Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೊಳಲಿ ಸೇತುವೆಯಲ್ಲಿ ವಾಹನ ಸಂಚಾರ...

ಪೊಳಲಿ ಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧ: ಸಾರ್ವಜನಿಕರಿಗೆ ತೊಂದರೆ

ವಾರ್ತಾಭಾರತಿವಾರ್ತಾಭಾರತಿ18 Aug 2024 6:42 PM IST
share
ಪೊಳಲಿ ಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧ: ಸಾರ್ವಜನಿಕರಿಗೆ ತೊಂದರೆ

ಮಂಗಳೂರು,ಆ.18: ಸುರತ್ಕಲ್-ಬಜ್ಪೆ-ಬಿ.ಸಿ.ರೋಡ್-ಕಬಕ ರಾಜ್ಯ ಹೆದ್ದಾರಿಯ ಅಡ್ಡೂರಿನ ಬಳಿಯ ಪೊಳಲಿ ಸೇತುವೆ ಯಲ್ಲಿ ಜಿಲ್ಲಾಧಿಕಾರಿಯ ಆದೇಶದಂತೆ ಘನ ವಾಹನಗಳ ಸಂಚಾರ ನಿಷೇಧಿಸಿದ ಕಾರಣ ಶಾಲಾ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಇತರ ಪ್ರಯಾಣಿಕರು ನಾನಾ ರೀತಿಯ ತೊದರೆ ಅನುಭವಿಸುವಂತಾಗಿದೆ ಎಂಬ ದೂರು ಕೇಳಿ ಬಂದಿವೆ.

ಸುಮಾರು 50-60 ವರ್ಷ ಹಳೆಯದಾದ ಈ ಸೇತುವೆ ಶಿಥಿಲಗೊಂಡಿದೆ. ಜಿಲ್ಲಾ ಮಟ್ಟದ ತಜ್ಞರ ಸಮಿತಿ ನೀಡಿರುವ ವರದಿ ಯಂತೆ ಪೊಳಲಿಯಲ್ಲಿ ಹೊಸ ಸೇತುವೆ ನಿರ್ಮಿಸವ ಅನಿವಾರ್ಯತೆ ಇದೆ. ಈ ಮಧ್ಯೆ ಆ.19ರಂದು ಸೇತುವೆ ಪರಿಶೀಲನೆ ನಡೆಸಲಿರುವ ರಾಜ್ಯ ಮಟ್ಟದ ಉನ್ನತ ತಜ್ಞರ ಸಮಿತಿಯು ಅಡ್ಡೂರಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ತಿಳಿದು ಬಂದಿದೆ.

ಪೊಳಲಿ ಸೇತುವೆಯ ಪಿಲ್ಲರ್‌ಗಳು ಹಲವು ವರ್ಷಗಳ ಬಾಳಿಕೆ ಬರುವಂತೆ ಕಂಡು ಬರುತ್ತಿವೆ. ಆದರೆ ಪಿಲ್ಲರ್‌ಗಳ ಮೇಲಿ ರುವ ಗರ್ಡರ್‌ಗಳು ಸಂಪೂರ್ಣ ಶಿಥಿಲಗೊಂಡಿವೆ. ಹಾಗಾಗಿ ತುಕ್ಕು ಹಿಡಿದಿರುವ ಗರ್ಡರ್‌ಗಳ ಬದಲಾವಣೆ ನಡೆಯಬೇಕೇ ಹೊರತು ಹೊಸ ಸೇತುವೆ ಅನಿವಾರ್ಯವಲ್ಲ. ಸೇತುವೆಯ ಪಿಲ್ಲರ್‌ಗಳು ಸಾಕಷ್ಟು ಶಕ್ತಿಶಾಲಿಯಾಗಿವೆ ಎಂದು ಅಡ್ಡೂರು ಮತ್ತು ಪೊಳಲಿಯ ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.

