Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೂ.5ರಂದು ತೆಂಕುತಿಟ್ಟು ಚಿಕ್ಕ ಮೇಳಗಳ...

ಜೂ.5ರಂದು ತೆಂಕುತಿಟ್ಟು ಚಿಕ್ಕ ಮೇಳಗಳ ತಿರುಗಾಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Jun 2025 1:00 PM IST
share
ಜೂ.5ರಂದು ತೆಂಕುತಿಟ್ಟು ಚಿಕ್ಕ ಮೇಳಗಳ ತಿರುಗಾಟಕ್ಕೆ ಚಾಲನೆ

ಮಂಗಳೂರು,ಜೂ.3: ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ನೇತೃತ್ವದಲ್ಲಿ 2025ನೇ ಸಾಲಿನ ಚಿಕ್ಕಮೇಳಗಳ ತಿರುಗಾಟಕ್ಕೆ ಜೂ.5ರಂದು ಬಜ್ಪೆ ತಳಕಳ ಕಾಶೀ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಗೆಜ್ಜೆ ಮುಹೂರ್ತದೊಂದಿಗೆ ಚಾಲನೆ ನೀಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ ತಿಳಿಸಿದರು.

ತೆಂಕುತಿಟ್ಟಿನಲ್ಲಿ ಸುಮಾರು 60 ಚಿಕ್ಕಮೇಳ ತಂಡ ಇದೆ. ಈ ಪೈಕಿ 49 ತಂಡಗಳು ಒಕ್ಕೂಟದಲ್ಲಿ ನೋಂದಣಿ ಮಾಡಿಕೊಂಡಿವೆ. ಚಿಕ್ಕಮೇಳದಲ್ಲಿ ಶಿಸ್ತು, ನಿಯಮ ಇರಬೇಕು. ಅರ್ಹ ಕಲಾವದರಿಗೆ ಅನ್ಯಾಯ ಆಗಬಾರದು ಎಂಬ ದೃಷ್ಟಿಯಿಂದ ಕಳೆದ ಎರಡು ವರ್ಷಗಳ ಹಿಂದೆ ಒಕ್ಕೂಟ ಅಸ್ತಿತ್ವಕ್ಕೆ ಬಂದಿತ್ತು. ಚಿಕ್ಕಮೇಳಗಳಲ್ಲಿ ನಡೆಯುತ್ತಿದ್ದ ಕೆಲ ಅಪಸವ್ಯ, ಅನಪೇಕ್ಷಿತ ಘಟನೆಗಳು ನಡೆಯಬಾರದು ಎಂಬ ದೃಷ್ಟಿಯಿಂದ ಎಲ್ಲ ಚಿಕ್ಕಮೇಳಗಳನ್ನು ಒಗ್ಗೂಡಿಸಿ ನಿಯಮದಂತೆ ತಿರುಗಾಟ ನಡೆಸಬೇಕು ಎಂದು ಸೂಚಿಸಲಾಗಿದೆ. ಶಿಸ್ತು ಸಂಪ್ರದಾಯಕ್ಕೆ, ಸಭ್ಯತೆಗೆ ಆಡಚಣೆಯಾಗದಂತೆ ನೀತಿ ನಿಯಮಾವಳಿ ರೂಪಿಸಿಕೊಳ್ಳಲಾಗಿದೆ. ಒಕ್ಕೂಟದಲ್ಲಿ ನೋಂದಣಿಯಾದ ಎಲ್ಲ ಚಿಕ್ಕಮೇಳಗಳನ್ನು ಗೆಜ್ಜೆ ಮುಹೂರ್ತಕ್ಕೆ ಆಹ್ವಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಜೆ 5.30ರಿಂದ ರಾತ್ರಿ 10.30ರವರೆಗೆ ಚಿಕ್ಕಮೇಳಗಳ ಪ್ರದರ್ಶನ ನಡೆಯುತ್ತದೆ. ಮನೆ ಮನೆ ಯಕ್ಷಗಾನದಲ್ಲಿ 5 ಜನರ ತಂಡ ಪ್ರತಿ ಮನೆಗಳಿಗೂ ಭೇಟಿ ನೀಡಿ ಸುಮಾರು 20 ನಿಮಿಷ ದಿವ್ಯ ಸಂದೇಶ ಇರುವ ಒಂದು ಯಕ್ಷಗಾನದ ತುಣುಕನ್ನು ಪ್ರದರ್ಶಿಸಿ ಆ ಮನೆಯವರು ನೀಡುವ ದೇಣಿಗೆಯನ್ನು ಸ್ವೀಕರಿಸಿ, ಮುಂದಿನ ಮನೆಗೆ ತೆರಳುತ್ತಾರೆ.

