Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ...

ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಸಂಸ್ಥಾಪಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ11 May 2025 6:52 PM IST
share
ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆ ಶನಿವಾರ ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಡುಪಿ ಧರ್ಮಪ್ರಾಂತ್ಯದ ಪಿಆರ್‌ಒ ವಂ.ಫಾ. ಡೆನಿಸ್ ಡೆಸಾ ಅವರು ಮಾತನಾಡಿ ಸಂಸ್ಥೆಯು ಪರಂಪರೆ ಮತ್ತು ಅಡಿಪಾಯದ ಮೌಲ್ಯಗಳನ್ನು ಮುಂದುವರಿಸುವುದು , ಅತ್ಮಾವಲೋಕನ , ದೇವರಲ್ಲಿ ನಂಬಿಕೆ, ಬ್ಯಾಂಕಿನ ಸಿಬ್ಬಂದಿ ಶ್ರದ್ದೆಯಿಂದ ಮತ್ತು ಗ್ರಾಹಕರೊಂದಿಗೆ ಉತ್ತಮವಾಗಿ ವ್ಯವಹರಿಸಿದಾಗ ಸಂಸ್ಥೆಯ ಪ್ರಗತಿ ಸಾಧ್ಯ ಎಂದರು.

ಪಾನೀರ್‌ನ ದಿ ಮರ್ಸಿಡ್ ಅನಾಥಾಶ್ರಮ ಮತ್ತು ಕಂಕನಾಡಿಯ ಶಾಲೋಮ್ ಟ್ರಸ್ಟ್‌ಗೆ ಈ ಸಂದರ್ಭದಲ್ಲಿ ದೇಣಿಗೆಯನ್ನು ವಿತರಿಸಲಾಯಿತು. ಹೊಸದಾಗಿ ಸಿಎ ಪರೀಕ್ಷೇಯಲ್ಲಿ ಉತ್ತೀರ್ಣರಾದ ಗ್ರಾಹಕರ ಮಕ್ಕಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಸಂಸ್ಥಾಪಕ ಪಿ.ಎಫ್. ಎಕ್ಸ್ ಸಲ್ಡಾನ್ಹಾ ಕುಟುಂಬದ ಸದಸ್ಯರು ಮತ್ತು ವೇದಿಕೆಯಲ್ಲಿರುವ ಗಣ್ಯರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ವಂ.ಸಿ. ಕ್ಲಾರಾ ಮಿನೇಜಸ್ ಬ್ಯಾಂಕಿನ ಪ್ರಗತಿಯನ್ನು ತೋರಿಸುವ ಬುಲೆಟಿನ್ ಅನ್ನು ಬಿಡುಗಡೆ ಮಾಡಿ ಬ್ಯಾಂಕಿನ ಪ್ರಗತಿಯನ್ನು ಶ್ಲಾಘಿಸಿದರು.

ಎಂಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಡಾ. ಎಡ್ಮಂಡ್ ಜೆ.ಬಿ. ಫ್ರಾಂಕ್ , ಎಂಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ಮಾರ್ಸೆಲ್ ಎಂ.ಡಿ ಸೋಜ, ಮಂಂಗಳೂರು ಕೊಂಕಣ್ಸ್ ದುಬೈನ ಹೊಸದಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸ್ಟೀಫನ್ ಮಿನೇಜಸ್ ಮತ್ತು ಕಳೆದ 50 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಜ್ಞ ಕೌನ್ಸೆಲಿಂಗ್ ಸೆಂಟರ್‌ನ ನಿರ್ದೇಶಕಿ ಪ್ರೊ. ಹಿಲ್ಡಾ ರಾಯಪ್ಪನ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸಿಎ ಲಯ್ನಾಲ್ ನೋರೊನ್ಹಾ ಅವರು ಬ್ಯಾಂಕಿನ ಇತಿಹಾಸ, ಪ್ರಗತಿಯನ್ನು ವಿವರಿಸಿದರು.

ಬ್ಯಾಂಕಿನ ನಿರ್ದೇಶಕರಾದ ಅನಿಲ್ ಪತ್ರಾವೊ, ಆಂಡ್ರ್ಯು ಡಿ ಸೋಜ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಡಾ. ಜೆರಾಲ್ಡ್ ಪಿಂಟೊ, ಮೆಲ್ವಿನ್ ವಾಸ್, ಸಿ.ಜಿ.ಪಿಂಟೊ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜ, ಶರ್ಮಿಳಾ ಮಿನೇಜಸ್, ಫೆಲಿಕ್ಸ್ ಡಿಕ್ರುಜ್ ಮತ್ತು ಆಲ್ವಿನ್ ಪಿ. ಮೊಂತೇರೊ ಉಪಸ್ಥಿತರಿದ್ದರು.

ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿ, ಗ್ರೀಶ್ಮಾ ಸಲ್ಡಾನ್ಹಾ ನೀರ್‌ಮಾರ್ಗ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X