ಘನ ವಾಹನಗಳಲ್ಲಿ ಸರಕು ಸಾಗಾಟ: ಸೇತುವೆ ಶಿಥಿಲಗೊಳ್ಳಲು ಅವ್ಯಾಹತ ಮರಳುಗಾರಿಕೆ ಕಾರಣ ಎಂದು ಆರೋಪಿಸಿ ತ್ತಿರುವ ಸಾರ್ವಜನಿಕರು ಸೇತುವೆಯಲ್ಲಿ ಸುಮಾರು 2 ವರ್ಷದಿಂದ ಕೆಎನ್‌ಆರ್ ಸಂಸ್ಥೆಯ 10 ಚಕ್ರಗಳ ಲಾರಿಗಳಲ್ಲಿ ನಿರಂತರ 40-50 ಟನ್ ಸಾಮರ್ಥ್ಯದ ಸರಕು ಸಾಗಾಟ ಮಾಡುತ್ತಿದ್ದ ಹಾಗೂ 12 ಚಕ್ರದ ಲಾರಿಗಳಲ್ಲಿ 60 ಟನ್ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಬಗ್ಗೆ ಯಾರೂ ಧ್ವನಿ ಎತ್ತಿಲ್ಲ. ಈ ಬಗ್ಗೆ ಬಜ್ಪೆಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊ ಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಸೇತುವೆ ಪಿಲ್ಲರ್‌ಗಳ ಪಕ್ಕದಲ್ಲೇ ತುಂಬೆಯಿಂದ ಎಂಆರ್‌ಪಿಎಲ್‌ಗೆ ನೀರು ಸರಬರಾಜು ಮಾಡುವ ಭಾರೀ ಗಾತ್ರದ ಪೈಪ್ ಅಳವಡಿಸಲಾಗಿದೆ. ಇದರಿಂದ ಸೇತುವೆಗೆ ಹಾನಿ ಉಂಟಾಗಿದೆ ಎಂದು ಅಡ್ಡೂರು ಮತ್ತು ಪೊಳಲಿ ಭಾಗದ ನಾಗರಿಕರು ದೂರಿದ್ದಾರೆ.

*ಪೊಳಲಿ ಸೇತುವೆಯ ಎರಡೂ ಕಡೆ 2.75 ಮೀಟರ್ ಎತ್ತರದ ಕಮಾನ್ ಅಳವಡಿಸಲಾಗಿದೆ. ಘನ ವಾಹನಗಳ ಹೊರತುಪಡಿಸಿ ಲಘು ವಾಹನಗಳು ಸೇತುವೆ ಮೇಲೆ ಸಂಚರಿಸಲು ಅವಕಾಶವಿದೆ. ಪೊಳಲಿ ದ್ವಾರದ ಮೂಲಕ ಅಡ್ಡೂರಿಗೆ ಬರುವ ಬಸ್‌ಗಳು ಪ್ರಯಾಣಿಕರನ್ನು ಇಳಿಸುತ್ತದೆ. ಅಲ್ಲಿಂದ ಪ್ರಯಾಣಿಕರು ಸೇತುವೆಯಲ್ಲಿ ನಡೆದುಕೊಂಡು ಪೊಳಲಿಯತ್ತ ಸಾಗಬೇಕು. ಪೊಳಲಿ ದ್ವಾರದತ್ತ ಬಸ್‌ಗಳಲ್ಲಿ ಪ್ರಯಾಣಿಸುವವರೂ ಕೂಡ ಈ ಕಷ್ಟ ಅನುಭವಿಸಬೇಕು. ಇದರಿಂದ ವಿದ್ಯಾರ್ಥಿ ಗಳಿಗೆ ಸಾಕಷ್ಟು ತೊಂದರೆಯಾಗಲಿದೆ. ಎರಡೆರಡು ಟಿಕೆಟ್ ಪಡೆಯಬೇಕಾಗುತ್ತದೆ. ಈ ವ್ಯವಸ್ಥೆ ಎಷ್ಟು ಸಮಯ ಮುಂದುವರಿಯಲಿದೆ ಎಂಬುದು ಗೊತ್ತಿಲ್ಲ.ಆದರೆ ಜಿಲ್ಲಾಡಳಿತ ಈಗ ತೆಗೆದುಕೊಂಡಿರುವ ನಿರ್ಧಾರ ಗಮನಿಸಿದಾಗ ಈ ವ್ಯವಸ್ಥೆ ಸುಮಾರು ಐದಾರು ವರ್ಷ ಮುಂದುವರಿಯುವ ಲಕ್ಷಣ ಕಂಡು ಬರುತ್ತಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X