Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೌಡಿ ಶೀಟರ್ ಒಬ್ಬನ ಜೀವಕ್ಕೆ ಕೊಡುವ...

ರೌಡಿ ಶೀಟರ್ ಒಬ್ಬನ ಜೀವಕ್ಕೆ ಕೊಡುವ ಕಾಳಜಿಯನ್ನು ಸರಕಾರ ಅಮಾಯಕರ ಜೀವಕ್ಕೆ ಯಾಕೆ ಕೊಡುತ್ತಿಲ್ಲ : SDPI ಪ್ರಶ್ನೆ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು: ಅನ್ವರ್ ಸಾದತ್

ವಾರ್ತಾಭಾರತಿವಾರ್ತಾಭಾರತಿ9 Jun 2025 3:38 PM IST
share
ರೌಡಿ ಶೀಟರ್ ಒಬ್ಬನ ಜೀವಕ್ಕೆ ಕೊಡುವ ಕಾಳಜಿಯನ್ನು ಸರಕಾರ ಅಮಾಯಕರ ಜೀವಕ್ಕೆ ಯಾಕೆ ಕೊಡುತ್ತಿಲ್ಲ : SDPI ಪ್ರಶ್ನೆ

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ ಕೊಲೆಯಾದ ಬಂಟ್ವಾಳ ತಾಲೂಕಿನ ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ದಲಿತ ಯುವಕ ಕೀರ್ತಿ ಮತ್ತು ಫಾಝಿಲ್ ಕೊಲೆ ಪ್ರಕರಣದ A1 ಆರೋಪಿಯಾಗಿರುವ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ರೌಡಿಶೀಟರ್ ಒಬ್ಬನ ಜೀವಕ್ಕೆ ಕೊಡುವ ಕಾಳಜಿ ಮತ್ತು ಮಹತ್ವ ಸರಕಾರ ಅಮಾಯಕ ಮುಸ್ಲಿಂ ಯುವಕರ ಜೀವಕ್ಕೆ ಯಾಕೆ ಕೊಡುತ್ತಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೇಲಿನ ಎರಡೂ ಪ್ರಕರಣ ನಡೆದಾಗ ನಮ್ಮ ಪಕ್ಷ ಸೇರಿದಂತೆ ಹಲವಾರು ಪ್ರಗತಿಪರರು,ಸಾಮಾಜಿಕ, ದಾರ್ಮಿಕ ಸಂಘಟನೆಗಳ ಮುಖಂಡರು ಆರೋಪಿಗಳ ಮೇಲೆ ಕಠಿಣ ಕಾಯ್ದೆ ದಾಖಲಿಸಿ ಉನ್ನತ ಮಟ್ಟದ ತನಿಖೆ ವಹಿಸಬೇಕೆಂದು ಒತ್ತಾಯಿಸಿದ್ದೆವು. ಆದರೆ ರಾಜ್ಯ ಸರ್ಕಾರ ಅದನ್ನು ಕಡೆಗಣಿಸಿತ್ತು ಎಂದು ಆರೋಪಿಸಿದ್ದಾರೆ.

ಅಶ್ರಫ್ ಹಾಗೂ ರಹಿಮಾನ್ ಹತ್ಯೆ ಪ್ರಕರಣವನ್ನು ಬಿಟ್ಟು ಗ್ಯಾಂಗ್ ವಾರ್ ನಿಂದ ಹತ್ಯೆಯಾದ ಕೀರ್ತಿ ಹಾಗೂ ಫಾಝಿಲ್ ಕೊಲೆಯ A1 ಆರೋಪಿಯಾಗಿರುವ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ಮಾತ್ರ ಕೇಂದ್ರ ಸರ್ಕಾರ NIA ಗೆ ಒಪ್ಪಿಸಿ ಸಂಘಪರಿವಾರ ಕಾರ್ಯಕರ್ತರನ್ನು ಮೆಚ್ಚಿಸಲು ಹೊರಟಿದೆ. ರಾಜ್ಯ ಸರ್ಕಾರ ಮೊದಲೇ ಈ ಎರಡೂ ಮುಸ್ಲಿಂ ಯುವಕರ ಕೊಲೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತ‌ನಿಖೆಗೆ ವಹಿಸಿದ್ದರೆ ಪ್ರಕರಣದಲ್ಲಿ ತಾರತಮ್ಯವಾಗುತ್ತಿರಲಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಮೂರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದ ಪರಿಣಿತ ಹಾಗೂ ಅನುಭವಿ, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ SIT ಮೂಲಕ ತನಿಖೆ ನಡೆಸಬೇಕೆಂದು ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

Tags

Anwar SadatSIT
share
ವಾರ್ತಾಭಾರತಿ
ವಾರ್ತಾಭಾರತಿ
Next Story
X