ವಿಟ್ಲ: ಹಲ್ಲೆ ಪ್ರಕರಣ; ದೂರು- ಪ್ರತಿ ದೂರು ದಾಖಲು
![ವಿಟ್ಲ: ಹಲ್ಲೆ ಪ್ರಕರಣ; ದೂರು- ಪ್ರತಿ ದೂರು ದಾಖಲು ವಿಟ್ಲ: ಹಲ್ಲೆ ಪ್ರಕರಣ; ದೂರು- ಪ್ರತಿ ದೂರು ದಾಖಲು](https://www.varthabharati.in/h-upload/2024/04/03/1258026-2b2008f3-85c4-409f-9f5d-267d2784fe45.webp)
ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕ ಸಮೀಪ ನಡೆದ ಘರ್ಷಣೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ.ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ತನ್ನ ಮನೆಯಲ್ಲಿರುವ ಸಮಯ, ಆರೋಪಿ ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾನು ತಂದಿದ್ದ ಕತ್ತಿಯಿಂದ ಹಲ್ಲೆ ನಡೆಸಿರುತ್ತಾನೆ. ಈ ವೇಳೆ ಸ್ಥಳೀಯರು ಬರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಅಲಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ನಿವಾಸಿ ಗಣೇಶ್ (29) ರವರು ಆರೋಪಿ ಮಹಮ್ಮದ್ ಅಲಿ ರವರ ವಿರುದ್ದ ʼಚೂರಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿʼ ನೀಡಿದ ಪ್ರತಿದೂರಿನಂತೆ, ವಿಟ್ಲ ಪೊಲೀಸ್ ಠಾಣೆ ಅ.ಕ್ರ 60/2024 ಕಲಂ: 341,504, 307,324,506 IPC ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.