Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜೀನಾಮೆ ವಿಚಾರ ನನಗೆ ನೇರವಾಗಿ...

ರಾಜೀನಾಮೆ ವಿಚಾರ ನನಗೆ ನೇರವಾಗಿ ಸಂಬಂಧಪಡುವುದಿಲ್ಲ: ದಿನೇಶ್ ಗುಂಡೂರಾವ್

ಸುದ್ದಿಗೋಷ್ಟಿಯ ನಡುವೆ ಮಾತನಾಡುವವರನ್ನು ಹೊರಗೆ ಕಳುಹಿಸಲು ಸೂಚಿಸಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ31 May 2025 11:15 AM IST
share
ರಾಜೀನಾಮೆ ವಿಚಾರ ನನಗೆ ನೇರವಾಗಿ ಸಂಬಂಧಪಡುವುದಿಲ್ಲ: ದಿನೇಶ್ ಗುಂಡೂರಾವ್

ಮಂಗಳೂರು, ಮೇ 31: ಯಾವುದೇ ವಿಚಾರದಿಂದ ಆಕ್ರೋಶಗೊಂಡು ಪಕ್ಷಕ್ಕೆ ರಾಜೀನಾಮೆ ನೀಡುವುದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಅದು ನೇರವಾಗಿ ನನಗೆ ಸಂಬಂಧಪಡುವುದಿಲ್ಲ. ಪಕ್ಷದ ಮುಸ್ಲಿಂ ಮುಖಂಡರ ರಾಜೀನಾಮೆ ವಿಚಾರ ನನ್ನ ಬಳಿ ಬಂದಿಲ್ಲ. ನಾನು ಸರಕಾರದ ಪ್ರತಿನಿಧಿ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಒಂದೇ ದೃಷ್ಟಿಯಿಂದ ನೋಡುತ್ತೇನೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸರಕಾರ ಎಂದ ಮೇಲೆ ನಮಗೆ ಎಲ್ಲಾ ಧರ್ಮ, ಪಕ್ಷ, ಸಂಘಟನೆಯವರೂ ಒಂದೇ. ಶಾಂತಿ ಸುವ್ಯವಸ್ಥೆ ಕಾಪಾಡುವುದು, ಗಲಭೆ ಹಾಗೂ ಹತ್ಯೆಗಳನ್ನು ನಿಲ್ಲಿಸೋದು ನನ್ನ ಮುಖ್ಯ ಜವಾಬ್ದಾರಿ. ಯಾವುದೇ ಘಟನೆ ನಡೆದಾಗ ಸ್ಥಳಕ್ಕೆ ಬರಬೇಕು ಎನ್ನುವುದನ್ನು ಸಮಯ ಪರಿಸ್ಥಿತಿ ನೋಡಿ ತೀರ್ಮಾನ ಮಾಡಲಾಗುತ್ತದೆ. ಕೆಲವರದ್ದು ಅವರವರ ಧರ್ಮದವರು ತೀರಿ ಹೋದಾಗ ಮಾತ್ರ ಆಕ್ರೋಶ. ನನಗೆ ಯಾವ ಧರ್ಮದವರೂ ತೀರಿ ಹೋದರೂ ಆಕ್ರೋಶ ಬರುತ್ತದೆ. ಕೆಲವರಿಗೆ ಈ ಸಾವುಗಳು ರಾಜಕೀಯ ಬಂಡವಾಳವಾಗಿರುತ್ತದೆ ಎಂದರು.

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರ ಜತೆ ಮಾತನಾಡುತ್ತಿದ್ದ ವೇಳೆ ಪ್ರಚೋದನಾಕಾರಿ ಭಾಷಣಗಳ ವಿಷಯದ ಚರ್ಚೆಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಮಧ್ಯ ಪ್ರವೇಶಿಸಿ "ಬಜಪೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದಲೇ ಹತ್ಯೆ ನಡೆದಿದೆ" ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಸುರಿದ ಮಳೆಯಿಂದ ಉಳ್ಳಾಲ ಕ್ಷೇತ್ರ ಹಾಗು ಮಂಗಳೂರಿನಲ್ಲಿ ಹೆಚ್ಚು ಮಳೆ ಹಾನಿಯಾಗಿದೆ. ಮೊಂಟೆಪದವಿನಲ್ಲಿ ಒಂದೇ ಕುಟುಂಬದ ಮೂರು ಮಂದಿ ಮೃತರಾಗಿದ್ದಾರೆ. ಬದುಕುಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಅಶ್ವಿನಿ ಎಂಬ ಮಹಿಳೆಯ ಪರಿಸ್ಥಿತಿಯೂ ಗಂಭೀರವಾಗಿದೆ. ಇದು ಕೆಟ್ಟ ದುರ್ಘಟನೆ. ಕಾಂಪೌಂಡ್ ಕುಸಿದು ಬಿದ್ದು ಮೃತಪಟ್ಟ ಬಾಲಕಿಯ ಕುಟುಂಬವನ್ನೂ ಭೇಟಿ ಮಾಡಿದ್ದು, ಮೃತಟ್ಟವರ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಮುಂಜಾಗೃತಾ ಕ್ರಮಗಳಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೆಲವೊಮ್ಮೆ ಅವೈಜ್ಞಾನಿಕ ಅಭಿವೃದ್ಧಿ ಕಾಮಗಾರಿ, ಮನೆ ನಿರ್ಮಾಣಗಳಿಂದಲೂ ಮಳೆಗಾಲದಲ್ಲಿ ಭೂಕುಸಿತಕ್ಕೆ ಕಾರಣವಾಗುತ್ತದೆ. ಈ ಬಗ್ಗೆ ಇಲಾಖೆಯಿಂದ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಮಳೆಗಾಲಕ್ಕೆ ಮುಂಚಿತವಾಗಿಯೇ ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ಎಚ್ಚರಿಕೆ ನೀಡಲಾಗುತ್ತದೆ. ಆದರೆ ಸ್ಥಳಾಂತರ ಮಾಡುವುದು ಮನೆಯವರ ಅನುಮತಿ ಮೇರೆಗೆ. ನಿರ್ದಿಷ್ಟವಾಗಿ ಎಲ್ಲಿ ಅನಾಹುತ ಸಂಭವಿಸುತ್ತದೆ ಎಂದು ಹೇಳಲು ಆಗದ ಕಾರಣ ಇಂತಹ ಸಂದರ್ಭಗಳಲ್ಲಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಕೂಡಾ ಕೆಲವೊಮ್ಮೆ ಅಸಾಧ್ಯವಾಗಿರುತ್ತದೆ ಎಂದರು.

