Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೀರು ನುಗ್ಗಿ ಮನೆಗಳಿಗೆ ಹಾನಿ: ಪರಿಹಾರ...

ನೀರು ನುಗ್ಗಿ ಮನೆಗಳಿಗೆ ಹಾನಿ: ಪರಿಹಾರ ಒದಗಿಸಲು ಸಾಮಾನ್ಯ ಸಭೆಯಲ್ಲಿ ಒತ್ತಾಯ

ಉಳ್ಳಾಲ ನಗರ ಸಭೆಯ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ20 July 2025 12:12 PM IST
share
ನೀರು ನುಗ್ಗಿ ಮನೆಗಳಿಗೆ ಹಾನಿ: ಪರಿಹಾರ ಒದಗಿಸಲು ಸಾಮಾನ್ಯ ಸಭೆಯಲ್ಲಿ ಒತ್ತಾಯ

ಉಳ್ಳಾಲ: ವಿಪರೀತ ಮಳೆ ಹಿನ್ನೆಲೆ ಎರಡನೇ ಬಾರಿ ಹಲವು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹ ವ್ಯಕ್ತಪಡಿಸಿದ ಘಟನೆ ಉಳ್ಳಾಲ ನಗರ ಸಭೆಯ ಸಾಮಾನ್ಯ ಸಭೆ ಯಲ್ಲಿ ನಡೆಯಿತು.

ನಗರಸಭೆ ಅಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಸದಸ್ಯ ಖಲೀಲ್ ಮಾತನಾಡಿ, ಮೊನ್ನೆ ಸುರಿದ ವಿಪರೀತ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದೆ. ಲಕ್ಷಾಂತರ ನಷ್ಟ ಆಗಿದೆ. ಅವರಿಗೆ‌ಪರಿಹಾರ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಗ್ರಾಮಕರಣಿಕ ಸುರೇಶ್ ಮಾತನಾಡಿ, ಮನೆಗೆ ನೀರು ನುಗ್ಗಿದ ಪ್ರಕರಣಗಳಿಗೆ ಒಂದೇ ಬಾರಿ ಪರಿಹಾರ ಕೊಡಲು ಸಾಧ್ಯ ಆಗುತ್ತದೆ. ಒಂದು ಲಕ್ಷ ರೂ. ನಷ್ಟ ಆದರೂ ಐದು ಸಾವಿರ ಮಾತ್ರ ಪರಿಹಾರ ಸಿಗುತ್ತದೆ. ಎರಡನೇ ಬಾರಿಗೆ ವರದಿ ಕಳಿಸಿದರೂ ಪರಿಹಾರ ಮಂಜೂರು ಆಗುವುದಿಲ್ಲ. ಸರ್ಕಾರದ ಆದೇಶ ಪ್ರಕಾರ ಒಂದು ಬಾರಿ ಪರಿಹಾರ ನೀಡಲಾಗುತ್ತದೆ ಎಂದರು.

ಸದಸ್ಯ ದಿನಕರ್ ಉಳ್ಳಾಲ ಮಾತನಾಡಿ, ಚೆಂಬುಗುಡ್ಡೆ ಬಳಿ ಮರ ಕಡಿಯಲು ಕಳೆದ ಸಭೆಯಲ್ಲಿ ಅರಣ್ಯಾಧಿಕಾರಿ ಯವರ ಗಮನಕ್ಕೆ ತಂದಿದ್ದೇನೆ. ಈಗ ಗುಡ್ಡ ಕುಸಿದು ಬಿದ್ದಿದ್ದು, ಮರ ಕೂಡ ಬಿದ್ದಿದೆ. ಇದರಿಂದ ಏಕಮುಖ ಸಂಚಾರ ಇದೆ. ಈ ಗುಡ್ಡದ ಮೇಲಿರುವ ಮರದಿಂದ ಅಪಾಯ ಆಗಬಹುದು ಎಂದು 2024 ನವೆಂಬರ್ 15 ರಂದು ಜಿಲ್ಲಾಧಿಕಾರಿ, ಲೋಕೋಪಯೋಗಿ, ಅರಣ್ಯ ಇಲಾಖೆ ಜೊತೆಗೆ ನಗರಸಭೆ ಗೂ ಅರ್ಜಿ ಸಲ್ಲಿಸಿದ್ದೇನೆ. ಈ ಬಗ್ಗೆ ಕ್ರಮ ಆಗದ ಕಾರಣ ಈಗ ಗುಡ್ಡ ಜರಿದು ಬೀಳುತ್ತಿದೆ.ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದರು.

