆ ಮೃತ್ಯು, ಇಬ್ಬರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ30 May 2025 10:29 AM IST
share
ಮೊಂಟೆಪದವು ಗುಡ್ಡ ಕುಸಿತ ಪ್ರಕರಣ: ಧ್ವಂಸಗೊಂಡ ಮನೆಯಡಿಯಲ್ಲಿ ಸಿಲುಕಿರುವ ತಾಯಿ, ಇಬ್ಬರು ಮಕ್ಕಳು

ಕೊಣಾಜೆ: ಧಾರಾಕಾರ ಮಳೆಗೆ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟಿದ್ದರೆ, ಮೂವರು ಕುಸಿದ ಮಣ್ಣು, ಮನೆಯ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಸುಮಾರು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಗುಡ್ಡ ಕುಸಿದು ಬಿದ್ದ ತೀವ್ರತೆಗೆ ಮನೆ ಸಂಪೂರ್ಣ ನೆಲಸಮಗೊಂಡಿದ್ದು, ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪುತ್ರ ಸೀತಾರಾಮರ ಪತ್ನಿ ಅಶ್ವಿನಿ ಹಾಗೂ ಇಬ್ಬರು ಪುಟ್ಟ ಮಕ್ಕಳು( 3 ಹಾಗೂ 2 ವರ್ಷದ ಮಕ್ಕಳು) ಕುಸಿದ ಮನೆಯೊಳಗೆ ಸಿಲುಕಿಕೊಂಡಿದ್ದಾರೆ. ಕಾಂತಪ್ಪ ಹಾಗೂ ಸೀತಾರಾಮರನ್ನು ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವ ತಾಯಿ, ಮಕ್ಕಳು

ಗುಡ್ಡ ಕುಸಿತದಿಂದ ಕುಸಿದುಬಿದ್ದಿರುವ ಮನೆಯ ಅವಶೇಷಗಳಡಿಯಲ್ಲಿ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ 3 ಹಾಗೂ 2 ವರ್ಷದ ಇಬ್ಬರು ಮಕ್ಕಳು ಸಿಲುಕಿಕೊಂಡಿದ್ದಾರೆ. ಇವರು ಗುಡ್ಡ ಕುಸಿದ ಮನೆಯ ಒಂದು ಭಾಗದ ಕೋಣೆಯಲ್ಲಿ ಮಲಗಿದ್ದರು ಎಂದು ತಿಳಿದುಬಂದಿದೆ.

ಮಗುವಿನ ಅಳು ಕೇಳುತ್ತಿದೆ

ಮನೆಯೊಳಗೆ ಸಿಲುಕಿರುವ ಅಶ್ವಿನಿ ಒಳಗಡೆಯಿಂದ ಕೊಂಚ ಮಾತನಾಡುತ್ತಿದ್ದರೆ, ಒಂದು ಮಗು ಅಳುವ ಶಬ್ದ ಕೇಳಿಸುತ್ತಿದೆ.

ಮುಂದುವರಿದ ರಕ್ಷಣಾ ಕಾರ್ಯ:

ಸುಮಾರು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಆದರೆ ಮನೆಯು ಸಂಪೂರ್ಣ ಕುಸಿದ ಪರಿಣಾಮ ರಕ್ಷಣಾ ಕಾರ್ಯ ಕಷ್ಟವಾಗಿತ್ತು. ಅಲ್ಲದೇ ಈ ಮನೆಗೆ ಸಮರ್ಪಕ ದಾರಿ ವ್ಯವಸ್ಥೆ ಇಲ್ಲದಿರುವುದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿದೆ. ಮಳೆ ಕೂಡಾ ರಕ್ಷಣಾ ಕಾರ್ಯಾಚರಣೆಗೆ ತೊಡಕುಂಟು ಮಾಡುತ್ತಿದೆ.

ಸದ್ಯ ಎನ್ ಡಿ ಆರ್ ಎಫ್, ಎಸ್ ಡಿಆರ್ ಪಿ, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭರದ ರಕ್ಷಣಾ ಕಾರ್ಯ ಮುಂದುವರಿಸಿದ್ದು ತಾಯಿ ಹಾಗೂ ಇಬ್ಬರು ಮಕ್ಕಳ ರಕ್ಷಣೆಗೆ ಶ್ರಮಿಸುತ್ತಿದ್ದಾರೆ.

ಎಡಿಸಿ ಸಂತೋಷ್, ಸ್ಥಳಕ್ಕೆ ತಹಶಿಲ್ದಾರ್ ಪುಟ್ಟರಾಜು, ಡಿಸಿಪಿ ಸಿದ್ದಾರ್ಥ್ ಘೋಯಲ್, ಪ್ರಾಕೃತಿಕ ವಿಕೋಪದ ನಿರ್ವಹಣಾಧಿಕಾರಿ ವಿಜಯ್, ಕಾರ್ಯನಿರ್ವಹಣಾಧಿಕಾರಿ ಗುರುದತ್, ಮಂಜನಾಡಿ ಪಂಚಾಯತ್ ಅಧ್ಯಕ್ಷೆ ಸರೋಜಿನಿ, ನರಿಂಗಾನ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ, ಮುಖಂಡರಾದ ಐವನ್ ಡಿಸೋಜ, ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್, ರಮೇಶ್ ಶೆಟ್ಟಿ ಬೋಳಿಯಾರ್ , ಎನ್.ಎಸ್.ಕರೀಂ ಮೊದಲಾದವರು ಸ್ಥಳದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X