Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು-...

ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ರಾ.ಹೆ. ಬಂದ್ ಮಾಡಿ ಸತ್ಯಾಗ್ರಹ: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ23 Nov 2025 4:13 PM IST
share
ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ರಾ.ಹೆ. ಬಂದ್ ಮಾಡಿ ಸತ್ಯಾಗ್ರಹ: ವಾಟಾಳ್ ನಾಗರಾಜ್
ಕಾಸರಗೋಡು ಗಡಿನಾಡು ಹೋರಾಟ

ಮಂಗಳೂರು, ನ.23: ಕರ್ನಾಟಕದ ಭಾಗವಾಗಿರುವ ಕಾಸರಗೋಡಿನಲ್ಲಿ ಮಲಯಾಳೀಕರಣದ ವ್ಯವಸ್ಥಿತ ಕಾರ್ಯತಂತ್ರ ನಡೆಯುತ್ತಿದ್ದು, ಅದರ ವಿರುದ್ಧ ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ ನಡೆಯಲಿದೆ. ಅಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಂಡು ಮೂರನೇ ವಾರದಲ್ಲಿ ಮಂಗಳೂರಿನಲ್ಲಿ ರಾ.ಹೆದ್ದಾರಿ ಬಂದ್ ನಡೆಸುವ ಮೂಲಕ ಸತ್ಯಾಗ್ರಹ ನಡೆಸಲಾಗುವುದು ಎಂದರು.

ಕಾಸರಗೋಡನ್ನು ರಾಜ್ಯಕ್ಕೆ ಸೇರಿಸುವ ನಿಟ್ಟಿನಲ್ಲಿ ಕಯ್ಯಾರ ಕಿಂಞಣ್ಣ ರೈ, ಗೋವಿಂದ ಪೈ ಬಳಿಕ ಹೋರಾಟದ ಮುಖಂಡತ್ವ ಬದಿಗೆ ಸರಿದಿದೆ. ವಿಧಾನಸಭೆ, ವಿಧಾನ ಪರಿಷತ್ ಅಥವಾ ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುತ್ತಿಲ್ಲ. ಈ ನಡುವೆ ಕಾಸರಗೋಡನ್ನು ಮಲಯಾಳೀಕರಣಗೊಳಿಸುವ ಮೂಲಕ ಕನ್ನಡ ಸಂಸ್ಕೃತಿ ನಾಶ ಆಗುತ್ತಿದೆ. ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಕನ್ನಡ ಶಾಲೆಗಳಲ್ಲಿ ಮಲಯಾಳಿ ಉಪಾಧ್ಯಾಯರನ್ನು ನೇಮಕ ಮಾಡಲಾಗುತ್ತಿದೆ. ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಇಂದು ಪರ ಭಾಷೆಗಳ ದಾಳಿ ಹೆಚ್ಚಾಗುತ್ತಿದೆ. ಮಂಗಳೂರಿನ ಪರಿಸ್ಥಿತಿ ನೋಡುವಾಗ ಮುಂದೆ ಏನಾಗುವುದೋ ಎಂಬ ಆತಂಕ ಕಾಡುತ್ತಿದೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಆಗದಿದ್ದರೆ ಕನ್ನಡಿಗರು ಅಲ್ಪಸಂಖ್ಯಾತರಾಗುವ ಕಾಲ ಬರಲಿದೆ. ಐಟಿ-ಬಿಟಿಗಳವರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಇಲ್ಲಿನ ಜಮೀನು, ವಿದ್ಯುತ್ ನೀರು ಪಡೆವ ಐಟಿಬಿಟಿಗಳವರು ಉದ್ಯೋಗಕ್ಕೆ ಕನ್ನಡಿಗರನ್ನು ಕಡೆಗಣಿಸುತ್ತಿದ್ದಾರೆ. ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿಗೆ ಸುಮಾರು 11000 ಎಕರೆ ಭೂಮಿಯನ್ನು ಎಕರೆಗೆ 1.5 ಲಕ್ಷ ರೂ. ದರದಲ್ಲಿ ನೀಡಲಾಗಿದೆ. ಆದರೆ ಅಲ್ಲಿ ಎಷ್ಟು ಕನ್ನಡಿಗರನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ಕೈಗಾರಿಕೆ ಇಲಾಖೆಯವರು ನೋಡಿಲ್ಲ. ಸರೋಜಿನಿ ಮಹಿಷಿ ವರದಿ ಮೂಲೆಗುಂಪಾಗಿದೆ. ಉದ್ಯೋಗ ಮಸೂದೆಯನ್ನು ಶಾಸನ ಸಭೆಯಲ್ಲಿ ಮಂಡನೆಯಾಗಬೇಕಾಗಿತ್ತು. ಆದರೆ ಆ ಕಾರ್ಯ ಆಗಿಲ್ಲ. ಈ ನಿಟ್ಟಿನಲ್ಲಿ ಕಾಸರಗೋಡು ಸಮ್ಮೇಳನದ ಬಳಿಕ ಕಾರವಾರ, ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕನ್ನಡ ಪರ ಹೋರಾಟವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾರ್ಯದರ್ಶಿ ಕುಶಲ ಕುಮಾರ ಕೆ., ಕರ್ನಾಟ ಸಮಿತಿ ಕಾಸರಗೋಡು ಅಧ್ಯಕ್ಷ ಕೆ.ಎಂ. ಬಳ್ಳಕ್ಕುರಾಯ, ಕಾಸರಗೋಡು ಕನ್ನಡ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಕೆ. ಗುರುಪ್ರಸಾದ್ ಕೋಟೆಕಣಿ, ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ್ ಕೂಡ್ಲು, ಕನ್ನಡ ಜಾಗೃತಿ ಸಮಿತಿಯ ಕಾರ್ಯದರ್ಶಿ ಶ್ರೀಕಾಂತ ಕಾಸರಗೋಡು, ಕೇರಳ ಪ್ರಾಂತ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ. ಉಪಸ್ಥಿತರಿದ್ದರು.