ದ.ಕ. ಜಿಲ್ಲಾದ್ಯಂತ ಸಂಚರಿಸುವ ಬಡ ಕಲಾವಿದರ ಚಿಕ್ಕಮೇಳದ ಕಲಾ ತಂಡದಲ್ಲಿರುವ ಕಲಾವಿದರಿಗೆ ಕಾನೂನಿನಡಿಯಲ್ಲಿ ರಕ್ಷಣೆ ನೀಡಬೇಕು. ಒಕ್ಕೂಟದಲ್ಲಿ ನೋಂದಾಯಿಸದೆ ಅಶಿಸ್ತು, ಅಸಭ್ಯತೆಯ ಮೂಲಕ ನೋಂದಾಯಿತ ಚಿಕ್ಕಮೇಳದ ಒಕ್ಕೂಟದ ವ್ಯವಸ್ಥೆಗೆ ಭಂಗ ತರುವ ಅನಧಿಕೃತ ‘ಚಿಕ್ಕ ಮೇಳ’ದ ಹೆಸರಿನಲ್ಲಿ ತಿರುಗಾಟ ಮಾಡಿದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಂಡು ನೈಜ ಕಲಾವಿದರ ಬದುಕಿಗೆ ಸಹಕರಿಸಬೇಕಿದೆ. ಕಳೆದ ವರುಷ ಅನಧಿಕೃತ ಚಿಕ್ಕಮೇಳದ ಹೆಸರಿನಲ್ಲಿ ಕೆಲವು ಭಾಗಗಳಲ್ಲಿ ಅನಪೇಕ್ಷಿತ ಘಟನೆಗಳು ನಡೆದಿವೆ. ಈ ಎಲ್ಲಾ ಕಾರಣಕ್ಕಾಗಿ ಚಿಕ್ಕಮೇಳಗಳ ಒಕ್ಕೂಟದ ನಿಯಮಾವಳಿಗೆ ವಿರುದ್ಧವಾಗಿ ತಿರುಗಾಟ ಮಾಡಬಾರದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ ಎಂದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕುಮಾರ್ ಮಾಲೆಮಾರ್, ಉಪಾಧ್ಯಕ್ಷರಾದ ರಮೇಶ ಕುಲಶೇಖರ, ಮೋಹನ ಕಲಂಬಾಡಿ, ಪ್ರಮುಖರಾದ ಸುದರ್ಶನ್ ಸೂರಿಂಜೆ, ಸಂತೋಷ್, ಶರಣ್ ಪೂಜಾರಿ ತಳಕಳ ಉಪಸ್ಥಿತರಿದ್ದರು.

ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟದ ಪರವಾನಿಗೆ ಪತ್ರ ಇದ್ದವರಿಗೆ ಮಾತ್ರ ಚಿಕ್ಕಮೇಳಗಳ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಚಿಕ್ಕಮೇಳ ಮನೆಗೆ ಬಂದಾಗ ಅವರಲ್ಲಿ ಪರವಾನಿಗೆ ಪತ್ರ ಇದೆಯೇ ಎಂಬುದನ್ನು ಪರಿಶೀಲಿಸಿದ ಬಳಿಕ ಮನೆಯವರು ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಆಯಾ ಚಿಕ್ಕಮೇಳಕ್ಕೆ ನಿಗದಿಪಡಿಸಿದ ನಿರ್ದಿಷ್ಟ ವ್ಯಾಪ್ತಿ ಪ್ರದೇಶದಲ್ಲಿ ಮಾತ್ರ ತಿರುಗಾಟ ನಡೆಸಬೇಕು ಎಂದು ಸರಪಾಡಿ ಅಶೋಕ ಶೆಟ್ಟಿ ವಿನಂತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X