Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೊಸ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ...

ಹೊಸ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡಿ: ʼಬ್ಯಾರಿ ಎಲ್ತ್‌ಗಾರ್ರೊಟ್ಟುಗು ಪಲಕಬಾಕ್ʼ ಕಾರ್ಯಕ್ರಮದಲ್ಲಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Feb 2025 7:59 PM IST
share
ಹೊಸ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡಿ: ʼಬ್ಯಾರಿ ಎಲ್ತ್‌ಗಾರ್ರೊಟ್ಟುಗು ಪಲಕಬಾಕ್ʼ ಕಾರ್ಯಕ್ರಮದಲ್ಲಿ ಆಗ್ರಹ

ಮಂಗಳೂರು: ಬ್ಯಾರಿ ಜನಾಂಗದಲ್ಲಿ ಅನೇಕ ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿದ್ದಾರೆ. ಅದರಲ್ಲೂ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಗಮನಾರ್ಹ ಸಾಧನೆಗೈಯುತ್ತಿದ್ದಾರೆ. ಬ್ಯಾರಿ ಅಕಾಡಮಿಯು ಈ ಯುವ ಹೊಸ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡಬೇಕು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಗುರುವಾರ ನಗರದ ಶಿವರಾಮ ಕಾರಂತ ಸಭಾಭವನದಲ್ಲಿ ಆಯೋಜಿಸಿದ್ದ ಬ್ಯಾರಿ ಎಲ್ತ್‌ಗಾರ್ರೊಟ್ಟುಗು ಪಲಕಬಾಕ್ ಕಾರ್ಯಕ್ರಮದಲ್ಲಿ ಕೇಳಿ ಬಂದ ಆಗ್ರಹವಿದು.

ಇತ್ತೀಚಿನ ದಿನಗಳಲ್ಲಿ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರೆಯುತ್ತಿದ್ದಾರೆ. ಬ್ಯಾರಿ ನಾಟಕ, ಸಂಗೀತ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಅಂತಹವರಿಗೆ ಅಕಾಡಮಿಯು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅವರ ಪ್ರತಿಭೆಗಳನ್ನು ಗುರುತಿಸಿ ಮನ್ನಣೆ ನೀಡಬೇಕು ಎಂಬ ಬೇಡಿಕೆ ಕೇಳಿ ಬಂತು.

ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಬ್ಯಾರಿ ಅಕಾಡಮಿಯು ತನ್ನದೇ ಆದ ಇತಿಮಿತಿಯೊಳಗೆ ಅಕಾಡಮಿಕ್ ಆಗಿ ಕೆಲಸ ಮಾಡುತ್ತದೆ. ಹಾಗಾಗಿ ʼಪಲಕಬಾಕ್ ಕಾರ್ಯಕ್ರಮವನ್ನು ಬೇರೆ ಬೇರೆ ಕಡೆ ಆಯೋಜಿಸುವ ಉದ್ದೇಶವಿದೆ. ಅದಕ್ಕಾಗಿ ಎಲ್ಲರ ಸಹಕಾರ ಬೇಕು. ಬ್ಯಾರಿ ಸಂಶೋಧನೆ, ದಾಖಲೀಕರಣ, ಬ್ಯಾರಿ ಭವನ ನಿರ್ಮಾಣ, ಬ್ಯಾರಿ ಪಠ್ಯಪುಸ್ತಕ ರಚನೆ, ಪ್ರತಿಭಾ ಕಾರಂಜಿ ಮತ್ತು ಆಕಾಶವಾಣಿಯಲ್ಲಿ ಬ್ಯಾರಿ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲು ಪ್ರಯತ್ನ ಮುಂದುವರಿದಿದೆ ಎಂದರು.

