Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೀಟ್ ಪರೀಕ್ಷೆಯಲ್ಲಿ ನ್ಯಾಯಕ್ಕೆ...

ನೀಟ್ ಪರೀಕ್ಷೆಯಲ್ಲಿ ನ್ಯಾಯಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐನಿಂದ ಸಹಿ ಸಂಗ್ರಹ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ7 July 2026 2:50 PM IST
share
ನೀಟ್ ಪರೀಕ್ಷೆಯಲ್ಲಿ ನ್ಯಾಯಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐನಿಂದ ಸಹಿ ಸಂಗ್ರಹ ಅಭಿಯಾನ

ಮಂಗಳೂರು, ಜು.7: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐ ವತಿಯಿಂದ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎನ್‌ಎಸ್‌ಯುಐ ದ.ಕ. ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ತಿಳಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಂಟು ವಿಧಾನಸಭಾ ವ್ಯಾಪ್ತಿಯ ಎನ್‌ಎಸ್‌ಯುಐ ಪದಾಧಿಕಾರಿಗಳ ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ಗಳಲ್ಲಿ ಪೋಸ್ಟ್ ಕಾರ್ಡ್‌ನಲ್ಲಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ನಡೆಸಿ ಪ್ರಧಾನ ಮಂತ್ರಿಗಳಿಗೆ ಸಲ್ಲಿಸಲಾಗುವುದು. ನೀಟ್ ಅವ್ಯವಹಾರದ ಜವಾಬ್ಧಾರಿ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುವವರೆಗೆ ಎನ್‌ಎಸ್‌ಯುಐ ವತಿಯಿಂದ ಹೋರಾಟ ಮುಂದುವರಿಯಲಿದೆ. ಆಗಸ್ಟ್ ಮೊದಲ ವಾರದಲ್ಲಿ ಎನ್‌ಎಸ್‌ಯುಐ ವತಿಯಿಂದ ಸಂಸತ್ ಚಲೋ ಕಾರ್ಯಕ್ರಮ ನಡೆಯಲಿದ್ದು, ದ.ಕ. ಜಿಲ್ಲೆಯ ಪ್ರತಿನಿಧಿಗಳು ಕೂಡಾ ಭಾಗವಹಿಸಲಿದ್ದಾರೆ ಎಂದರು.

ನೀಟ್ ಮಾತ್ರವಲ್ಲದೆ, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ‘ಚಾತ್ರೋಂ ಕಿ ಗೂಂಜ್’ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಎನ್‌ಎಸ್‌ಐಯು ಮೂಲಕ ನೀಡಲಾದ ಕ್ಯೂಆರ್ ಕೋಡ್ ಮೂಲಕ ತಮ್ಮ ಸಮಸ್ಯೆಗಳನ್ನು ರಾಷ್ಟ್ರ ಹಾಗೂ ರಾಜ್ಯದ ನಾಯಕರ ಜತೆ ಹಂಚಿಕೊಳ್ಳಬಹುದು. ಈ ಅಭಿಯಾನ ಈ ತಿಂಗಳ ಅಂತ್ಯದವರೆಗೆ ನಡೆಯಲಿದೆ ಎಂದು ಅವರು ಈ ಸಂದರ್ಭ ತಿಳಿಸಿದರು.

