Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನುಪಮ್ ಅಗ್ರವಾಲ್ ಎತ್ತಂಗಡಿಯಾಗದೆ...

ಅನುಪಮ್ ಅಗ್ರವಾಲ್ ಎತ್ತಂಗಡಿಯಾಗದೆ ವಿರಮಿಸುವುದಿಲ್ಲ : ಮುನೀರ್ ಕಾಟಿಪಳ್ಳ

ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ಸಿಪಿಐ(ಎಂ) ದ.ಕ.ಜಿಲ್ಲಾ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Dec 2024 4:13 PM IST
share
ಅನುಪಮ್ ಅಗ್ರವಾಲ್ ಎತ್ತಂಗಡಿಯಾಗದೆ ವಿರಮಿಸುವುದಿಲ್ಲ : ಮುನೀರ್ ಕಾಟಿಪಳ್ಳ

ಮಂಗಳೂರು : ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರದಿಂದ ಅವರನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ʼಕಮೀಷನ್ ಹಠಾವೊʼ ಘೋಷಣೆಗಳನ್ನು ಕೂಗಿದರು. ಕಮೀಷನರ್ ವಿರುದ್ಧದ ಆರೋಪಗಳ ಕುರಿತು ಹಾಡು ಕಟ್ಟಿ ಹಾಡಿದರು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ(ಎಂ) ದ‌.ಕ‌.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರು, ʼಎಫ್ಐಆರ್ ದಾಖಲಿಸಿರುವ ಕುರಿತು ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಕರಾವಳಿಯಲ್ಲಿ ಸ್ವಾತಂತ್ರ್ಯಪೂರ್ವದಿಂದಲೇ ದುಡಿಯುವ ಜನರ, ಜನಸಾಮಾನ್ಯರ ಪರವಾಗಿ ಹೋರಾಟಗಳನ್ನು ನಡೆಸುತ್ತಾ ಬಂದಿರುವ ಕಮ್ಯುನಿಸ್ಟ್ ಪಕ್ಷಗಳಿಗೆ ಇದು ಹೊಸದೂ ಅಲ್ಲ. ಆದರೆ, ಜನಸಾಮಾನ್ಯರು ಹಕ್ಕಿಗಳಿಗಾಗಿ, ತಮಗಾಗುತ್ತಿರುವ ಅನ್ಯಾಯಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನೇ ನಿಷೇಧಿಸುವ ಕಮೀಷನರ್ ಅಗ್ರವಾಲ್ ನಡೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲʼ ಎಂದು ಹೇಳಿದರು.

ʼಜನಪರ ಸಂಘಟನೆಗಳನ್ನು ಶತ್ರುಗಳಂತೆ ಕಾಣುವ ಅಗ್ರವಾಲ್ ಅದೇ ಸಂದರ್ಭ ಮತೀಯ ಶಕ್ತಿಗಳನ್ನು, ಅಕ್ರಮ ಮರಳುಗಾರಿಕೆ, ಜುಗಾರಿ, ಬೆಟ್ಟಿಂಗ್, ಮಸಾಜ್ ಪಾರ್ಲರ್ ದಂಧೆಕೋರರನ್ನು ಬಂಧುಗಳಂತೆ ಕಾಣುತ್ತಿದ್ದಾರೆ. ಆ ಮೂಲಕ ಮಂಗಳೂರಿನಲ್ಲಿ ಪೊಲೀಸ್ ರಾಜ್ ನಿರ್ಮಿಸುತ್ತಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಬ್ರಿಟಿಷ್ ವಸಾಹತು ಕಾಲದ ಜನರಲ್ ಡಯರ್ ನಂತೆ ವರ್ತಿಸುವ ಅನುಪಮ್ ಅಗ್ರವಾಲ್ ಅವರನ್ನು ರಾಜ್ಯ ಸರಕಾರ ತಕ್ಷಣವೇ ವರ್ಗಾಯಿಸಬೇಕು, ಇಲ್ಲದಿದ್ದಲ್ಲಿ ಹೋರಾಟ ಜಿಲ್ಲೆಯ ಮೂಲೆ ಮೂಲೆಗೆ ವಿಸ್ತರಣೆಗೊಳ್ಳಲಿದೆ. ಪೊಲೀಸ್ ಕಮೀಷನರ್ ಎತ್ತಂಗಡಿಯಾಗದೆ ವಿರಮಿಸುವುದಿಲ್ಲʼ ಎಂದರು.

ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಕೆ.ಯಾದವ್‌ ಶೆಟ್ಟಿ ಮಾತನಾಡಿ, ʼಜನರ ಪರವಾಗಿ ನಡೆಸುವ ಹೋರಾಟಗಳನ್ನು ನಿಕೃಷ್ಟವಾಗಿ ಕಾಣುವುದು ಪೊಲೀಸ್ ಅಧಿಕಾರಿಗಳಿಗೆ ಶೋಭೆ ತರುವುದಿಲ್ಲ. ಜಿಲ್ಲೆಯಲ್ಲಿ ಸಿಪಿಐ(ಎಂ) ಪಕ್ಷ ಹಲವು ಹೋರಾಟಗಳನ್ನು ನಡೆಸಿದೆ. ನಮ್ಮ ಎಲ್ಲಾ ಬೇಡಿಕೆಗಳು ನ್ಯಾಯ ಸಮ್ಮತವಾಗಿರುತ್ತದೆ. ಪ್ರತಿಭಟನೆಗಳಿಗೆ ನಿಯಮ ಬದ್ಧವಾಗಿ ಅನುಮತಿ ಕೋರಿದರೂ ನಿರಾಕರಿಸುವುದು ನಡೆದಿದೆ‌. ಅಗ್ರವಾಲ್ ನಡೆ ಪೊಲೀಸ್ ಇಲಾಖೆಗೆ ಕಳಂಕ ತರುವಂತಿದೆ. ರಾಜ್ಯ ಸರಕಾರ ತಕ್ಷಣವೇ ಅವರನ್ನು ಜಿಲ್ಲೆಯಿಂದ ವರ್ಗಾಯಿಸಬೇಕುʼ ಎಂದು ಆಗ್ರಹಿಸಿದರು.

ರಾಜ್ಯ ಸಮಿತಿ ಸದಸ್ಯ ವಸಂತ ಆಚಾರಿ ಮಾತನಾಡಿ, ʼಜಿಲ್ಲೆಯಲ್ಲಿ ಗೇಣಿದಾರ ರೈತರ, ಹೆಂಚು, ಬೀಡಿ ಕಾರ್ಮಿಕರ ಪರ ನಡೆದಿರುವ ಹೋರಾಟದ ಇತಿಹಾಸವನ್ನು ಪೊಲೀಸ್ ಕಮೀಷನರ್ ತಿಳಿದುಕೊಳ್ಳಬೇಕು. ತೀರಾ ಇತ್ತೀಚೆಗೆ ಟೋಲ್ ಗೇಟ್ ತೆರವು ಯಶಸ್ವಿ ಹೋರಾಟದ ಕುರಿತೂ ಕಮೀಷನರ್ ಅರಿತುಕೊಳ್ಳಬೇಕು‌. ನಮ್ಮದು ವಂಚಿತರ ಪರವಾದ ಹೋರಾಟ. ಅದನ್ನು ಹತ್ತಿಕ್ಕಲು ಹೊರಟರೆ ಸರಿಯಾದ ಉತ್ತರವನ್ನೇ ನೀಡುತ್ತೇವೆ. ಕಮೀಷನರ್ ಅಗ್ರವಾಲ್ ಅವರನ್ನು ರಾಜ್ಯ ಸರಕಾರ ವರ್ಗಾಯಿಸಿದರೆ ಸಾಲದು, ಅವರನ್ನು ರಾಜ್ಯ ಸರಕಾರ ಅಮನತು ಮಾಡಿ ತನಿಖೆಗೆ ಒಳಪಡಿಸಬೇಕುʼ ಎಂದು ಹೇಳಿದರು.

ಸಿಪಿಐ(ಎಂ) ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಕಾಮ್ರೇಡ್ ಸುಕುಮಾರ್ ತೊಕ್ಕೊಟ್ಟು, ಬಿ.ಎಂ.ಭಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು‌. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸದಾಶಿವ ದಾಸ್ ವಂದಿಸಿದರು‌.

ಪ್ರತಿಭಟನೆ ಯ ನೇತೃತ್ವವನ್ನು ಸಿಪಿಐ(ಎಂ) ಜಿಲ್ಲಾ ಸಮಿತಿ ಮುಖಂಡರಾದ ಜಯಂತಿ ಬಿ ಶೆಟ್ಟಿ, ಜೆ ಬಾಲಕೃಷ್ಣ ಶೆಟ್ಟಿ, ರಮಣಿ ಮೂಡಬಿದ್ರೆ, ರಾಧಾ ಪುತ್ತಿಗೆ, ವಸಂತಿ ಕುಪ್ಪೆಪದವು, ಯೋಗೀಶ್ ಜಪ್ಪಿನಮೊಗರು, ಜಯಂತ ನಾಯ್ಕ್, ಬಿ.ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ರಫೀಕ್ ಹರೇಕಳ, ಪ್ರಮೀಳಾ ಶಕ್ತಿನಗರ, ಶೇಖರ್ ಕುತ್ತಾರ್, ಈಶ್ವರಿ ಬೆಳ್ತಂಗಡಿ ಮುಂತಾದವರು ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X