Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತ್ಯೇಕ 2 ಚೆಕ್ ಬೌನ್ಸ್‌ ಪ್ರಕರಣ:...

ಪ್ರತ್ಯೇಕ 2 ಚೆಕ್ ಬೌನ್ಸ್‌ ಪ್ರಕರಣ: ಉಡುಪಿಯ ಉದ್ಯಮಿಗಳಿಬ್ಬರಿಗೆ ದಂಡ, ಜೈಲು ಶಿಕ್ಷೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ1 May 2025 2:51 PM IST
share
ಪ್ರತ್ಯೇಕ 2 ಚೆಕ್ ಬೌನ್ಸ್‌ ಪ್ರಕರಣ: ಉಡುಪಿಯ ಉದ್ಯಮಿಗಳಿಬ್ಬರಿಗೆ ದಂಡ, ಜೈಲು ಶಿಕ್ಷೆ ಪ್ರಕಟ

ಮಂಗಳೂರು: ಎರಡು ಪ್ರತ್ಯೇಕ ಚೆಕ್ ಬೌನ್ಸ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರಿನ 9ನೇ ಜೆಎಂಎಫ್‌ಸಿ ನ್ಯಾಯಾಲಯ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದು, ದಂಡವನ್ನು ವಿಧಿಸಿದೆ. ಎರಡೂ ಪ್ರಕರಣಗಳನ್ನು ಕೇವಲ ಒಂದೇ ವರ್ಷದಲ್ಲಿ ವಿಚಾರಣೆ ನಡೆಸಲಾಗಿದ್ದು, 9ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಡಾ. ಶಿಲ್ಪಾ ಬ್ಯಾಡಗಿ ಅವರಿದ್ದ ನ್ಯಾಯಪೀಠ ಈ ಕ್ಷಿಪ್ರಗತಿಯ ತೀರ್ಪು ನೀಡಿದೆ.

ಪ್ರಕರಣಗಳ ವಿವರ:

ಉಡುಪಿಯ ಪ್ರಕಾಶ್ ಆಚಾರ್ಯ ಮಾಲಕತ್ವದ ವಿಶ್ವ ಕನ್ಸ್‌ಟ್ರಕ್ಷನ್ ಸಂಸ್ಥೆಯು ಮಂಗಳೂರಿನ ಕೆನ್ ಎಂಟರ್‌ಪ್ರೈಸಸ್‌ನವರಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಸಾಮಾಗ್ರಿಗಳನ್ನು ಪಡೆದುಕೊಂಡಿತ್ತು. ಈ ಸಾಮಾಗ್ರಿಗಳಿಗೆ ಸಂಬಂಧಿಸಿದಂತೆ ಬಾಡಿಗೆ ಹಾಗೂ ಇತರ ಮೊತ್ತವನ್ನು ಪಾವತಿಸುವಲ್ಲಿ ವಿಫಲವಾಗಿತ್ತು.

ಈ ಬಗ್ಗೆ ಸಾಕಷ್ಟು ಬಾರಿ ಹಣದ ಬೇಡಿಕೆ ಇಟ್ಟಿದ್ದರೂ ಹಣ ನೀಡದ ಹಿನ್ನೆಲೆಯಲ್ಲಿ ಭದ್ರತೆಗಾಗಿ ನೀಡಿದ್ದ ಚೆಕ್ಕನ್ನು ನಗದೀಕರಣಕ್ಕೆ ಬ್ಯಾಂಕಿಗೆ ಹಾಜರುಪಡಿಸಲಾಯಿತು. ಚೆಕ್ ಅಮಾನ್ಯಗೊಂಡ ಕಾರಣ, ಮಂಗಳೂರಿನ 9ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು.

2024ರ ಫೆಬ್ರವರಿಯಲ್ಲಿ ದಾಖಲಾದ ಪ್ರಕರಣವನ್ನು ಕ್ಷಿಪ್ರಗತಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ 14.40 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶ ಹೊರಡಿಸಿದೆ. ದಂಡದ ಮೊತ್ತ ಪಾವತಿಸುವಲ್ಲಿ ವಿಫಲರಾದರೆ, ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 14.35 ಲಕ್ಷವನ್ನು ದೂರುದಾರರಿಗೆ ನೀಡಬೇಕು. ಜೈಲು ಶಿಕ್ಷೆ ಅನುಭವಿಸಿದರೂ ದೂರುದಾರರಿಗೆ ಪರಿಹಾರ ನೀಡುವ ಬಾಧ್ಯತೆಯಿಂದ ಮುಕ್ತರಾಗುವುದಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಉಡುಪಿಯ ರವಿ ಕುಮಾರ್ ಎಂಬವರು ಮಂಗಳೂರಿನ ಕೆನ್ ಎಂಟರ್‌ಪ್ರೈಸಸ್‌ನಿಂದ ಕಟ್ಟಡ ನಿರ್ಮಾಣದ ಸಾಮಾಗ್ರಿ ಪಡೆದುಕೊಂಡು, ಅದರ ಮೊತ್ತವನ್ನು ಪಾವತಿಸಿರಲಿಲ್ಲ. ಅವರು ನೀಡಿದ್ದ ಚೆಕ್ ಅಮಾನ್ಯಗೊಂಡಿತ್ತು. ಕೆನ್‌ ಸಂಸ್ಥೆಯ ಮಾಲೀಕರು ರವಿ ಕುಮಾರ್ ಅವರ ವಿರುದ್ಧ 9ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಒಂದೇ ವರ್ಷದೊಳಗೆ ಪ್ರಕರಣವನ್ನು ಇತ್ಯರ್ಥ ಮಾಡಿದ ನ್ಯಾಯಾಲಯ, ಆರೋಪಿಗೆ 4.05 ಲಕ್ಷ ರೂ. ದಂಡ ವಿಧಿಸಿದೆ. ದಂಡ ವಿಧಿಸಲು ವಿಫಲರಾದರೆ ನಾಲ್ಕು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ 4 ಲಕ್ಷ ರೂ.ಗಳನ್ನು ದೂರುದಾರರಿಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.

ಎರಡೂ ಪ್ರಕರಣಗಳಲ್ಲಿ ದೂರುದಾರರ ಪರವಾಗಿ ಮಂಗಳೂರಿನ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಅವರು ವಾದಿಸಿದ್ದರು.

Tags

Udupibusinessmencheque bounce cases
share
ವಾರ್ತಾಭಾರತಿ
ವಾರ್ತಾಭಾರತಿ
Next Story
X