ಪರಿಹಾರ ವಂಚಿತರಿಗೆ ಮಾನದಂಡಗಳ ಆಧಾರದ ಮೇಲೆ ಶೀಘ್ರ ಪರಿಹಾರ ನೀಡಲಾಗುತ್ತದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಜಿಲ್ಲೆಗೆ ಅಗತ್ಯ ಹೆಚ್ಚುವರಿ ಸುರಕ್ಷಾ ವಾಹನಗಳನ್ನು ನೀಡುವ ಬಗ್ಗೆ ಕ್ರಮ ವಹಿಸಲಾಗುತ್ತದೆ. ಒಂದು ತಿಂಗಳೊಳಗೆ ಹೆಚ್ಚುವರಿ ವಾಹನಗಳ ವ್ಯವಸ್ಥೆ ಆಗಲಿದೆ. ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದ ಕಾರ್ಯದರ್ಶಿ ಜತೆ ಮಾತುಕತೆ ನಡೆಸಲಾಗಿದ್ದು, ಅವರನ್ನು ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲು ನಿರ್ದಶಿಸಲಾಗಿದೆ ಎಂದು ಸಚಿವ ಗುಂಡೂರಾವ್ ತಿಳಿಸಿದರು.

ಸುದ್ದಿಗೋಷ್ಟಿ ಸಂದರ್ಭದಲ್ಲಿ ಮಾತನಾಡುವವರನ್ನು ಹೊರಗೆ ಕಳುಹಿಸಿ ಎಂದು ಸಚಿವರು ಗದರಿದರು. ಈ ಸಂದರ್ಭ ಐವನ್ ಡಿಸೋಜಾರವರು ಮುಖಂಡರನ್ನು ಸಮಾಧಾನಗೊಳಿಸಿದರು.

ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್‌ ಕಾರಯಕರ್ತರೊಬ್ಬರು, ಬಜಪೆ ಚಲೋದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದವರನ್ನು ಮೊದಲು ಬಂಧಿಸಲಿ. ಕೊಲ್ಲಬೇಕು ಎಂದು ಸಿನೆಮಾ ಶೈಲಿಯಲ್ಲಿ ಹೇಳಿಕೆ ನೀಡುತ್ತಾರೆ. ಯಾರ ಜೀವ ಹೋಗಬಾರದು. ದ.ಕ. ಜಿಲ್ಲೆ ಶಾಂತಿಯಿಂದ ಇರಬೇಕು ಎಬುದು ನಮ್ಮ ಉದ್ದೇಶ. ನಮ್ಮದೇ ಸರಕಾರ ಇದೆ. ಪೊಲೀಸ್ ಇಲಾಖೆಗೆ ಆದೇಶ ಕೊಟ್ಟು ತಪ್ಪು ಮಾಡಿದವರನ್ನು ಬಂಧಿಸಲಿ. ಫೇಸ್‌ಬುಕ್‌ನಲ್ಲಿ ಯಾರಾದರೂ ಸಣ್ಣ ಕವೆುಂಟ್ ಹಾಕಿದರೂ ಬಂಧಿಸುತ್ತಾರೆ. ಕೋಮು ಭಾಷಣ ಮಾಡಿ, ಪ್ರಚೋದನೆ ಮಾಡುವವರನ್ನೂ ಬಂಧಿಸಿ ನ್ಯಾಯ ಕೊಡಿ ಎಂದಷ್ಟೇ ನಾವು ಕೇಳುವುದು. ಪೊಲೀಸರು ಇಂತಹವರ ಬಗ್ಗೆ ಭಯ ಪಡುತ್ತಾರೆ. ಇದೀಗ ಜಿಲ್ಲೆಗೆ ಹೊಸ ಅಧಿಕಾರಿಗಳು ಬಂದಿದ್ದಾರೆ. ಅವರ ಮೇಲೆ ನಮಗೆ ವಿಶ್ವಾಸ ಇದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X