Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ...

ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ ಶಂಕೆ; ಎನ್ಐಎ ತನಿಖೆಗೆ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ26 April 2025 2:27 PM IST
share
ಓಂ ಪ್ರಕಾಶ್ ಹತ್ಯೆಯಲ್ಲಿ ಪಿಎಫ್ಐ ಪಾತ್ರ ಶಂಕೆ; ಎನ್ಐಎ ತನಿಖೆಗೆ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯ

ಮಂಗಳೂರು, ಎ. 26: ನಿವೃತ್ತ ಡಿಜಿಪಿ ಓಂ ಪ್ರಕಾಶ್ ರವರ ಹತ್ಯೆಯಲ್ಲಿ ಪಿಎಫ್ಐ ಪಾತ್ರವಿರುವ ಶಂಕೆ ಇದ್ದು ಈ ಬಗ್ಗೆ ಎನ್ಐಎ ತನಿಖೆ ನಡೆಸಬೇಕು ಎಂದು ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಒತ್ತಾಯಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಈ ಆರೋಪ ಮಾಡಿದ ಅವರು, ಮೃತರ ಪತ್ನಿ ಪಲ್ಲವಿಯವರು ಓಂ ಪ್ರಕಾಶ್ರವರಿಗೆ ವಾಟ್ಸಾಪ್ ಗ್ರೂಪ್ ನಲ್ಲಿ ಪಿಎಫ್ಐ ಜೊತೆ ನಂಟು ಇದ್ದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವಾಗ ಎಲ್ಲಾ ರೀತಿಯ ಕ್ರಿಮಿನಲ್ ಗಳ ಪರಿಚಯವಾಗಿರುತ್ತದೆ. ನಿವೃತ್ತರಾದ ಬಳಿಕ ಅವರಿಗೆ ಯಾವ ರೀತಿಯ ಸಂಪರ್ಕವಿತ್ತು ಎಂಬುದು ತಿಳಿಯಬೇಕಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಡಳಿತದಲ್ಲಿ ಪೊಲೀಸ್ ಇಲಾಖೆಯಲ್ಲಿ ನಿಷೇಧಿತ ಪಿಎಫ್ಐ ಸದಸ್ಯರನ್ನು ನೇಮಕ ಮಾಡಲಾಗಿದೆಯೇ ಎಂಬ ಪರಿಶೀಲನೆ ನಡೆಯಬೇಕು. ಇದಕ್ಕಾಗಿ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ವಿಧಾನಸಭೆ ಸ್ಪೀಕರ್ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಅವರು ಹೇಳಿದರು.

ಮೃತರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯವರ ಮಾನಸಿಕ ಆರೋಗ್ಯದ ಬಗ್ಗೆ ವಿಧವಿಧವಾಗಿ ಚರ್ಚೆಯಾಗುತ್ತಿದೆ. ಪೊಲೀಸರು ಮುಖ್ಯಮಂತ್ರಿ ಮತ್ತು ಗೃಹಸಚಿವರ ಅಣತಿಯಂತೆ ತನಿಖೆ ಮಾಡುತ್ತಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ. ಕೊಲೆಯಲ್ಲಿ ಮಗಳು ಕೃತಿಯ ಪಾತ್ರವಿಲ್ಲ ಎಂದು ಪಲ್ಲವಿಯವರು ಹೇಳಿದ್ದರೂ ಪೊಲೀಸರು ಯಾಕೆ ನಂಬುತ್ತಿಲ್ಲ. ಕೊಲೆ ಮಾಡಿರುವುದನ್ನು ನೋಡಿರುವ ಯಾವುದೇ ಪ್ರತ್ಯಕ್ಷ ಸಾಕ್ಷಿಗಳಿದ್ದ ಬಗ್ಗೆ ಮಾಹಿತಿ ಇಲ್ಲ. ಯಾವುದೇ ಸಿಸಿಟಿವಿ ಫೂಟೇಜ್ ಸಿಕ್ಕಿಲ್ಲ. ಕೇವಲ ಪಲ್ಲವಿಯವರ ಹೇಳಿಕೆ ಆಧರಿಸಿ ಆಕೆಯನ್ನು ಆರೋಪಿ ಮಾಡಲಾಗಿದೆ. ಪಲ್ಲವಿಯವರು ಹೇಳಿದಂತೆ ಓಂ ಪ್ರಕಾಶ್ ರವರಿಗೆ ನಂಟಿದ್ದ ಪಿಎಫ್ಐ ಸದಸ್ಯರೇ ಕೊಲೆ ಮಾಡಿ ಆಕೆಯನ್ನು ಬೆದರಿಸಿ ಬೇರೆ ಪೊಲೀಸ್ ಅಧಿಕಾರಿಯ ಪತ್ನಿಗೆ ಕರೆ ಮಾಡಿಸಿರಬಹುದು. ಕೊಲೆಯ ಬಗ್ಗೆ ಬಾಯಿ ಬಿಟ್ಟರೆ ಮಗಳು, ಮಗ ಮತ್ತು ಕುಟುಂಬದವರನ್ನು ನಾಶ ಮಾಡುವ ಬೆದರಿಕೆ ಹಾಕಿರಬಹುದು ಎಂದು ಆರೋಪಿಸಿದ ಅನುಪಮ ಶೆಣೈ, ಓಂ ಪ್ರಕಾಶ್ ರವರ ಪುತ್ರ ಕಾಂಗ್ರೆಸ್ ನೇತೃತ್ವದ ಸರಕಾರದ ಬೆದರಿಕೆ, ಆಮಿಷಕ್ಕೆ ಒಳಗಾಗದೆ ತಂದೆಯ ಸಾವಿನಿಂದ ಒಂಟಿಯಾಗಿರುವ ತಾಯಿ ಹಾಗೂ ಸಹೋದರಿಯನ್ನು ರಕ್ಷಿಸಬೇಕು ಎಂದರು.

ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಹಾಗೂ ಪಿಎಸ್ಐಗಳು ನನಗೆ ಕರೆ ಮಾಡಿ ಅಳುತ್ತಿದ್ದಾರೆ. ಇಷ್ಟು ದಿನ ಇಲಾಖೆಯಲ್ಲಿ ಮೇಲಧಿಕಾರಿಗಳ ಕಾಟವಿದ್ದರೂ ಮನೆಗೆ ಹೋಗಿ ನೆಮ್ಮದಿಯಿಂದ ಮಲಗಬಹುದಿತ್ತು. ಆದರೆ ಡಿಜಿಯವರ ಹತ್ಯೆಯಾದ ಬಳಿಕ ಮನೆಗೆ ಹೋಗಿ ಮಲಗಲೂ ಸಹ ಭಯವಾಗುತ್ತಿದೆ. ಎಲ್ಲಿ ಹೆಂಡತಿ ಚಾಕುವಿನಿಂದ ಚುಚ್ಚಿ ಬಿಡುವಳೋ ಎಂದು ಹೇಳುತ್ತಿದ್ದಾರೆ. ಪಿಎಫ್ಐ ಸದಸ್ಯರನ್ನು ರಕ್ಷಿಸುವ ಉದ್ದೇಶದಿಂದ ಡಿಜಿಪಿಯವರ ಪತ್ನಿ ಮತ್ತು ಮಗಳೂ ಸೇರಿ ಕೊಲೆ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡುವ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಪೊಲೀಸ್ ಇಲಾಖೆಯ ಸ್ಥೈರ್ಯವನ್ನೇ ಅಡಗಿಸಿದ್ದಾರೆ. ಹಿಂದೆ ಡಿವೈಎಸ್ಪಿ ಎಂ.ಕೆ. ಗಣಪತಿಯವರ ಸಾವಿನ ಸಂದರ್ಭದಲ್ಲಿಯೂ ಒಬ್ಬ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ್ದ ಮಂತ್ರಿಯನ್ನು ರಕ್ಷಿಸುವ ಉದ್ದೇಶದಿಂದ ಹೆಂಡತಿಯಿಂದ ಸತ್ತಿರುವುದಾಗಿ ಪ್ರಕರಣ ಮುಚ್ಚಲಾಗಿತ್ತು ಎಂದು ಅವರು ಆರೋಪಿಸಿದರು.

Tags

PFIOm PrakashFormer DySPAnupama ShenoyNIA investigation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X