Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಕ್ಕಳಿಗೆ ದೋಣಿ ಸ್ಪರ್ಧೆ ಏರ್ಪಡಿಸುವ...

ಮಕ್ಕಳಿಗೆ ದೋಣಿ ಸ್ಪರ್ಧೆ ಏರ್ಪಡಿಸುವ ಮೂಲಕ ರಸ್ತೆ ದುರವಸ್ಥೆ ವಿರುದ್ಧ ಪ್ರತಿಭಟನೆ

ಮುರಿಯಾಳ - ಇಳಂತಿಲ ಸಂಪರ್ಕ ರಸ್ತೆ ದುರಸ್ತಿಯಾಗಿ ಅರ್ಧ ದಶಕವೇ ಕಳೆದಿದೆ!

ವಾರ್ತಾಭಾರತಿವಾರ್ತಾಭಾರತಿ19 July 2024 2:44 PM IST
share
ಮಕ್ಕಳಿಗೆ ದೋಣಿ ಸ್ಪರ್ಧೆ ಏರ್ಪಡಿಸುವ ಮೂಲಕ ರಸ್ತೆ ದುರವಸ್ಥೆ ವಿರುದ್ಧ ಪ್ರತಿಭಟನೆ

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಕರಾಯದ ಮುರಿಯಾಳ - ಇಳಂತಿಲ ಸಂಪರ್ಕ ರಸ್ತೆಯನ್ನು ಸರಿಪಡಿಸಲು ಗ್ರಾಮಸ್ಥರು ಶುಕ್ರವಾರ ಮಕ್ಕಳಿಗೆ ದೋಣಿ ಸ್ಪರ್ಧೆ ಏರ್ಪಡಿಸುವ ಮೂಲಕ ಪ್ರತಿಭಟನೆ ನಡೆಸಿದರು.

ರಸ್ತೆಯ ಗುಂಡಿಗಳಲ್ಲಿ ನಿಂತಿದ್ದ ನೀರಿನಲ್ಲಿ ಮಕ್ಕಳು ಕಾಗದದ ದೋಣಿ ಬಿಡುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುರಿಯಾಳ - ಇಳಂತಿಲ ರಸ್ತೆಯ ಒಂದೂವರೆ ಕಿಲೋ ಮೀಟರ್ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆ ದುರಸ್ತಿ ಮಾಡದೇ ಹಲವು ವರ್ಷಗಳೇ ಕಳೆದಿದೆ. ಈ ಬಗ್ಗೆ ಪಂಚಾಯತ್ ಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ನಾನು ಈ ರಸ್ತೆಯಲ್ಲಿ ತುಂಬಾ ಸಮಯದಿಂದ ಓಡಾಡುತ್ತಿದ್ದೇನೆ. ರಸ್ತೆಯಲ್ಲಿ ಗುಂಡಿಗಳು ತುಂಬಿವೆ. ರೈತರು ಡಿಪೋ ಗಳಿಗೆ ಹಾಲು ತುಂಬಲು ಇದೇ ರಸ್ತೆ ಬಳಸುತ್ತಿದ್ದಾರೆ. ಹಲವು ಬಾರಿ ಹಾಲಿನ ಕ್ಯಾನ್ ಗಳು ರಸ್ತೆಯಲ್ಲಿ ಬಿದ್ದು ಹಾಲಿನ ಅಭಿಷೇಕವಾಗಿದೆ. ಈ ರಸ್ತೆಯನ್ನು ಬೇಗ ಸರಿಪಡಿಸಿದರೆ ಜನರಿಗೆ ಅನುಕೂಲವಾಗಲಿದೆ ಎಂದು ಪಶುವೈದ್ಯಕೀಯ ಸಿಬ್ಬಂದಿ ಸಂತೋಷ್ ಹೇಳಿದರು.

ಮದರಸಾ ಅಧ್ಯಾಪಕ ಸಿದ್ದೀಕ್ ಫೈಝಿ ಮಾತನಾಡಿ, ಈ ರಸ್ತೆಯಲ್ಲಿ ಶಾಲಾ ಕಾಲೇಜಿಗೆ ಹೋಗುವ ನೂರಾರು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಸ್ಥಳೀಯ ನಿವಾಸಿಗಳಿಗೆ ಇದೇ ರಸ್ತೆ ಸಂಪರ್ಕ ಕೊಂಡಿಯಾಗಿದೆ. ಇಲ್ಲಿ ವಾಹನದಲ್ಲಿ ಹೋಗುವುದು ಬಿಡಿ, ನಡೆದಾಡಲೂ ಸಾಧ್ಯವಿಲ್ಲ. ಆದಷ್ಟು ಬೇಗ ಈ ರಸ್ತೆಯನ್ನು ಸರಿಪಡಿಸಿ ಎಂದು ಮನವಿ ಮಾಡಿದರು.

ರಸ್ತೆ ತುಂಬಾ ಹದಗೆಟ್ಟಿರುವುದರಿಂದ ಹತ್ತು ನಿಮಿಷದ ದಾರಿಗೆ ಮುಕ್ಕಾಲು ಗಂಟೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ರಿಕ್ಷಾದಲ್ಲಿ ಪ್ರಯಾಣಿಸಲು ಬಹಳ ಕಷ್ಟದ ಸ್ಥಿತಿ ಇದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಕರೆದೊಯ್ಯುಲು ತುಂಬಾ ಕಷ್ಟ. ನಿತ್ಯ ವಾಹನಗಳು ಸಂಚರಿಸುವ ಈ ರಸ್ತೆಯನ್ನು ಬೇಗ ಸರಿಪಡಿಸಿ ಎಂದು ರಿಕ್ಷಾ ಚಾಲಕ ಟೋನಿ ಲೋಬೋ ಹೇಳಿದರು.

ಐದು ವರ್ಷಗಳ ಹಿಂದೆ ಈ ರಸ್ತೆ ರಿಪೇರಿ ಮಾಡಿದ್ದರು. ಆ ಬಳಿಕ ಇದರತ್ತ ಯಾರೂ ತಿರುಗಿ ನೋಡಿಲ್ಲ. ಪಂಚಾಯತ್ ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ರಸ್ತೆಯಲ್ಲಿ ಮಕ್ಕಳೂ ನಡೆದಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ಅಝೀಝ್ ಫೈಝಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X