Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ...

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೆರುಗು ನೀಡಿದ ವೈಭವದ ಕನ್ನಡ ಸಾಂಸ್ಕೃತಿಕ ದಿಬ್ಬಣ

ವಾರ್ತಾಭಾರತಿವಾರ್ತಾಭಾರತಿ21 Feb 2025 11:18 AM IST
share
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೆರುಗು ನೀಡಿದ ವೈಭವದ ಕನ್ನಡ ಸಾಂಸ್ಕೃತಿಕ ದಿಬ್ಬಣ

ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅತ್ಯಾಕರ್ಷಕ ಕನ್ನಡ ಸಾಂಸ್ಕೃತಿಕ ಮೆರವಣಿಗೆಗೆ ನಡೆಯಿತು.

ಅಸೈಗೋಳಿಯ ಕೇಂದ್ರ ಮೈದಾನದಿಂದ ಶುಕ್ರವಾರ ಬೆಳಗ್ಗೆ ಆರಂಭಗೊಂಡ ವೈಭವದ ಸಾಂಸ್ಕೃತಿಕ ಮೆರವಣಿಗೆಗೆ ಪದ್ಮಶ್ರೀ ಹರೇಕಳ ಹಾಜಬ್ಬ ಚಾಲನೆ ನೀಡಿದರು.

ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಗುರುದತ್ತ್ ಎಂ.ಎನ್. ಭುವನೇಶ್ವರಿಗೆ ಪುಪ್ಪಾರ್ಚನೆ ಸಲ್ಲಿಸಿದರು.

ಅಸೈಗೋಳಿ ಮೈದಾನದಿಂದ ಉದ್ಘಾಟನೆಗೊಂಡು ಮಂಗಳೂರು ವಿವಿ ಮಾರ್ಗದ ಮೂಲಕ ಸಾಗಿದ ಸಾಂಸ್ಕೃತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಕಲಾತಂಡಗಳ ಪ್ರದರ್ಶನಗಳೊಂದಿಗೆ ಕೀಲು ಕುದುರೆ, ಕೋಲಾಟ, ಸುಗ್ಗಿ ಕುಣಿತ, ಕಂಗೀಲು, ಯಕ್ಷಗಾನ, ಪೂಜಾ ಕುಣಿತ, ಡೊಳ್ಳು ಕುಣಿತ ಶಾಲಾ ಮಕ್ಕಳಿಂದ ಜಾನಪದ ನೃತ್ಯಗಳು, ಕುಣಿತ ಭಜನೆ, ಚೆಂಡೆ, ಡೋಲು-ಕೋಲು ಕುಣಿತ, ಕಂಸಾಲೆ, ಗೊಂಬೆ ಕುಣಿತ ಮೊದಲಾದ ತಂಡಗಳು ಮೆರವಣಿಗೆಗೆ ರಂಗು ತುಂಬಿದವು.

ಮೆರವಣಿಗೆಯು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣ ದ ವರೆಗೂ ಸಾಗಿ ಬಂದಿತು.

ಸಭಾಂಗಣದ ಬಳಿ ಕೊಣಾಜೆ ಗ್ರಾ.ಪಂ ಅಧ್ಯಕ್ಷರಾದ ಗೀತಾ ದಾಮೋದರ್ ಕುಂದರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣಗೈದರು. ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದರು.

ವಿಶ್ವ ಮಂಗಳ ಪ್ರೌಡಶಾಲೆ, ಕೊಣಾಜೆ - ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ನಡೆಯಿತು. ಧ್ವಜಾರೋಹಣದ ನಿರ್ವಹಣೆಯನ್ನು ಕೊಣಾಜೆಪದವು ಶಿಕ್ಷಕ ರಾಜೀವ ನಾಯ್ಕ ನಡೆಸಿದರು.

ಸಮ್ಮೇಳನದಲ್ಲಿ ಪಟ್ಟಾಂಗ ಕಟ್ಟೆಯ ಆಕರ್ಷಣೆ

ಸಭಾಂಗಣದ ಹೊರಾಂಗಣದಲ್ಲಿ ಎಡಭಾಗದಲ್ಲಿ ಮರವೊಂದರ ಕೆಳ ಭಾಗದಲ್ಲಿ ನಿರ್ಮಿಸಲಾಗಿರುವ ಪಟ್ಟಾಂಗ ಕಟ್ಟೆಯು ವಿಶೇಷವಾಗಿ ಸಾಹಿತ್ಯಾಭಿಮಾನಿಗಳು ಸೇರಿದಂತೆ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.

ಪಟ್ಟಾಂಗ ಕಟ್ಟೆಯ ಉದ್ಘಾಟನೆಯನ್ನು ವಿದ್ಯಾರತ್ನಾ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ನೆರವೇರಿಸಿದರು. ಶುಕ್ರವಾರ ಹಾಗೂ ಶನಿವಾರ ನಡೆಯಲಿರುವ ಈ ಪಟ್ಟಾಂಗ ಕಟ್ಟೆಯಲ್ಲಿ ಅಜ್ಜಿಕತೆ, ಉತ್ತರ ಹೇಳಿ ಪುಸ್ತಕ ಗೆಲ್ಲಿ, ಗ್ರಾಮ ಪ್ರತಿಭೆಗಳ ನೃತ್ಯ,ವಿವಿದ ಲೇಖಕರೊಂದಿಗೆ ಮಾತುಕತೆ ಹೀಗೆ ಹತ್ತು ಹಲವು ಬಗೆಯ ಆತ್ಮೀಯ ಚಟುವಟಿಕೆಗಳು ನಡೆಯುತ್ತಿವೆ.

ದೈಹಿಕ ಶಿಕ್ಷಕರಾದ ರಾಜೀವ್ ನಾಯ್ಕ್, ಮೋಹನ್ ಶಿರ್ಲಾಲ್ ಹರೀಶ್ ಕುಮಾರ್, ಹರೀಶ್, ನಿವೃತ ಮುಖ್ಯೋಪಾಧ್ಯಯರಾದ ಆನಂದ ಅಸೈಗೋಳಿ, ವಸಂತ ಕೊಡಿ, ಯು.ಆರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X