ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ.ಯು. ಕಾಲೇಜ್ ಗೆ 'ಮೀಫ್ 'ನಿಂದ ಅವಾರ್ಡ್

ಪುತ್ತೂರು : ಸತತ ಐದನೆಯ ಬಾರಿ ಶೇ.100 ಫಲಿತಾಂಶದೊಂದಿಗೆ ಪಿಯುಸಿ ಯಲ್ಲಿ ವಿಶೇಷ ಸಾಧನೆ ಮಾಡಿದ ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಶರೀಅತ್ , ಪಿಯು ಕಾಲೇಜ್ ಗೆ ದ.ಕ.ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟವು(ಮೀಫ್) ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರಿನ ಜೆಪ್ಪಿನಮೊಗರು ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಸ್ಕೂಲ್ ಆಡಿಟೋರಿಯಂ ನಲ್ಲಿ ಶನಿವಾರ ನಡೆದ ಮೀಫ್ ನ ವಾರ್ಷಿಕೋತ್ಸವ ಮತ್ತು ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ ದಲ್ಲಿ ಈ ಪ್ರಶಸ್ತಿ ಯನ್ನು ವಿತರಿಸಲಾಯಿತು.
ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ವಿತರಿಸಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್, ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ.ಯು.ಕಾಲೇಜ್ ಕರೆಸ್ಪಾಂಡೆಂಟ್ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ ,ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಶಾಲಾ ಶಿಕ್ಷಕ ಅಶ್ರಫ್ ಸಚಿವರಿಂದ ಪ್ರಶಸ್ತಿ ಸ್ವೀಕರಿಸಿದರು.