Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಕ್ ಗೆ ಸ್ನೇಹ ಹಸ್ತದ ವಾಜಪೇಯಿ...

ಪಾಕ್ ಗೆ ಸ್ನೇಹ ಹಸ್ತದ ವಾಜಪೇಯಿ ನಿರ್ಧಾರಕ್ಕೆ ನಾವು ಬೆಲೆ ತೆರ ಬೇಕಾಯಿತು : ಚಕ್ರವರ್ತಿ ಸೂಲಿಬೆಲೆ

ವಿಎಚ್‌ಪಿ ಶೌರ್ಯ ಜಾಗರಣ ರಥಯಾತ್ರೆ ಮಂಗಳೂರು ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ9 Oct 2023 9:58 PM IST
share
ಪಾಕ್ ಗೆ ಸ್ನೇಹ ಹಸ್ತದ ವಾಜಪೇಯಿ ನಿರ್ಧಾರಕ್ಕೆ ನಾವು ಬೆಲೆ ತೆರ ಬೇಕಾಯಿತು : ಚಕ್ರವರ್ತಿ ಸೂಲಿಬೆಲೆ

ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಾಕಿಸ್ತಾನದ ಜೊತೆ ಸ್ನೇಹ ಹಸ್ತ ಚಾಚುವ ನಿರ್ಧಾರ ಅದಕ್ಕೆ ನಾವು ಬೆಲೆ ತೆರಬೇಕಾಯಿತು. ಆದರೆ ದೇಶದ ಪ್ರಧಾನಿ ಮೋದಿಯಾದ ಬಳಿಕ ಪರಿಸ್ಥಿತಿ ಬದಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಾಕಿಸ್ತಾನದ ಬಗ್ಗೆ ತೆಗೆದುಕೊಂಡ ನಿರ್ಧಾರವನ್ನು ಟೀಕಿಸಿ ಪ್ರಧಾನಿ ಮೋದಿಯ ನಿರ್ಧಾರಗಳನ್ನು ಹೊಗಳಿದರು.

ಬಜರಂಗದಳ ನೇತೃತ್ವದಲ್ಲಿ ಸೆ.25ರಿಂದ ಚಿತ್ರದುರ್ಗದಿಂದ ಆರಂಭಗೊಂಡ ಶೌರ್ಯ ಜಾಗರಣ ರಥಯಾತ್ರೆ ಸೋಮವಾರ ಮಂಗಳೂರಿಗೆ ಆಗಮಿಸಿದ ಸಂದರ್ಭ ಮಂಗಳೂರಿನ ಕದ್ರಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಇಸ್ರೇಲ್ -ಹಮಾಸ್ ನಡುವಿನ ಯುದ್ಧದ ಬಗ್ಗೆ ಪ್ರಸ್ತಾಪಿಸಿದ ಸೂಲಿಬೆಲೆ ಭಾರತದ ನರೇಂದ್ರ ಮೋದಿ ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಇಸ್ರೇಲ್ ಕೂಡಾ ಮೋದಿಯವರಿಗೆ ಗೌರವ ನೀಡಿದೆ. ನೆಹರೂ ಕಾಲದಲ್ಲಿ ಭಾರತ ಪ್ಯಾಲೆಸ್ತಿನ್ ಪರ ವಹಿಸಿತ್ತು. ಇಸ್ರೇಲ್ ನ್ನು ಬೆಂಬಲಿಸಲಿಲ್ಲ ಎಂದು ಸೂಲಿಬೆಲೆ ನೆಹರು ನಿರ್ಧಾರವನ್ನು ಟೀಕಿಸಿದರು.

ಸ್ಟಾಲಿನ್ ಮಂಗಳೂರಿನಲ್ಲಿ ಸನಾತನ ಧರ್ಮ ನಾಶಮಾಡಬೇಕು ಎಂದು ಹೇಳಿಕೆ ನೀಡಿದ್ದರೆ ಬಹುಶಃ ವಾಪಾಸು ಹೋಗಲು ಸಾಧ್ಯವಿರಲಿಲ್ಲ ಇಲ್ಲಿ ಬಜರಂಗದಳ ಸಂಘಟನೆ ಅಷ್ಟು ಬಲಿಷ್ಠವಾಗಿದೆ ಎಂದು ನಮೋ ಬ್ರಿಗೇಡ್ ನ ಮುಖಂಡ ಚಕ್ರವರ್ತಿ ಸೂಲಿಬೆಲೆ ಟೀಕಿಸಿದ್ದಾರೆ.

ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಶಕ್ತಿ ಗುರುಪೀಠದ ಮುಕ್ತಾನಂದ ಶ್ರೀ ಮಾತನಾಡುತ್ತಾ, ಮಂಗಳೂರಿನಲ್ಲಿ ಬಜರಂಗದಳದ 500ಕ್ಕೂ ಹೆಚ್ಚು ಘಟಕಗಳ ಅಗತ್ಯವಿದೆ. ಸಂತರು ರಾಜಕೀಯ ಪಕ್ಷ ಗಳ ಒಲೈಕೆಗಾಗಿ ಇರುವವರಲ್ಲ. ಭಾರತ ದೇಶವನ್ನು ಭಯೋತ್ಪಾದಕರಿಂದ ಮುಕ್ತ ಮಾಡಬೇಕಾಗಿದೆ. ಪ್ರಾಣಿ ಹುಲಿಯ ಬದಲು ದನವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಮಾಡಬೇಕು ಎಂದು ತಾನು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ವಿಎಚ್ ಪಿ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾತನಾಡುತ್ತಾ, ಬಜರಂಗದಳ ಹುಟ್ಟಿರುವುದೇ ಸಂಘರ್ಷಕ್ಕಾಗಿ. ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದ್ದರೆ ಅದಕ್ಕೆ ತಕ್ಕ ಪ್ರತಿಕಾರ ನೀಡು ತ್ತಿದ್ದೆವು ಎಂದರು.

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೆರವಣಿಗೆಗೆ ಚಾಲನೆ ನೀಡಿದರು. ವಿಎಚ್ ಪಿ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಆರ್ ಎಸ್ ಎಸ್ ಮಂಗಳೂರು ಪ್ರಾಂತದ ಸಹ ಸಂಘ ಸಂಚಾಲಕ ಸುನೀಲ್ ಆಚಾರ್, ವಿಎಚ್ ಪಿ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿಯ ಅಧ್ಯಕ್ಷ ಗಿರಿಧರ ಶೆಟ್ಟಿ, ವಿಎಚ್ ಪಿ ಜಿಲ್ಲಾ ಕಾರ್ಯ ದರ್ಶಿ ಶಿವಾನಂದ ಮೆಂಡನ್, ಬಜರಂಗದಳದ ಜಿಲ್ಲಾ ಸಂಯೋಜಕ ನವೀನ್ ಮೂಡುಶೆಡ್ಡೆ ಮೊದಲಾದವರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X