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ತೆಗೆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ

ಮುಖ್ಯಮಂತ್ರಿ ಯಾರು ಬೇಕಾದರೂ ಆಗಬಹುದು. ಆದರೆ ಸಿದ್ದರಾಮಯ್ಯರನ್ನು ಈಗ ಯಾಕೆ ಬದಲಿಸಬೇಕು ಎಂಬುದಕ್ಕೆ ಉತ್ತರ ಬೇಕಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಅವರಿಗೆ ತಕ್ಕುದಾದ ವ್ಯಕ್ತಿ ಕಾಂಗ್ರೆಸ್ ನಲ್ಲಾಗಲಿ, ಬಿಜೆಪಿ ಅಥವಾ ಜೆಡಿಎಸ್ ನಲ್ಲಿ ಇಲ್ಲ. ಹಾಗಾಗಿ ಅವರ ಸ್ಥಾನಕ್ಕೆ ರಾಜಕೀಯವಾಗಿ ಬೇರೆ ಯಾರನ್ನೇ ತಂದರೂ ದೊಡ್ಡ ಕ್ರಾಂತಿ ಆಗಲಿದೆ. ಸಾವಿರಾರು ಜನ ಜೈಲಿಗೆ ಹೋಗಲು ಸಿದ್ಧ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಭಿಪ್ರಾಯಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಿ ಏಳು ವರ್ಷಗಳ ಆಡಳಿತ ನಡೆಸಿದ ಹಿರಿಮೆ ಅವರಿಗಿದೆ. ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿ 14 ಬಾರಿ ಆಯ-ವ್ಯಯ ಮಂಡಿಸಿದ್ದಾರೆ. ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಗೌರವ, ಶಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವುದು ಸಾಧುವಲ್ಲ. ಹೈಕಮಾಂಡ್ ಈ ಕಾರ್ಯಕ್ಕೆ ಕೈಹಾಕಿದರೆ ಬೆಂಕಿ ಜೊತೆ ಸರಸವಾಡಿದಂತೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X