Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ | ನಕಲಿ ಚಿನ್ನಾಭರಣ ಅಡವಿಟ್ಟು...

ಉಳ್ಳಾಲ | ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ : ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Nov 2025 8:30 PM IST
share
ಉಳ್ಳಾಲ | ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ : ಆರೋಪಿಗಳ ಬಂಧನ

ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದರಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್, ಮುಹಮ್ಮದ್ ಮಿಸ್ಬಾ, ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ತಿಯಾಝ್, ಮಂಚಿಲದ ಝಹೀಮ್ ಅಹ್ಮದ್ ಬಂಧಿತರಾಗಿದ್ದು, ಹೆಜಮಾಡಿಯ ನೌಫಾಲ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕೊಣಾಜೆ ವಿವಿ ರಸ್ತೆಯಲ್ಲಿರುವ ಹಣಕಾಸು ಸಂಸ್ಥೆಯೊಂದಕ್ಕೆ ನ.22ರಂದು ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಬಂದಿದ್ದ ನೌಫಾಲ್ ಮತ್ತು ಝಹೀಮ್ ಅಹ್ಮದ್ ಎಂಬವರು 41 ಗ್ರಾಂ ತೂಗುವ ಎರಡು ಚೈನ್ ಗಳನ್ನು ಅಡವಿರಿಸಿ ಸಾಲ ಕೊಡುವಂತೆ ಕೇಳಿದ್ದಾರೆ. ಈ ಸಂದರ್ಭ ಸಂಸ್ಥೆಯ ಮಾಲಕ ದಿನೇಶ್ ರೈ ಮತ್ತು ಸಿಬ್ಬಂದಿ ನಿಕೇಶ್ ಎಂಬವರು ಆರೋಪಿಗಳು ನೀಡಿದ ಚಿನ್ನಾಭರಣ ಪರಿಶೀಲಿಸಿದಾಗ ಚಿನ್ನದ ಪರಿಶುದ್ಧತೆಯ 916 ಸಂಕೇತ ಮತ್ತು ಓರೆ ಕಲ್ಲಿನಲ್ಲಿ ಉಜ್ಜಿದಾಗಲೂ ಅಸಲಿಯಂತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಝಹೀಮ್ ಅಹ್ಮದ್ ಹೆಸರಿನಲ್ಲಿ ಆಭರಣಗಳನ್ನು ಅಡವು ಇಟ್ಟು 3 ಲಕ್ಷದ 55 ಸಾವಿರ ರೂ. ಹಣವನ್ನು ಮಾಲಕ ಸಾಲ ನೀಡಿದ್ದಾರೆ.

ನ.24ರ ಸಂಜೆ 5 ಗಂಟೆ ಹೊತ್ತಿಗೆ ಉಳ್ಳಾಲ ಮೇಲಂಗಡಿಯ ನಿವಾಸಿ ಇಮ್ತಿಯಾಝ್ ಎಂಬಾತ ಇದೇ ಹಣಕಾಸು ಸಂಸ್ಥೆಗೆ ಬಂದಿದ್ದು 55 ಗ್ರಾಂ ತೂಕದ ಎರಡು ಚೈನ್ ಮತ್ತು ಒಂದು ಬ್ರಾಸ್ಲೇಟ್ ಅಡವಿಟ್ಟು 4 ಲಕ್ಷ 80 ಸಾವಿರ ರೂಪಾಯಿ ಸಾಲ ಕೊಡುವಂತೆ ತಿಳಿಸಿದ್ದಾನೆ. ಆಭರಣ ಪರಿಶೀಲಿಸಿದಾಗ ಅದರಲ್ಲೂ 916 ಸಂಕೇತ ಮತ್ತು ಓರೆ ಕಲ್ಲಿಗೆ ಉಜ್ಜಿದಾಗ ಚಿನ್ನವೆಂದೇ ಕಂಡುಬಂದಿದೆ. ಚಿನ್ನ ಖರೀದಿ ಬಗ್ಗೆ ವಿಚಾರಿಸಿದಾಗ ದುಬೈಯ ಚಿನ್ನವೆಂದು ತಿಳಿಸಿದ್ದಾಗಿ ಹೇಳಲಾಗಿದೆ.

ಆತನ ಮಾತಿನಿಂದ ಅನುಮಾನಗೊಂಡ ಸಂಸ್ಥೆಯ ಮಾಲಕ ದಿನೇಶ್ ರೈ ಅವರು ಇಮ್ತಿಯಾಝ್ ನೀಡಿದ ಆಭರಣ ಮತ್ತು ನ.22ರಂದು ಝಹೀಮ್ ಅಹ್ಮದ್ ಅಡವಿಟ್ಟಿದ್ದ ಆಭರಣಗಳನ್ನು ಮಂಗಳೂರಲ್ಲಿ ಚಿನ್ನದ ಕೆಲಸ ಮಾಡುವ ತನ್ನ ಸ್ನೇಹಿತ ಉದಯ್ ಆಚಾರ್ಯ ಎಂಬವರ ಬಳಿ ಹೋಗಿ ಪರೀಕ್ಷಿಸಿದ್ದಾರೆ. ಈ ವೇಳೆ ಆಭರಣಗಳನ್ನು ಆ್ಯಸಿಡ್ ಲ್ಲಿನ ಮುಳುಗಿಸಿ ಬಿಸಿ ಮಾಡಿದಾಗ ನೊರೆ ಬಂದಿದ್ದು ನಕಲಿ ಎನ್ನುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಹಣಕಾಸು ಸಂಸ್ಥೆಯ ದಿನೇಶ್ ರೈ ಅವರು ಉಳ್ಳಾಲ ಠಾಣೆಯಲ್ಲಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳಾದ ಝಹೀಮ್ ಅಹ್ಮದ್, ನೌಫಾಲ್ ಹಾಗೂ ಇಮ್ತಿಯಾಝ್ ಎಂಬವರ ಮೇಲೆ ಕೇಸು ದಾಖಲಿಸಿ, ಇಮ್ತಿಯಾಝ್ ನನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆತ ನೀಡಿದ ಮಾಹಿತಿಯಾಧಾರದಲ್ಲಿ ಇತರ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಆರು ಮೊಬೈಲ್ ಫೋನ್, 47,000 ರೂಪಾಯಿ ನಗದು ಮತ್ತು 9 ಕ್ಯಾರೇಟ್ ನ 141 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X