ವಿವಿ ಕಾಲೇಜಿನಲ್ಲಿ 2026-27ರಿಂದ ಎಂ.ಕಾಂ ರದ್ದು

ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದ ಎಂ.ಕಾಂ ರದ್ದು ಮಾಡುತ್ತಿರುವುದಾಗಿ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಂದ ದೂರು ಬಂದಿದ್ದು, ಈ ಬಗ್ಗೆ ಮಂಗಳೂರು ವಿವಿಯ ಕುಲಪತಿ ಅವರನ್ನು ಭೇಟಿ ಆಗಲು ನಿರ್ಧರಿಸಲಾಗಿದೆ. ಈ ಬಾರಿ ಹಂಪನಕಟ್ಟೆ ಕಾಲೇಜಿನ ಎಂ.ಕಾಂಗೆ ದಾಖಲಾತಿ ಕೋರಿ 40ರಷ್ಟು ಅರ್ಜಿಗಳು ಬಂದಿವೆ ಎನ್ನಲಾಗಿದೆ. ಹೀಗಿರುವಾಗ ಈ ಕೋರ್ಸನ್ನು ರದ್ದು ಮಾಡಬಾರದು. ವಿವಿ ಕುಲಪತಿಯವರಲ್ಲಿ ಈ ಬಗ್ಗೆ ವಿನಂತಿ ಮಾಡಿಕೊಂಡು ಅದು ಸಾಧ್ಯವಾಗದಿದ್ದರೆ ಮುಂದೆ ರಾಜ್ಯ ಸರಕಾರಕ್ಕೂ ಬೇಡಿಕೆ ಸಲ್ಲಿಸಲಾಗುವುದು. ಬಳಿಕ ಪ್ರತಿಭಟನೆಯ ಹಾದಿ ಹಿಡಿಯಲಿದ್ದೇವೆ ಎಂದರು.

ಕೆಲವೊಂದು ಕೋರ್ಸ್‌ಗಳು ದಾಖಲಾತಿ ಸಂಖ್ಯೆಯ ಕೊರತೆಯ ಕಾರಣದಿಂದ ರದ್ದುಪಡಿಸಲಾಗುತ್ತಿದೆ. ಆದರೆ ಎಂ.ಕಾಂಗೆ ಈ ಬಾರಿ 40 ಅರ್ಜಿಗಳು ಬಂದಿವೆ. ಹಾಗಿದ್ದರೂ ಹಂಪನಕಟ್ಟೆ ಕಾಲೇಜಿನಿಂದ ಅದನ್ನು ರದ್ದುಪಡಿಸಿ ಕೊಣಾಜೆಯ ವಿವಿಗೆ ಆ ಕೋರ್ಸನ್ನು ಸ್ಥಳಾಂತರಿಸುವುದು ಸರಿಯಲ್ಲ. ಈ ಬಗ್ಗೆ ವಿವಿಗೆ ಮನವಿ ಮಾಡಲಿದ್ದೇವೆ ಎಂದರು.

ಹಂಪಕನಕಟ್ಟೆ ಕಾಲೇಜಿಗೆ ಕಾಸರಗೋಡಿನಿಂದ ರೈಲಿನ ಮೂಲಕ ಬಹಳಷ್ಟು ವಿದ್ಯಾರ್ಥಿಗಳು ಬರುತ್ತಾರೆ. ಸುರತ್ಕಲ್, ಮುಲ್ಕಿ, ಮೂಡಬಿದ್ರೆ ಭಾಗದ ವಿದ್ಯಾರ್ಥಿಗಳಿಗೂ ಹಂಪನಕಟ್ಟೆ ಕಾಲೇಜು ಸಮೀಪವಾಗುತ್ತಿದ್ದು ಯಾವುದೇ ಕಾರಣಕ್ಕೂ ಹಂಪನಕಟ್ಟೆಯಲ್ಲಿ ಎಂ.ಕಾಂ ತರಗತಿಯನ್ನು ರದ್ದು ಪಡಿಸಬಾರದು ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.

ಗೋಷ್ಟಿಯಲ್ಲಿ ಎನ್‌ಎಸ್‌ಯುಐ ಮುಖಂಡರಾದ ಸಾಹಿಲ್ ಮಂಚಿಲ, ಅರ್ಶನ್ ಪೂಜಾರಿ, ಮೂಹಿನ್ ಕೆಂಪಿ, ಧನುಷ್ ಕುಕ್ಕೆತಿ ಸುಳ್ಯ, ಕ್ರಿಸ್ಟಿನ್ ಮಿನೇಜಸ್, ಸಂತೋಷ್ ಸುಳ್ಯ, ಸುಜನ್ ಪೂಜಾರಿ, ಝನೂನ್ ಉಪಸ್ಥಿತರಿದ್ದರು.

Tags

NSUINEET examMangaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X