Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ | ಭಾರೀ ಸ್ಫೋಟದ ಶಬ್ದ;...

ವಿಟ್ಲ | ಭಾರೀ ಸ್ಫೋಟದ ಶಬ್ದ; ಬೆಚ್ಚಿಬಿದ್ದ ಜನತೆ

ಹಲವು ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ4 March 2025 4:24 PM IST
share
ವಿಟ್ಲ | ಭಾರೀ ಸ್ಫೋಟದ ಶಬ್ದ; ಬೆಚ್ಚಿಬಿದ್ದ ಜನತೆ

ವಿಟ್ಲ: ಮಂಗಳವಾರ ಮಧ್ಯಾಹ್ನದ ವೇಳೆಗೆ ವಿಟ್ಲ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದ ಸದ್ದು ಕೇಳಿಬಂದಿತ್ತು. ಇದರಿಂದ ಜನರು ಆತಂಕಕ್ಕೆ ಒಳಗಾದ ಘಟನೆ ನಡೆದಿದೆ.

ಭೂಕಂಪನ ಸಂಭವಿಸಿದೆ ಎಂದೇ ಆ ಪ್ರದೇಶದ ಜನರು ಭಾವಿಸಿದ್ದರು. ಬಳಿಕ ವಿಟ್ಲಮುಡ್ನೂರು ಗ್ರಾಮದ ಮಾಡತ್ತಡ್ಕದ ಕ್ವಾರಿಯಲ್ಲಿ ಶೇಖರಿಸಿದ್ದ ಸ್ಫೋಟಕ ವಸ್ತುಗಳು ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದೆ.

ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿರುವ ಎನ್ ಎಸ್ ಕ್ವಾರೆಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಪೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಪೋಟಗೊಂಡಿದೆ.

ಈ ಘಟನೆ ವಿಟ್ಲ ಪೇಟೆ ಸೇರಿ ಆಸುಪಾಸಿನ ಜನರನ್ನು ಬೆಚ್ಚಿಬೀಳಿಸಿದೆ. ಸುಮಾರು 4 ಕಿ.ಮೀ. ವ್ಯಾಪ್ತಿಯ ಮನೆಗಳಿಗೆ ಹಾನಿಯಾಗಿದ್ದು, ನೂರು ಮೀಟರು ದೂರದಲ್ಲಿರುವ ಎರಡು ಮನೆಗಳ ಛಾವಣಿ, ಕಿಟಕಿ ಸೇರಿ ಹಲವು ವಸ್ತುಗಳು ಜಖಂಗೊಂಡಿದೆ.

ಸಮೀಪದಲ್ಲೇ ಘಟನೆ ನಡೆದಿದ್ದು, ಕಲ್ಲಿನ ರಾಶಿಯ ನಡುವಿನಲ್ಲಿ ಒಂದು ಬಾಕ್ಸ್ ಡೆಟೋನೇಟರ್ಸ್ ಹಾಗೂ 200 ಜೆಲಿಟಿನ್ ಕಡ್ಡಿಗಳನ್ನು ಒಟ್ಟಿಗೇ ಇಡಲಾಗಿತ್ತೆನ್ನಲಾಗಿದೆ. ಸುಮಾರ್ 1:30ರ ಸುಮಾರಿಗೆ ಏಕಾಏಕಿ ಸ್ಪೋಟಗೊಂಡಿದೆ. ಸ್ಪೋಟ ನಡೆದ ಸ್ಥಳದಿಂದ ಸುಮಾರು ನೂರು ಮೀಟರ್ ದೂರದಲ್ಲಿದ್ದ ಈಶ್ವರ ನಾಯ್ಕ ಹಾಗೂ ಅವರ ಪುತ್ರ ವಸಂತ ಮೋಹನ್ ಅವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. 1ಕಿ. ಮೀ. ಆಸುಪಾಸಿನ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ.

ಮನೆಗಳಲ್ಲಿನ ವಸ್ತುಗಳು ಎಲ್ಲೆಂದರಲ್ಲಿ ಬಿದ್ದು, ಹೆಂಚಿನ ಚಾವಣಿಯ ಕಟ್ಟಡಗಳಲ್ಲಿ ಹೆಂಚು ಸ್ಥಾನಪಲ್ಲಟವಾಗಿದೆ. ಕಿಟಕಿಯ ಗಾಜು ಪುಡಿಯಾಗಿದ್ದು, ಛಾವಣಿಗೆ ಹಾಸಿದ ಸಿಮೆಂಟ್ ಶೀಟ್ ಚೆಲ್ಲಾಪಿಲ್ಲಿಯಾಗಿದೆ. ಸೀಲಿಂಗ್ ಗೆ ಹಾಸು ತುಂಡಾಗಿ ಕೇಳಗೆ ಬಿದ್ದಿದೆ. ಕೆಲವು ಮನೆಯ ಟಿವಿ ಕೆಲಸ ಮಾಡುತ್ತಿಲ್ಲ. ಮನೆಗಳ ಕಿಟಕಿ ಪ್ರೇಮ್ ತುಂಡಾಗಿ ಬಿದ್ದಿದೆ. ವಿಟ್ಲ ಪೇಟೆಯ ಹಲವು ಕಡೆಯಲ್ಲಿ ವಸ್ತುಗಳು ಕಪಾಟುಗಳಿಂದ ನೆಲಕ್ಕುರುಳಿದೆ. ಮನೆಯ ಪಿಲ್ಲರ್ ಗಳು ಬಿರುಕು ಬಿಟ್ಟಿದೆ.

ಕೋರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಕಲ್ಲಿನ ರಾಶಿಯಿದ್ದು, ಇದರ ತಪ್ಪಲು ಪ್ರದೇಶದಲ್ಲಿ ಯಾರಿಗೂ ಕಾಣದ ರೀತಿಯಲ್ಲಿ ದಾಸ್ತಾನು ಇರಿಸಲಾಗಿದ್ದು, ಇದರ ಸ್ಪೋಟಕ್ಕೆ ಅಕ್ಕಪಕ್ಕದ ಬಯಲು ಪ್ರದೇಶದಲ್ಲಿದ್ದ ಮುಳಿ ಹುಲ್ಲು ಬೆಂಕಿಗೆ ಆಹುತಿಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಯತೀಶ್ ಎನ್., ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್, ಕಂದಾಯ ನಿರೀಕ್ಷಕ ರವಿ ಎಂ.ಎನ್., ಸಹಾಯಕ ಗಿರೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಜಯ ಕೆ., ಗಣಿ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆಯಿಂದ 20 ಮೀಟರ್ ನಲ್ಲಿ ಗಣಿಗಾರಿಕೆ ನಡೆಸಲಾಗುತ್ತಿದೆ. ಹಲವು ಬಾರಿ ದೂರು ನೀಡಿದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ . ದೂರು ನೀಡಿದರೆ ನಮಗೆ ಸೇರಿದ್ದಲ್ಲ ಎಂದು ಪೊಲೀಸರು ಜಾರಿಕೊಳ್ಳುತ್ತಾರೆ ಎಂದು ಸ್ಥಳೀಯರು ಆರೋಪಿಸಿದರು.

ಈ ಸಂದರ್ಭ ಪೊಲೀಸ್ ಅಧೀಕ್ಷಕ ಯತೀಶ್ ಅವರು 20 ಮೀಟರ್ ದೂರದಲ್ಲಿರುವ ಗಣಿಯ ಮಾಹಿತಿಯನ್ನು ಪಡೆದುಕೊಂಡು ವರದಿಯನ್ನು ನೀಡಿ ಎಂದು ವಿಟ್ಲ ಪೊಲೀಸ್ ನಿರೀಕ್ಷಕರಿಗೆ ಆದೇಶಿದ್ದಾರೆ. ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಅಗತ್ಯ ಕ್ರಮಕ್ಕೆ ಶಿಫಾರಸು ಮಾಡುತ್ತೇವೆ ಎಂದರು.

ಕ್ವಾರಿಯಲ್ಲಿ ಕಲ್ಲು ಸ್ಪೋಟಿಸುವುದಕ್ಕೆ ತಂದಿದ್ದ ಸ್ಪೋಟಕಗಳನ್ನು ಇಟ್ಟು ಊಟಕ್ಕೆ ತೆರಳಿದ ಸಂದರ್ಭದಲ್ಲಿ ಬಿಸಿಲಿನ ತೀವ್ರತೆಗೆ ಸ್ಪೋಟಗೊಂಡಿದೆ. ಅಕ್ಕಮಕ್ಕದ ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಪೋಟಗಳನ್ನು ತಂದು ಬೇಜವಾಬ್ದಾರಿ ತನದಿಂದ ಇಟ್ಟು ಹೋದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರಗಿಸುತ್ತೇವೆ ಎಂದು ಜಿಲ್ಲಾ ಎಸ್ಪಿ ಯತೀಶ್ ಎನ್ ತಿಳಿಸಿದ್ದಾರೆ.

ಈ ಘಟನೆಯ ತೀವ್ರತೆ ವಿಟ್ಲ ಪೇಟೆ, ಕೊಳಂಬೆ, ಕಂಬಳಬೆಟ್ಟು, ಚಂದಳಿಕೆ, ಮೊದಲಾದ ವ್ಯಾಪ್ತಿಯ ವರೆಗೆ ಭೂಮಿ ಕಂಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X