ಕೌನ್ಸಿಲರ್ ಜಬ್ಬಾರ್ ಮಾತನಾಡಿ ಮಿಲ್ಲತ್ ನಗರ, ಉಳ್ಳಾಲ ಬೈಲ್ ನಲ್ಲಿ ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಇಲ್ಲಿ ರಾಜ ಕಾಲುವೆ ಇಲ್ಲ.ಕಟ್ಟಡ ಕಟ್ಟಲು ಪರವಾನಿಗೆ ನೀಡಲಾಗುತ್ತದೆ. ಹಾನಿಯಾದ ಮನೆಗಳಿಗೆ ಪರಿಹಾರ ಒಂದೇ ಬಾರಿ ಕೊಡಲಾಗುತ್ತದೆ. ಈ ಸಮಸ್ಯೆಗಳಿಗೆ ಪರಿಹಾರ ಆಗಬೇಕು ಎಂದು ಆಗ್ರಹಿಸಿದರು.

ಮಳೆ ಜೋರಾಗಿದೆ.ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ನಿಯಮ ಪ್ರಕಾರ ಎರಡು ಫೀಟ್ ರಾಜಕಾಲುವೆ ಇರಬೇಕು. ಇದನ್ನು ಸರಿಪಡಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಪೌರಾಯುಕ್ತ ನವೀನ್ ಹೆಗ್ಡೆ ಸಭೆಗೆ ತಿಳಿಸಿದರು.

ರಾಜಕಾಲುವೆ ಸಮಸ್ಯೆ ಹಲವು ಕಡೆ ಇವೆ. ಇದನ್ನು ಸರಿಪಡಿಸಲು ಮೂರು ತಿಂಗಳು ಬೇಕು. ಅಲ್ಲಿಯವರೆಗೆ ಏನು ಪರಿಹಾರ ಇದೆ ಎಂದು ಕೌನ್ಸಿಲರ್ ದಿನಕರ್ ಉಳ್ಳಾಲ ಪ್ರಶ್ನಿಸಿದರು.

ಅಳೇಕಲ, ಹಳೆಕೋಟೆ ಯಲ್ಲಿ ಕುಡಿಯುವ ನೀರು ಇಲ್ಲ. ಚರಂಡಿ ಇಲ್ಲ. ಮಳೆ ನೀರು ಹೋಗುತ್ತಿಲ್ಲ. ಎಲ್ಲರೂ ಕೆಂಪು ನೀರು ಕುಡಿಯುತ್ತಿದ್ದಾರೆ ಎಂದು ಕೌನ್ಸಿಲರ್ ಅಸ್ಗರ್ ಆರೋಪಿಸಿದರು.

ಕುಡಿಯುವ ನೀರು, ಚರಂಡಿ ಮುಂತಾದ ಸಮಸ್ಯೆಗಳಿಗೆ ಪರಿಹಾರ ಮಾಡುತ್ತೇವೆ. ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಜಾಗ ಸರ್ವೆ ಮಾಡಿ ಚರಂಡಿ ಸಮಸ್ಯೆ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ನವೀನ್ ಹೆಗ್ಡೆ ಭರವಸೆ ನೀಡಿದರು.

