Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಸ್ಲಿಂ ಬಾಂಧವ್ಯ ವೇದಿಕೆ ವತಿಯಿಂದ ಡಾ....

ಮುಸ್ಲಿಂ ಬಾಂಧವ್ಯ ವೇದಿಕೆ ವತಿಯಿಂದ ಡಾ. ಮೋಹನ್‌ ಆಳ್ವರಿಗೆ 'ಸೌಹಾರ್ದ ಸಿರಿ' ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 Feb 2025 9:35 PM IST
share
ಮುಸ್ಲಿಂ ಬಾಂಧವ್ಯ ವೇದಿಕೆ ವತಿಯಿಂದ ಡಾ. ಮೋಹನ್‌ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ವತಿಯಿಂದ 'ಸೌಹಾರ್ದ ಸಿರಿ' ಪ್ರಶಸ್ತಿಯನ್ನು ಮೂಡುಬಿದರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್‌ ಆಳ್ವ ಆವರಿಗೆ ಆಳ್ವಾಸ್‌ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಪ್ರದಾನಿಸಲಾಯಿತು.

ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್‌ ಆಳ್ವ ಅವರು, ರಾಜಕೀಯ ಪಕ್ಷಗಳು ಓಟು, ಅಧಿಕಾರಕ್ಕಾಗಿ ನಮ್ಮ ನಡುವೆ ಜಾತಿ, ಧರ್ಮದ ಕಂದಗಳನ್ನು ಸೃಷ್ಠಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಸಾಮಾಜಿಕ ಮಾಧ್ಯಮಗಳು ದೇಶದಲ್ಲಿ ಧ್ವೇಷ ಹರಡುವ ಕೆಲಸ ಮಾಡುತ್ತಿದೆ. ದೇಶ ಮುನ್ನಡೆಸಬೇಕಾಗಿರುವ ಯುವ ಸಮೂಹ ಇಂತವರನ್ನು ಗಮನಿಸುತ್ತಿರಬೇಕು. ಸಮಾನ ಮಸನ್ಕರೆಲ್ಲರೂ ಸೇರಿಕೊಂಡು ಸೌಹಾರ್ದ ಸಮೃದ್ಧ ಭಾರತ ದೇಶವನ್ನು ಕಟ್ಟಲು ಶ್ರಮಿಸಬೇಕಿದೆ ಎಂದರು.


ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ನ್ಯಾ. ನಬಿರಸೂಲ್ ಮಹಮದಾಪುರ್ ಅವರು, ಮುಸ್ಲಿಂ ಬಾಂಧವ್ಯ ವೇದಿಕೆ ಸಮಾಜದ ಒಲಿತು ಬಯಸುವ ಸೌಹಾರ್ದ ಮನಸ್ಸುಗಳನ್ನು ಉಗ್ಗೂಡಿಸುವ ಕೆಲಸದಲ್ಲಿ ಮುಂದಾಗಿರುವುದು ಶ್ಲಾಘನೀಯ. ಇಂತಹಾ ಸೌಹಾರ್ದ ಹೆಚ್ಚಿಸುವ ಕಾರ್ಯಕ್ರಮಗಳು ಇನ್ನಷ್ಟು ನಡೆಯ ಬೇಕಿದೆ. ಬುದ್ಧಿವಂತರೂ ಉತ್ತಮ ಮನಸ್ಸಿನವರೂ ಆಗಿರುವ ಮಂಗಳೂರಿನಲ್ಲಿ ಯಾವ ಕಾರಣಕ್ಕಾಗಿ ಧರ್ಮ ಘರ್ಷಣೆಗಳು ನಡೆಯುತ್ತಿರುತ್ತವೆ ಎಂಬುವುದೇ ಯಕ್ಷ ಪ್ರಶ್ನೆ. ಜಿಲ್ಲೆ ದೇಶದಲ್ಲಿ ಧರ್ಮ ಘರ್ಷಣೆಗೆ ಅವಕಾಶ ನೀಡದೆ ಮಾನವ ಧರ್ಮದ ಪ್ರತಿಷ್ಠಾಪನೆಗೆ ಎಲ್ಲರೂ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

ಸಮಾರಂಭದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ಸದಸ್ಯರಾಗಿರುವ ಯುವ ಬರಹಗಾರ ಮುಹಮ್ಮದ್ ರಿಯಾಝ್ ಕಾರ್ಕಳ ಅವರು ರಚಿಸಿರುವ "ತುಳುನಾಡಿನ ಕೋಮು ಸಾಮರಸ್ಯ ಪರಂಪರೆ" ಕೃತಿಯನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ಅಧ್ಯಕ್ಷರಾಗಿರುವ ಸುಹೈಲ್ ಅಹಮದ್ ಮರೂರ್ ವಹಿಸಿದ್ದರು. ಪೌರಾಣಿಕ ಅರ್ಥಧಾರಿ ಜಬ್ಬಾರ್ ಸಮೋ ಸಂಪಾಜೆ ಅವರು ನುಡಿಸಿರಿ ಮೂಲಕ ಪ್ರಶಸ್ತಿ ಪುರಸ್ಕೃತ ಡಾ. ಎಂ. ಮೋಹನ್‌ ಆಳ್ವ ಅವರ ಪರಿಚಯ ಮಾಡಿದರು. ವೇದಿಕೆಯಲ್ಲಿ ಮುಸ್ಲಿಮ್ ಬಾಂಧವ್ಯ ವೇದಿಕೆ ಕರ್ನಾಟಕ ಇದರ ಗೌರವಾಧ್ಯಕ್ಷ ಕೋಟಾ ಇಬ್ರಾಹಿಂ ಸಾಹೇಬ್, ಮಾಜಿ ಅಧ್ಯಕ್ಷ ಅನೀಸ್ ಪಾಷಾ, ಅನುಪಮ ಮಾಸಿಕದ ಸಂಪಾದಕಿ ಶಹನಾಝ್ ಎಂ. ಮೊದಲಾದವರು ಉಪಸ್ಥಿತರಿದ್ದರು.

ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ಕಾರ್ಯದರ್ಶಿ ಮುಸ್ತಾಕ್ ಹೆನ್ನಾಬೈಲ್ ಸ್ವಾಗತಿಸಿದರು. ಹಕೀಮ್ ತೀರ್ಥಹಳ್ಳಿ ಧನ್ಯವಾದ ಸಮರ್ಪಿಸಿದರು. ಡಾ.‌ ನಿಝಾಮುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

"ಸೌಹಾರ್ದ ಭಾರತವನ್ನು ರಾಜಕೀಯ ಕ್ರೌರ್ಯ ಹದಗೆಡಿಸುತ್ತಿದೆ. ವ್ಯವಸ್ಥಿತವಾಗಿ ಧ್ವೇಷ ಹಂಚುತ್ತಾ ಶಾಂತಿ ಸೌಹಾರ್ದ ಕೆಡಿಸುವ ರಾಜಕೀಯದಿಂದ ದೂರ ಇದ್ದು, ಆಳ್ವರು ಪ್ರೀತಿ ಹಂಚುತ್ತಿರುವುದು ಶ್ಲಾಘನೀಯ. ಎಲ್ಲಾ ರೀತಿಯ ಧರ್ಮ ದ್ವೇಷಕ್ಕೂ ಸೌಹಾರ್ದವೇ ಮದ್ದು. ಸೌಹಾರ್ದದ ಕೊಂಡಿಯಾಗಿ ಮುಸ್ಲಿಂ ಬಾಂಧವ್ಯ ವೇದಿಕೆ ಮುಂದುವರಿಯಲಿದೆ"

-ಸುಹೈಲ್ ಅಹಮದ್ ಮರೂರ್, ಅಧ್ಯಕ್ಷರು, ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ



share
ವಾರ್ತಾಭಾರತಿ
ವಾರ್ತಾಭಾರತಿ
Next Story
X