ಸದಸ್ಯರಾದ ಹಮೀದ್ ಹಸನ್ ಮಾಡೂರು, ತಾಜುದ್ದೀನ್ ಅಮ್ಮುಂಜೆ, ಸಾರಾ ಅಲಿ ಪರ್ಲಡ್ಕ, ಹಫ್ಸಾ ಬಾನು ಬೆಂಗಳೂರು, ಶಮೀರಾ ಜಹಾನ್, ಸಾಹಿತಿಗಳಾದ ಕೆಪಿಎ ಅಬ್ದುಲ್ ಖಾದರ್ ಕುತ್ತೆತ್ತೂರು, ಕೆಪಿಎ ಅಬ್ದುಲ್ ರಹ್ಮಾನ್ ಕುತ್ತೆತ್ತೂರು, ಸಂಶುದ್ದೀನ್ ಮಡಿಕೇರಿ, ಹುಸೈನ್ ಕಾಟಿಪಳ್ಳ, ಖಾಲಿದ್ ತಣ್ಣೀರುಬಾವಿ, ಖಾಲಿದ್ ಯು.ಕೆ., ಶರೀಫ್ ನಿರ್ಮುಂಜೆ, ಇಕ್ಬಾಲ್ ಸೂಫಿ ಅಡ್ಡೂರು, ಇಸ್ಮಾಯಿಲ್ ಮೂಡುಶೆಡ್ಡೆ, ಬಾವಾ ಪದರಂಗಿ, ಅಬ್ದುಲ್ ಖಾದರ್ ಕುಕ್ಕಾಜೆ, ಡಾ. ಅಬೂಬಕರ್ ಸಿದ್ದೀಕ್, ಉಪನ್ಯಾಸಕ ರಝಾಕ್ ಅನಂತಾಡಿ, ಅಬ್ದುಲ್ ಮಜೀದ್ ಮಾಸ್ಟರ್, ಲೇಖಕಿಯರಾದ ಶಮೀಮಾ ಕುತ್ತಾರ್, ಆಯಿಶಾ ಯು.ಕೆ., ರಮೀಝಾ ಎಂಬಿ ಕುಕ್ಕಾಜೆ, ಸೆಮೀರಾ ಕಡಬ, ಮರಿಯಂ ಇಸ್ಮಾಯಿಲ್, ಝುಲೇಖಾ ಮುಮ್ತಾಝ್, ಅಸ್ಮತ್ ವಗ್ಗ, ಸೌದಾ ಮಂಗಳೂರು, ನುಶ್ರತ್, ರಹ್ಮತ್ ಮನ್ಸೂರ್, ಫರ್ಹಾನಾ, ನಝ್ಮತುನ್ನಿಸಾ ಲೈಝ್, ಅಸ್ಮಾ ಬಜ್ಪೆ, ಮೇಲ್ತೆನೆಯ ಅಧ್ಯಕ್ಷ ವಿ.ಇಬ್ರಾಹಿಂ ನಡುಪದವು, ಶಾಹುಲ್ ಹಮೀದ್ ತಂಙಳ್, ಪತ್ರಕರ್ತರಾದ ಹನೀಫ್ ಅನಿಲಕಟ್ಟೆ, ಸಂಶುದ್ದೀನ್ ಎಣ್ಮೂರು, ಜಬ್ಬಾರ್ ಮಲ್ಲೂರು, ಶೌಕತ್ ಅಲಿ ಮಂಗಳೂರು, ಸಲೀಂ ಬೋಳಂಗಡಿ, ಬಶೀರ್ ಕಲ್ಕಟ್ಟ, ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಎಂಎಚ್ ಮೊಯ್ದಿನ್ ಹಾಜಿ ಅಡ್ಡೂರು, ಎಂಜಿ ಶಾಹುಲ್ ಹಮೀದ್ ಗುರುಪುರ, ಬ್ಯಾರಿ ಝುಲ್ಫಿ, ಅಬ್ದುಲ್ ಅಝೀಝ್ ಕಂದಾವರ, ತಾಜ್ ಗಡಿನಾಡು, ಇರ್ಶಾದ್ ಡಿಎಸ್‌ಐಬಿ, ಸೈಫ್ ಕುತ್ತಾರ್, ಬಶೀರ್ ಬಂಟ್ವಾಳ್, ಬಶೀರ್ ಬೆಳ್ಳಾಯಾರು ಮತ್ತಿತರರು ಪಾಲ್ಗೊಂಡಿದ್ದರು.

ಲೇಖಕ ಅಬ್ದುಲ್ ಅಝೀಝ್ ಪುಣಚ ಕಿರಾಅತ್ ಪಠಿಸಿದರು. ರಿಜಿಸ್ಟ್ರಾರ್ ರಾಜೇಶ್ ಸ್ವಾಗತಿಸಿದರು. ಸದಸ್ಯ ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X