Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಕ್ಷವು ಗುಡಿಸು ಅಂದ್ರೆ ಗುಡಿಸುತ್ತೇವೆ,...

ಪಕ್ಷವು ಗುಡಿಸು ಅಂದ್ರೆ ಗುಡಿಸುತ್ತೇವೆ, ಒರೆಸು ಅಂದ್ರೆ ಒರೆಸುತ್ತೇವೆ: ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ12 March 2024 11:49 AM IST
share
ಪಕ್ಷವು ಗುಡಿಸು ಅಂದ್ರೆ ಗುಡಿಸುತ್ತೇವೆ, ಒರೆಸು ಅಂದ್ರೆ ಒರೆಸುತ್ತೇವೆ: ನಳಿನ್ ಕುಮಾರ್ ಕಟೀಲ್

ಮಂಗಳೂರು, ಮಾ.12: ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಅಂದರೆ ಗುಡಿಸುತ್ತೇವೆ. ಒರೆಸು ಅಂದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ನಳಿನ್ ರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿಯಾದರೂ ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಬಿಜೆಪಿ ಮತ್ತೆ ಗೆಲ್ಲಬೇಕು ಎಂಬುದು ನಮ್ಮ ಗುರಿ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ. ನಾವು ಕಾರ್ಯವನ್ನು ನಂಬಿರುವಂಥವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.

ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. 15 ವರ್ಷ ಕೆಲಸ ಮಾಡಿದ್ದೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು.

ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಕ್ಷ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು ಎಂದು ನಳಿನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X