Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ʼಅಗ್ನಿಪಥʼ ಕಾದಂಬರಿಯು ವಾಸ್ತವದ...

ʼಅಗ್ನಿಪಥʼ ಕಾದಂಬರಿಯು ವಾಸ್ತವದ ಮುಖಾಮುಖಿ: ಹಿರಿಯ ಚಿಂತಕ ಶಿವಸುಂದರ್

ಬಿ.ಎಂ. ಬಶೀರ್ ಅವರ ಕಾದಂಬರಿ ಬಿಡುಗಡೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 May 2025 7:28 PM IST
share
ʼಅಗ್ನಿಪಥʼ ಕಾದಂಬರಿಯು ವಾಸ್ತವದ ಮುಖಾಮುಖಿ: ಹಿರಿಯ ಚಿಂತಕ ಶಿವಸುಂದರ್

ಮಂಗಳೂರು : ʼಅಗ್ನಿಪಥʼ ಎಂಬ ಈ ಕಾದಂಬರಿಯು ಭ್ರಮೆಗಳನ್ನು ಕಳಚಿಕೊಂಡು ವಾಸ್ತವಕ್ಕೆ ಮುಖಾಮುಖಿಯಾಗುತ್ತದೆ. ಇದರ ವಸ್ತು ಸಮಕಾಲೀನವೂ ಆಗಿದೆ. ಎಲ್ಲೋ ಆದ ಸಂಗತಿ ಅಲ್ಲ, ಇಲ್ಲೇ ಆದ ಸತ್ಯ ಘಟನೆಯಾಗಿದೆ. ಆದರೂ ಕಥಾ ವಸ್ತು ಸವಾಲಿನ ವಿಷಯವಾಗಿದೆ, ಎಂದು ಹಿರಿಯ ಚಿಂತಕ, ಅಂಕಣಕಾರ ಶಿವಸುಂದರ್ ಹೇಳಿದರು.

ಮೈಸೂರಿನ ಕವಿತಾ ಪ್ರಕಾಶನ ಪ್ರಕಟಿಸಿದ ಹಿರಿಯ ಪತ್ರಕರ್ತ, ಕತೆಗಾರ, ʼವಾರ್ತಾಭಾರತಿʼಯ ಸುದ್ದಿ ಸಂಪಾದಕ ಬಿ.ಎಂ. ಬಶೀರ್ ಅವರ ಕಾದಂಬರಿ ’ಅಗ್ನಿಪಥ’ವನ್ನು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಕನ್ನಡ ವಿಭಾಗದ ಸಹಯೋಗದಲ್ಲಿ ವಿವಿಯ ಸಹೋದಯ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಯುದ್ಧವು ಕೇವಲ ಸೇನೆಯ ಬದುಕು ಅಲ್ಲ, ಅದು ದೇಶದ ರಾಜಕೀಯ ಪ್ರತಿಫಲನವೂ ಆಗಿದೆ. ಸಮಕಾಲೀನ ಯುದ್ಧಗಳಿಂದ ಸತ್ಯವು ಸಾಯುತ್ತಿದೆ. ಯುದ್ಧಗಳು ಉನ್ಮಾದವನ್ನು ಸೃಷ್ಟಿಸುತ್ತವೆ. ದೊಡ್ಡ ಬೆಲೆಯನ್ನೂ ತೆರುವಂತೆಯೂ ಮಾಡುತ್ತದೆ. ಹಾಗಾಗಿ ಯುದ್ಧಗಳು ಉನ್ಮಾದವಾಗದಿರಲಿ. ಅದು ಅಂತಿಮ ಆಯ್ಕೆಯಾಗಲಿ. ಯುದ್ಧವು ನ್ಯಾಯದ ಬುನಾದಿಯ ಮೇಲೆ ಕಟ್ಟುವಂತಿರಬೇಕು. ಅದನ್ನು ಯಾವತ್ತೂ ಕೂಡ ಪ್ರಥಮ ಆಯ್ಕೆಯಾಗಿ ಮಾಡಬಾರದು ಎಂದು ಶಿವಸುಂದರ್ ಹೇಳಿದರು.

ಕೃತಿಯನ್ನು ಪರಿಚಯಿಸಿದ ಹಿರಿಯ ಲೇಖಕ ವಾಸುದೇವ ಬೆಳ್ಳೆ ಸತ್ಯ ಮತ್ತು ವಾಸ್ತವವನ್ನು ವಿಶ್ಲೇಷಿಸುವ ಎಚ್ಚರಿಕೆಯ ಕಾದಂಬರಿ ಇದಾಗಿದೆ. ಸದ್ಯದ ರಾಜಕೀಯ ಚಿತ್ರಣವು ಬರೆಯುವ ಶೈಲಿ, ವಿಷಯವನ್ನು ಬದಲಿಸುತ್ತಿದೆ. ಬಶೀರ್ ಅವರು ಈ ಕಾದಂಬರಿಯಲ್ಲಿ ಮನಸ್ಸನ್ನು ಹಿಡಿದಿಡುವ ಪಾತ್ರ ಸೃಷ್ಟಿಸಿದ್ದಾರೆ. ಮನುಷ್ಯ ಸಂಬಂಧಗಳನ್ನು ಒಡೆಯುವ ವಿಚಾರಧಾರೆಗಳ ಮೇಲೆ ಕೇಂದ್ರೀಕರಿಸಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ಪರ ನಿಲ್ಲದೆ ಸತ್ಯದ ಪರ ನಿಂತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಚಂದ್ರಕಲಾ ನಂದಾವರ ಮಾತನಾಡಿ ಸುಳ್ಳು ಹೇಳುವವರ ಮಧ್ಯೆ ಸತ್ಯ ಹೇಳುವ ಧೈರ್ಯವನ್ನು ಕಾದಂಬರಿಕಾರ ಬಶೀರ್ ಮಾಡಿದ್ದಾರೆ. ಅವರ ಈ ಧೈರ್ಯವನ್ನು ಮೆಚ್ಚಲೇಬೇಕು. ಇದು ಕಾಲ್ಪನಿಕ ಕಾದಂಬರಿಯಲ್ಲ. ವಾಸ್ತವ ಚಿತ್ರಣವಾಗಿದೆ. ಮನುಷ್ಯ ಪ್ರೀತಿಯುಳ್ಳವರಿಗೆ ಮಾತ್ರ ಇದನ್ನು ಬರೆಯಲು ಸಾಧ್ಯ ಎಂದರು.

ಕಾದಂಬರಿಕಾರ ಬಿ.ಎಂ. ಬಶೀರ್ ಅನಿಸಿಕೆ ವ್ಯಕ್ತಪಡಿಸಿದರು. ಮಲ್ಲಿಕಾ ಶೆಟ್ಟಿ ಭಾವಗೀತೆ ಹಾಡಿದರು. ವೇದಿಕೆಯಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ದಿನೇಶ್ ನಾಯಕ್ ಉಪಸ್ಥಿತರಿದ್ದರು. ಕವಿತಾ ಪ್ರಕಾಶನದ ಗಣೇಶ ಅಮೀನಗಡ ಸ್ವಾಗತಿಸಿದರು. ಬಿ.ಎ.ಮುಹಮ್ಮದ್ ಅಲಿ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X