Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಬೈಲೂರಿನ ಪರಶುರಾಮ ಮೂರ್ತಿ ‘ಮಾಯ’

ಕಾರ್ಕಳ ಬೈಲೂರಿನ ಪರಶುರಾಮ ಮೂರ್ತಿ ‘ಮಾಯ’

ಸ್ಥಳೀಯರು, ಕಾಂಗ್ರೆಸಿಗರಿಂದ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Oct 2023 9:33 PM IST
share
ಕಾರ್ಕಳ ಬೈಲೂರಿನ ಪರಶುರಾಮ ಮೂರ್ತಿ ‘ಮಾಯ’

ಕಾರ್ಕಳ, ಅ.13: ಭಾರೀ ವಿವಾದ ಹಾಗೂ ಕೋಟ್ಯಂತರ ರೂ.ಗಳ ಅವ್ಯವಹಾರದ ಆರೋಪಕ್ಕೆ ಸಿಲುಕಿರುವ ಕಾರ್ಕಳ ತಾಲೂಕು ಬೈಲೂರು ಸಮೀಪದ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಮೂರ್ತಿ ಇಂದು ಬೆಳಗ್ಗೆ ದಿಢೀರನೇ ‘ಮಾಯ’ವಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯರನೇಕರು ಆರೋಪಿಸುತಿದ್ದಾರೆ.

ತೀವ್ರ ಪರ ಹಾಗೂ ವಿರೋಧದ ಚರ್ಚೆಗಳಿಗೆ ಕಾರಣವಾಗಿದ್ದ ಯರ್ಲಪಾಡಿ ಗ್ರಾಪಂ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಕಳೆದ ಜ.27ರಂದು ಪ್ರತಿಷ್ಠಾಪಿಸ ಲಾಗಿತ್ತು. ಬಳಿಕ ಮೂರ್ತಿಯ ಅಸಲೀತನದ ಬಗ್ಗೆ ಭಾರೀ ವಿವಾದಗಳು, ಪ್ರತಿಭಟನೆಗಳೆಲ್ಲಾ ನಡೆದ ಬಳಿಕ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿತ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದರು. ಅವರು ಇಲ್ಲಿರುವ ಮೂರ್ತಿ ‘ನಕಲಿ’ ಎಂಬುದನ್ನು ಪರೋಕ್ಷವಾಗಿ ಪತ್ರಕರ್ತರೆದುರು ‘ಒಪ್ಪಿ’ಕೊಂಡಿದ್ದರು.

ಈ ನಡುವೆ ಪಾರ್ಕ್‌ನಲ್ಲಿ ಬಾಕಿ ಉಳಿದ ಕಾಮಗಾರಿಯಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ ಹಾಗೂ ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಮತ್ತು ಇತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ನವೆಂಬರ್ ತಿಂಗಳ ಕೊನೆಯವರೆಗೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಕಾರ್ಕಳ ತಹಶೀಲ್ದಾರರು ಕಳೆದ ವಾರ ಆದೇಶ ಹೊರಡಿಸಿದ್ದರು.

ಆದೇಶದ ಬಳಿಕ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ಬಳಿ ಯಾರೊಬ್ಬರಿಗೂ ತೆರಳಲು ಪೊಲೀಸರು ಹಾಗೂ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಇದುವರೆಗೆ ಬೈಲೂರಿನಿಂದ ಕಾರ್ಕಳದೆಡೆ ತೆರಳುವಾಗ ಬೆಟ್ಟದ ಬುಡದಲ್ಲಿ ಹಾದುಹೋಗುವ ಹೆದ್ದಾರಿಯವರೆಗೆ ಸ್ಪಷ್ಟವಾಗಿ ಕಾಣುತಿದ್ದ ಪರಶುರಾಮ ಮೂರ್ತಿಯನ್ನು ಈಗ ಕಪ್ಪು ಪ್ಲಾಸ್ಟಿಕ್ ಶೀಟುಗಳಿಂದ ಮುಚ್ಚಿ ಸಾರ್ವಜನಿಕರಿಂದ ಮರೆಮಾಚಲಾಗಿದೆ.

ಇದೀಗ ನಿನ್ನೆ ರಾತ್ರಿ ದಿಢೀರ್ ಆಗಿ ಮೂರ್ತಿಯನ್ನು ‘ನಾಪತ್ತೆ’ ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ನಾಯ ಕರು ಆರೋಪಿಸಿದ್ದಾರೆ. ಬೆಟ್ಟದ ಬುಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಕಾರ್ಕಳ ಪುರಸಭಾ ಸದಸ್ಯ ಶುಭದ ರಾವ್, ನಿನ್ನೆ ನಾವು ಇದೇ ಜಾಗದಲ್ಲಿ ನಿಂತು ಮಾಡಿದ ವಿಡಿಯೋದಲ್ಲಿ ಪರಶುರಾಮನ ಕೊಡಲಿ ಹಾಗೂ ಬಿಲ್ಲು ಕಾಣುತ್ತಿತ್ತು. ಆದರೆ ಇಂದು ನೋಡಿ ಅದೇ ಜಾಗದಲ್ಲಿ ನಿಂತು ನೋಡಿದರೆ ಎರಡೂ ಕಾಣಿಸುತ್ತಿಲ್ಲ. ಅಂದರೆ ನಿನ್ನೆ ರಾತ್ರಿಯೇ ನಕಲಿ ಮೂರ್ತಿಯನ್ನು ಅಲ್ಲಿಂದ ತೆರವು ಮಾಡಲಾಗಿದೆ ಎಂದರು.

ಇದರಿಂದ ಸ್ಪಷ್ಟವಾಗುವುದು ಏನೆಂದರೆ ಕಳೆದ ಆರೇಳು ತಿಂಗಳಿನಿಂದ ಪರಶುರಾಮನದೆಂದು ಹೇಳಲಾದ ಮೂರ್ತಿ ನಕಲಿ ಎಂಬುದು ನೂರಕ್ಕೆ ನೂರು ಸಾಬೀತಾಗಿದೆ. ಇದನ್ನು ಜನ ಅರ್ಥಮಾಡಿಕೊಳ್ಳಬೇಕು, ಏನೆಂದರೆ ಧಾರ್ಮಿಕವಾಗಿ ನಮ್ಮನ್ನು ನಂಬಿಸಿ ಮೋಸಗೊಳಿಸಲಾಗಿದೆ. ಇದು ಕಾರ್ಕಳ ಶಾಸಕರ ದ್ರೋಹದ ಕೆಲಸ. ಅವರು ನಕಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಕಂಚಿನ ಪ್ರತಿಮೆ ಎಂದು ನಮ್ಮನ್ನು ನಂಬಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದಿನ ನಮ್ಮ ನಡೆ ಎಂದರೆ, ಇಲ್ಲಿ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೊಳ್ಳುವವರೆಗೆ ನಾವು ಧರಣಿ ಮಾಡುತ್ತೇವೆ. ಪ್ರತಿಭಟನೆ ಮಾಡುತ್ತೇವೆ. ಇಲ್ಲಿ ಪರಶುರಾಮನ ಹೆಸರಿನಲ್ಲಿ ನಡೆದ ಮೋಸವನ್ನು ಜನರ ಮುಂದಿಡುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X