ಆರೋಗ್ಯ ಇಲಾಖೆ ಸಿಬ್ಬಂದಿ ಶಾರ್ಲೆಟ್ ಮಾತನಾಡಿ, ಡೆಂಗಿ, ಇಲಿಜ್ವರ ಪ್ರಕರಣ ಜಾಸ್ತಿ ಆಗಿದೆ. ಇದಕ್ಕೆ ಔಷಧಿ ಇಲ್ಲ. ನಿಯಂತ್ರಣದ ಮೂಲಕ ಮಾತ್ರ ಪರಿಹಾರ ಇದೆ. ಸೊಳ್ಳೆ ಉತ್ಪತ್ತಿ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೆರೆಬೈಲ್, ಮುಕ್ಕಚ್ಚೇರಿ ಪ್ರದೇಶದಲ್ಲಿ ನಮ್ಮ ಕ್ಲಿನಿಕ್ ಆಗಬೇಕು ಎಂದು ಮಾಹಿತಿ ನೀಡಿದರು.

ನಗರಸಭೆಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೇಂದ್ರ ಸರ್ಕಾರ ಕಮ್ಯುನಿಟಿ ಮೊಬೈಲೇಸೆರ್ಸ್ ಆಗಿ 9 ಜನ ನೇಮಕಗೊಂಡಿದ್ದಾರೆ. ಅವರಿಗೆ ಕೇಂದ್ರದ ಅನುದಾನ ದಿಂದ ಮಾಸಿಕ ಪಿಂಚಣಿ ನೀಡಲಾಗುವುದು. ಅವರಿಗೆ ಮನೆ ಮನೆಗೆ ತೆರಳಿ ಕಸ ವಿಂಗಡಣೆ ಮಾಡುವುದು, ಮಾಹಿತಿ ನೀಡುವುದು, ತೆರಿಗೆ, ನೀರಿನ ಶುಲ್ಕ ವಸೂಲಿ ಜವಾಬ್ದಾರಿ ಇದೆ. ಇವರು ನಗರಸಭೆ ವ್ಯಾಪ್ತಿಯವರೇ ಆಗಿದ್ದಾರೆ ಎಂದು ಪೌರಾಯುಕ್ತ ನವೀನ್ ಹೆಗ್ಡೆ ಸಭೆಗೆ ಮಾಹಿತಿ ನೀಡಿದರು.

ಇವರ ನೇಮಕಾತಿ ಬಗ್ಗೆ ಕೌನ್ಸಿಲರ್ ಗಳ ಗಮನಕ್ಕೆ ಬಂದಿಲ್ಲ. ಈ ವಿಚಾರ ಯಾಕೆ ತಿಳಿಸಿಲ್ಲ ಎಂದು ಪ್ರಶ್ನಿಸಿ ಕೌನ್ಸಿಲರ್ ದಿನಕರ್ ಉಳ್ಳಾಲ ತರಾಟೆಗೈದರು.

ಈ ವಿಚಾರ ನಮ್ಮ ಗಮನಕ್ಕೂ ಬಂದಿಲ್ಲ.ಅಧ್ಯಕ್ಷರ ಅನುಮತಿ ಮೇರೆಗೆ ಚರ್ಚೆ ಆಗಿಲ್ಲ ಸಭೆಯಲ್ಲಿ ಚರ್ಚೆ ಮಾಡದೇ ಅವರನ್ನು ಹೇಗೆ ನೇಮಕ ಮಾಡಿದ್ದೀರಿ ಎಂದು ಸದಸ್ಯ ಖಲೀಲ್ ಪ್ರಶ್ನಿಸಿದರು.ಈ ವಿಚಾರದಲ್ಲಿ ವ್ಯಾಪಕ ಚರ್ಚೆ ನಡೆಯಿತು.

ಸಭೆಯಲ್ಲಿ ಉಪಾಧ್ಯಕ್ಷ ಸಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X