Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ರಸ್ತೆ ಅಪಘಾತದಲ್ಲಿ...

ಪುತ್ತೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅರ್ಚಕರಿಗೆ ಮಸೀದಿಯಲ್ಲಿ ಉಪಚಾರ

ವಾರ್ತಾಭಾರತಿವಾರ್ತಾಭಾರತಿ10 Jan 2025 3:00 PM IST
share
ಪುತ್ತೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅರ್ಚಕರಿಗೆ ಮಸೀದಿಯಲ್ಲಿ ಉಪಚಾರ

ಪುತ್ತೂರು: ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಗಾಯಗೊಂಡಿದ್ದ ದೇವಸ್ಥಾನದ ಅರ್ಚಕರೊಬ್ಬರನ್ನು ಮಸೀದಿಯಲ್ಲಿದ್ದವರು ಮೇಲೆತ್ತಿ ಮಸೀದಿಗೆ ಕರೆದೊಯ್ದು ಉಪಚರಿಸಿದ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿರುವುದು ವರದಿಯಾಗಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದ ಅರ್ಚಕ ರಘುರಾಮ ಭಟ್ ಗಾಯಗೊಂಡವರಾಗಿದ್ದಾರೆ. ರಘುರಾಮ ಭಟ್ ಗುರುವಾರ ಸಂಜೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಉರುಳಿಬಿದ್ದಿದ್ದಾರೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಅವರು ಗಾಯಗೊಂಡಿದ್ದರು. ಇದನ್ನು ಗಮನಿಸಿದ ಮಸೀದಿಯಲ್ಲಿದ್ದವರು ರಘುರಾಮ ಭಟ್ ರನ್ನು ಮಸೀದಿಗೆ ಕರೆತಂದು ಉಪಚರಿಸಿದ್ದಾರೆ. ಅಲ್ಲಿಯೇ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಅವರ ಕಾಲಿಗೆ ಆಗಿರುವ ಗಾಯದಿಂದ ರಕ್ತ ಒಸರುತ್ತಿತ್ತು. ಈ ಹಿನ್ನೆಲೆಯಲ್ಲಿ ಆಟೊ ರಿಕ್ಷಾ ಚಾಲಕ ಬಶೀರ್ ಕಡ್ತಿಮಾರ್ ಎಂಬವರು ತನ್ನ ರಿಕ್ಷಾದಲ್ಲಿ ಕುಂಬ್ರದ ಕ್ಲಿನಿಕ್ ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಚಿಕಿತ್ಸೆ ಪಡೆದ ಬಳಿಕ ಮಸೀದಿಗೆ ಮರಳಿದ ಅರ್ಚಕರು ರಕ್ತಸ್ರಾವ ಉಂಟಾಗಿದ್ದರಿಂದ ನಿತ್ರಾಣಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 2 ಗಂಟೆ ಮಸೀದಿಯಲ್ಲೇ ವಿಶ್ರಾಂತಿ ಪಡೆದರು. ಬಳಿಕ ಮಾಹಿತಿ ಪಡೆದ ಪರಿಚಯಸ್ಥರೊಬ್ಬರು ರಘುರಾಮ ಭಟ್ ಅವರನ್ನು ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋದರು ಎಂದು ತಿಳಿದುಬಂದಿದೆ.

Tags

putturpriestMosque
share
ವಾರ್ತಾಭಾರತಿ
ವಾರ್ತಾಭಾರತಿ
Next Story
X