Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್...

ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ: ದ.ಕ. ಡಿಸಿ ದರ್ಶನ್ ಎಚ್.ವಿ

ವಾರ್ತಾಭಾರತಿವಾರ್ತಾಭಾರತಿ5 Feb 2026 7:19 PM IST
share
ಮಂಗಳೂರಿನಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ: ದ.ಕ. ಡಿಸಿ ದರ್ಶನ್ ಎಚ್.ವಿ

ಮಂಗಳೂರು: ಮಂಗಳೂರು ನಗರದಲ್ಲಿ ಹೆಲಿಕಾಪ್ಟರ್‌ಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಾಗ ನಿಗದಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ ಆನೇಕ ಆಸ್ಪತ್ರೆಗಳು ಇರುವ ಕಾರಣದಿಂದಾಗಿ ಮೆಡಿಕಲ್ ತುರ್ತು ಆವಶ್ಯಕತೆಗಳಿಗೆ , ವಿಐಪಿ ಗಳಿಗೆ, ಹೆಲಿಟ್ಯೂರಿಸಮ್‌ಗೆ ಹೆಲಿಪ್ಯಾಡ್ ಅಗತ್ಯ. ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣದಿಂದಾಗಿ ವಿಐಪಿಗಳು ಆಗಮಿಸುವಾಗ ಪ್ರತಿಬಾರಿಯೂ ಸಮಸ್ಯೆ ಎದುರಾಗುತ್ತಿದೆ. ಹೆಲಿಟೂರಿಸಮ್‌ಗೂ ಶಾಶ್ವತ ಹೆಲಿಪಾಡ್ ಹೆಚ್ಚು ಅನುಕೂಲವಾಗುತ್ತದೆ ಎಂದು ನುಡಿದರು.

*ಪಿಲಿಕುಳ ಮೃಗಾಲಯ ಬಂದ್ ಆದೇಶ ಬಂದಿಲ್ಲ: ಪಿಲಿಕುಳ ಮೃಗಾಲಯ ಬಂದ್ ಮಾಡಬೇಕೆಂದು ಹೈಕೋರ್ಟ್ ಆದೇಶ ಕೊಟ್ಟಿರುವುದು ತಮಗೆ ಗೊತ್ತಿಲ್ಲ. ಅಂತಹ ಯಾವುದೇ ಆದೇಶ ತಮಗೆ ಬಂದಿಲ್ಲ . ಪಿಲಿಕುಳದಲ್ಲಿ ಪ್ರಾಣಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದರ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಬಿಟ್ಟು ಕೊಡುವ ಪ್ರಸ್ತಾವನೆ ಇದೆ. ಅರಣ್ಯ ಇಲಾಖೆ ನಿರ್ವಹಣೆಗೆ ಒಪ್ಪಿಕೊಂಡಿದ್ದಾರೆ. ಅವರಿಗೆ ಹಸ್ತಾಂತರಿಸುವ ಮೊದಲು ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಮುಂದಿನ ವಿಚಾರದಲ್ಲಿ ಈ ಬಗ್ಗೆ ಡಿಎಫ್‌ಒ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

*ಟ್ರೇಡ್ ಲೈಸನ್ಸ್ ನಿರಾಕರಣೆ ಇಲ್ಲ: ಕನ್ನಡ ಕಡ್ಡಾಯ ಎಂದು ಹೇಳಿದರೆ ಇನ್ನೊಂದು ಭಾಷೆಯನ್ನು ಬಳಸಬಾರದು ಎಂದರ್ಥವಲ್ಲ. ಕನ್ನಡ ಭಾಷೆಯನ್ನು ಹೆಚ್ಚು ಬಳಸಲು ಉತ್ತೇಜನ ನೀಡುವುದು ಸರಕಾರದ ಉದ್ದೇಶವಾಗಿದೆ. ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಸದಿದ್ದರೆ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗುವುದು ಎಂಬ ಆದೇಶವನ್ನು ತಾನು ನೀಡಿಲ್ಲ. ಆ ರೀತಿ ಆದೇಶ ಮಾಡಲು ಸಾಧ್ಯವಾಗುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ. ಕರ್ನಾಟಕದಲ್ಲಿ ನಾಮಫಲಕಗಳು ಆಡಳಿತ ಭಾಷೆ ಕನ್ನಡದಲ್ಲಿ ಇರಬೇಕು. ಕನ್ನಡದೊಂದಿಗೆ ಸ್ಥಳೀಯ ಇತರ ಭಾಷೆಗಳನ್ನು ಬಳಸಬಾರದು ಎಂದೇನು ಇಲ್ಲ ಎಂದು ನುಡಿದರು.

*ನಂತೂರ್‌ನಲ್ಲಿ ಫ್ಲೈ ಓವರ್ ನಿರ್ಮಾಣ ಖಚಿತ: ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಫ್ಲೈವರ್ ನಿರ್ಮಿಸುವ ಪ್ರಸ್ತಾವನೆಗ ಸಂಬಂಧಿ ಸಮಗ್ರ ಯೋಜನಾ ವರದಿ ( ಡಿಪಿಆರ್) ತಯಾರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಡಿಪಿಆರ್ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಬೈಕಂಪಾಡಿ-ಕೆಐಒಸಿಎಲ್ ಮತ್ತು ನಂತೂರು- ಕೆಪಿಟಿ ಎರಡೂ ಕಡೆ ಫ್ಲೈಓವರ್ ನಿರ್ಮಾಣವಾಗುವುದು ಖಚಿತ . ಕೆಪಿಟಿಯಲ್ಲಿ ಫ್ಲೈ ಓವರ್ ರದ್ದಾಗಿದೆ ಎಂಬ ಮಾಹಿತಿ ಸರಿಯಲ್ಲಎಂದು ಸ್ಪಷ್ಟಪಡಿಸಿದರು.

* ಮಂಗಳೂರು ಪ್ರೆಸ್ ಕ್ಲಬ್‌ಗೆ ಮೊದಲ ಬಾರಿ ಭೇಟಿ ನೀಡಿದ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಪತ್ರಿಕಾ ಭವನದಲ್ಲಿನ ವ್ಯವಸ್ಥೆಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಕೆಯುಡಬ್ಲ್ಯುಜೆ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್‌ ಬಿ.ಎನ್.‌ ಸ್ವಾಗತಿಸಿದರು. ಉಪಾಧ್ಯಕ್ಷ ಮುಹಮ್ಮದ್‌ ಆರಿಫ್‌ ವಂದಿಸಿದರು.




Tags

ThinkingbuildingpermanenthelipadMangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X