Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಲ್ಕಿ ರಿಕ್ಷಾ ಚಾಲಕ ಶರೀಫ್ ಹತ್ಯೆ...

ಮುಲ್ಕಿ ರಿಕ್ಷಾ ಚಾಲಕ ಶರೀಫ್ ಹತ್ಯೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆಗೆ ಕೇರಳ ಸಿಎಂಗೆ ಮನವಿ

► ಮುಲ್ಕಿ ಪಪಂ ಮಾಜಿ ಅಧ್ಯಕ್ಷ ಆಸಿಫ್ ನೇತೃತ್ವದಲ್ಲಿ ಶಾಸಕರನ್ನು ಭೇಟಿಯಾದ ಶರೀಫ್ ಕುಟುಂಬ ►ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ13 April 2025 8:33 PM IST
share
ಮುಲ್ಕಿ ರಿಕ್ಷಾ ಚಾಲಕ ಶರೀಫ್ ಹತ್ಯೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆಗೆ ಕೇರಳ ಸಿಎಂಗೆ ಮನವಿ

ಮಂಗಳೂರು: ಮುಲ್ಕಿ ಕೊಳ್ನಾಡು ನಿವಾಸಿ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್‌ರನ್ನು ದುಷ್ಕರ್ಮಿ ಗಳು ಹತ್ಯೆಗೈದು ಕೇರಳ-ಕರ್ನಾಟಕ ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿನ ಬಾವಿಗೆ ಎಸೆದಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡವನ್ನು ರಚಿಸಲು ಕೇರಳದ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ತಿಳಿಸಿದ್ದಾರೆ.

ಶರೀಫ್ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕರಲ್ಲಿ ಮಾತನಾಡಿದ್ದೇನೆ. ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯ್, ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಸಲ್ಲಿಸಲಾಗು ವುದು ಎಂದು ಅವರು ಭರವಸೆ ನೀಡಿದ್ದಾರೆ.


ಕರ್ನಾಟಕದ ಆಟೋ ರಿಕ್ಷಾ ಚಾಲಕ ಶರೀಫ್ ಅವರನ್ನು ಮಂಜೇಶ್ವರದ ಕುಂಜತ್ತೂರು ಎಂಬಲ್ಲಿ ಹತ್ಯೆ ಗೈದು ಬಾವಿಗೆ ಎಸೆದಿರುವುದು ಗಂಭೀರ ಪ್ರಕರಣವಾಗಿದೆ. ಶರೀಫ್ ಅವರಿಗೆ ಶತ್ರುಗಳಿಲ್ಲ. ಅವರು ಹಲವು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದಾರೆ. ಅವರನ್ನು ಹತ್ಯೆಗೈದವರು ಯಾರು ? ಯಾಕೆ ಕೊಲೆ ಮಾಡಲಾಯಿತು ? ಅದರ ಹಿಂದೆ ಯಾರ ಕೈವಾಡ ಇದೆ ಎಂಬ ಪ್ರಶ್ನೆಗಳು ನಮ್ಮನ್ನು ಕಾಡುತ್ತಿದೆ. ಹೀಗಾಗಿ ಕೇರಳ ಸರಕಾರ ಶರೀಫ್ ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿ ಹತ್ಯೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ.

ಮಂಜೇಶ್ವರ ಶಾಸಕನೆಂಬ ನೆಲೆಯಲ್ಲಿ ಶರೀಫ್ ಅವರ ಮಕ್ಕಳಾದ ಆಸಿಫ್, ಅಫ್ರಿದ್ ಮತ್ತು ನೌಶದ್ ಅವರು ಪೌರ ಪ್ರಮುಖರೊಂದಿಗೆ ರವಿವಾರ ತಮ್ಮ ಕಚೇರಿಗೆ ಆಗಮಿಸಿ ತಮ್ಮಲ್ಲಿ ಮನವಿ ಮಾಡಿದ್ದಾರೆ. ಖಂಡಿತವಾಗಿಯೂ ಶರೀಫ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಹೋರಾಟ ನಡೆಸುವುದಾಗಿ ಶಾಸಕ ಎಕೆಎಂ ಅಶ್ರಫ್ ಭರವಸೆ ನೀಡಿದ್ದಾರೆ.


‘‘ನನ್ನ ತಂದೆ ಶರೀಫ್ ಸೌಮ್ಯ ಸ್ವಭಾವದವರು. ಎಲ್ಲರಿಗೂ ಇಷ್ಟವಾದ ವ್ಯಕ್ತಿ. ರಿಕ್ಷಾದಲ್ಲಿ ದುಡಿದು ನನ್ನನ್ನು ಸಾಫ್ಟ್ ವೇರ್ ಇಂಜಿನಿಯರಿಂಗ್ ಮಾಡಿಸಿದ್ದಾರೆ. ಅವರ ಹತ್ಯೆ ಯಾಕೆ ಆಗಿದೆ ಗೊತ್ತಾಗಿಲ್ಲ. ನಮಗೆ ನ್ಯಾಯ ಬೇಕು. ಈ ಉದ್ದೇಶಕ್ಕಾಗಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಮುಂದೆ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಮತ್ತು ಸಿಎಂ ಅವರನ್ನು ಭೇಟಿಯಾಗುತ್ತೇವೆ".

- ನೌಶದ್, ಶರೀಫ್‌ರ ಪುತ್ರ-ಐಟಿ ಕಂಪೆನಿಯ ಉದ್ಯೋಗಿ

‘‘ಶರೀಫ್ ಸೌಮ್ಯ ಸ್ವಭಾವದ ವ್ಯಕ್ತಿ. ದ.ಕ. ಜಿಲ್ಲೆಯಲ್ಲಿ ಅಮಾಯಕರು ಯಾವ ರೀತಿ ಬಲಿಯಾಗುತ್ತಾರೆ ಎನ್ನುವುದಕ್ಕೆ ಶರೀಫ್‌ರ ಹತ್ಯೆ ಒಂದು ಉದಾರಣೆಯಾಗಿದೆ. ಶರೀಫ್ ಮುಗ್ಧ ವ್ಯಕ್ತಿ, ಎಲ್ಲರಲ್ಲೂ ಆತ್ಮೀಯತೆಯಿಂದ ಇದ್ದರು. ಅವರ ಹತ್ಯೆ ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಿಂದ ಕೇರಳ ಪೊಲೀಸರು ತನಿಖೆ ನಡೆಸಬೇಕು. ಕರ್ನಾಟಕದ ಪೊಲೀಸರು ಸೂಕ್ತ ಸಹಕಾರ ನೀಡಬೇಕು"

-ಬಿ.ಎಂ.ಆಸಿಫ್, ಮಾಜಿ ಅಧ್ಯಕ್ಷರು ಮುಲ್ಕಿ ಪಟ್ಟಣ ಪಂಚಾಯತ್







share
ವಾರ್ತಾಭಾರತಿ
ವಾರ್ತಾಭಾರತಿ
Next Story
X