ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಬಂಧಿತ ಆರೋಪಿಗಳ ವಿವರ ಇಲ್ಲಿದೆ...

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ವಿವರ ಇಲ್ಲಿದೆ...
► ಶಾಂತಿಗುಡ್ಡೆ ಪೇಜಾವರ ಗ್ರಾಮದ ನಿವಾಸಿ ಅಬ್ದುಲ್ ನಾಸಿರ್ ಅವರ ಪುತ್ರ ಅಬ್ದುಲ್ ಸಫ್ವಾನ್ (29). ಈತ ಚಾಲಕನಾಗಿ ದುಡಿಯುತ್ತಿದ್ದ.
► ಬಜ್ಪೆ ನಿವಾಸಿ ಅಬೂಬಕ್ಕರ್ ಅವರ ಪುತ್ರ ನಿಯಾಝ್ (28). ಈತ ಮೇಸ್ತ್ರಿ ಹೆಲ್ಪರ್ ಕೆಲಸ ಮಾಡುತ್ತಿದ್ದ.
► ಕೆಂಜಾರು ನಿವಾಸಿ ಅಬ್ದುಲ್ ರಝಾಕ್ ಅವರ ಪುತ್ರ ಮುಹಮ್ಮದ್ ಮುಝಮ್ಮಿಲ್ (32). ಸೌದಿ ಅರೇಬಿಯಾ ದಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಈತ ಕಳೆದ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದಾನೆ.
► ಕಳವಾರು ನಿವಾಸಿ ಮುಹಮ್ಮದ್ ಅವರ ಪುತ್ರ ಕಲಂದರ್ ಶಾಫಿ (31). ಈತ ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ.
► ಚಿಕ್ಕಮಗಳೂರಿನ ಕಳಸ ನಿವಾಸಿ ರಾಜೇಶ್ ಅವರ ಪುತ್ರ ರಂಜಿತ್ (19). ಈತ ಚಾಲಕನಾಗಿ ದುಡಿಯುತ್ತಿದ್ದ.
► ಚಿಕ್ಕಮಗಳೂರಿನ ಕಳಸ ನಿವಾಸಿ ಮಾರಿ ಮುತ್ತು ಅವರ ಪುತ್ರ ನಾಗರಾಜ್ (20). ಈತ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ.
► ಜೋಕಟ್ಟೆ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ರಿಝ್ವಾನ್ (28). ಈತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ.
► ಉಮರುಲ್ ಫಾರೂಕ್ ಅವರ ಪುತ್ರ ಆದಿಲ್ ಮೆಹರೂಫ್. ಈತ 2022 ರಲ್ಲಿ ಕೊಲೆಯಾದ ಫಾಝಿಲ್ ಅವರ ಸಹೋದರ.